AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದನ್ನು ಮರೆತುಬಿಡಿ’; ‘ಜನ ಗಣ ಮನ’ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ದೇವರಕೊಂಡ

‘ಜನ ಗಣ ಮನ’ ಸಿನಿಮಾಗಾಗಿ ಈಗಾಗಲೇ 8 ಕೋಟಿ ರೂಪಾಯಿಗೂ ಅಧಿಕ ವೆಚ್ಛ ಮಾಡಲಾಗಿದೆ. ಈ ಸಿನಿಮಾದ ಮುಹೂರ್ತ ನಡೆದಿತ್ತು. ಅಲ್ಲದೆ, ಕೆಲ ದೃಶ್ಯದ ಶೂಟಿಂಗ್ ಕೂಡ ಮಾಡಲಾಗಿತ್ತು. ಈಗ ಈ ಹಣವೂ ವ್ಯರ್ಥವಾಗಿದೆ.

‘ಅದನ್ನು ಮರೆತುಬಿಡಿ’; ‘ಜನ ಗಣ ಮನ’ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ದೇವರಕೊಂಡ
ವಿಜಯ್
TV9 Web
| Edited By: |

Updated on: Sep 12, 2022 | 3:58 PM

Share

ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಲೈಗರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುವಲ್ಲಿ ವಿಫಲ ಆಗಿದೆ. ಈ ಸಿನಿಮಾ ವಿಮರ್ಶೆಯಲ್ಲೂ ಸೋತಿದೆ. ಅವರ ಜನಪ್ರಿಯತೆಗೆ ಈ ಸೋಲು ಸಾಕಷ್ಟು ಹೊಡೆತ ನೀಡಿದೆ. ವಿಜಯ್ ದೇವರಕೊಂಡ ಅವರು ಅಂದುಕೊಂಡ ಯಾವ ಜಾದೂ ಕೂಡ ಈ ಸಿನಿಮಾದಿಂದ ಆಗಿಲ್ಲ. ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಅವರ ತಪ್ಪು ಲೆಕ್ಕಾಚಾರವೇ ಇದಕ್ಕೆಲ್ಲ ಕಾರಣ ಎಂದು ಅನೇಕರು ಆರೋಪಿಸಿದ್ದಿದೆ. ಈಗ ಇವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿ ಬರಬೇಕಿದ್ದ ‘ಜನ ಗಣ ಮನ’ ಸಿನಿಮಾ ಮೇಲೂ ಈ ಸೋಲು ಪ್ರಭಾವ ಬೀರಿದೆ. ಈ ಸಿನಿಮಾ ಬಗ್ಗೆ ಕೇಳಿದ ಪ್ರಶ್ನೆಗೆ ವಿಜಯ್ ಉತ್ತರಿಸುವುದಕ್ಕೂ ನಿರಾಕರಿಸಿದ್ದಾರೆ.

‘ಲೈಗರ್’ ಚಿತ್ರಕ್ಕಾಗಿ ವಿಜಯ್ ದೇವರಕೊಂಡ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಅವರು ಈ ಚಿತ್ರಕ್ಕಾಗಿ ಮೂರ್ನಾಲ್ಕು ವರ್ಷ ಮೀಸಲಿಟ್ಟಿದ್ದರು. ಆದರೆ, ಈ ಶ್ರಮ ನೀರಿನಲ್ಲಿ ಹೋಮ ಮಾಡಿದಂತೆ ಆಗಿದೆ. ಇದು ವಿಜಯ್ ದೇವರಕೊಂಡ ಅವರಿಗೆ ಬೇಸರ ಮೂಡಿಸಿದೆ. ಈ ಕಾರಣಕ್ಕೆ ‘ಲೈಗರ್’ ಬಳಿಕ ಅವರು ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಈಗ ‘ಸೈಮಾ’ ಅವಾರ್ಡ್ಸ್​​ಗೆ ವಿಜಯ್ ಆಗಮಿಸಿದ್ದರು. ಈ ವೇಳೆ ಮಾಧ್ಯಮವನ್ನು ಅವರು ಎದುರುಗೊಂಡರು.

‘ಲೈಗರ್’ ಬಳಿಕ ವಿಜಯ್ ಹಾಗೂ ಪುರಿ ಜಗನ್ನಾಥ್ ಅವರು ‘ಜನ ಗಣ ಮನ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿತ್ತು. ಆದರೆ, ‘ಲೈಗರ್’ ಸೋತ ಕಾರಣ ‘ಜನ ಗಣ ಮನ’ ಸಿನಿಮಾ ಸೆಟ್ಟೇರುವುದಿಲ್ಲ ಎನ್ನಲಾಗಿತ್ತು. ಈ ಬಗ್ಗೆ ವಿಜಯ್​ಗೆ ಪ್ರಶ್ನೆ ಎದುರಾಗಿದೆ. ಆದರೆ, ಇವರು ಪ್ರಶ್ನೆಗೆ ಉತ್ತರಿಸಿಲ್ಲ.

ಇದನ್ನೂ ಓದಿ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Image
Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
Image
Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ

‘ಜನ ಗಣ ಮನ ಸಿನಿಮಾ ಸೆಟ್ಟೇರುವುದಿಲ್ಲವಂತೆ ನಿಜವೇ?’ ಎಂದು ಮಾಧ್ಯಮದವರು ವಿಜಯ್​ಗೆ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ವಿಜಯ್, ‘ಅದನ್ನೆಲ್ಲ ಮರೆತುಬಿಡಿ. ನಾವು ಇಲ್ಲಿ ಬಂದಿದ್ದು ಸೈಮಾ ಅವಾರ್ಡ್​ಗಾಗಿ. ಈ ಕಾರ್ಯಕ್ರಮವನ್ನು ಎಂಜಾಯ್ ಮಾಡೋಣ’ ಎಂದಿದ್ದಾರೆ ವಿಜಯ್. ಅವರ ಈ ಉತ್ತರ ಅನೇಕರಿಗೆ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ‘ಪುನೀತಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ನೀಡಿದ್ದಾರೆ’: ವಿಜಯ್ ದೇವರಕೊಂಡ

‘ಜನ ಗಣ ಮನ’ ಸಿನಿಮಾಗಾಗಿ ಈಗಾಗಲೇ 8 ಕೋಟಿ ರೂಪಾಯಿಗೂ ಅಧಿಕ ವೆಚ್ಛ ಮಾಡಲಾಗಿದೆ. ಈ ಸಿನಿಮಾದ ಮುಹೂರ್ತ ನಡೆದಿತ್ತು. ಅಲ್ಲದೆ, ಕೆಲ ದೃಶ್ಯದ ಶೂಟಿಂಗ್ ಕೂಡ ಮಾಡಲಾಗಿತ್ತು. ಈಗ ಈ ಹಣವೂ ವ್ಯರ್ಥವಾಗಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ