AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದನ್ನು ಮರೆತುಬಿಡಿ’; ‘ಜನ ಗಣ ಮನ’ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ದೇವರಕೊಂಡ

‘ಜನ ಗಣ ಮನ’ ಸಿನಿಮಾಗಾಗಿ ಈಗಾಗಲೇ 8 ಕೋಟಿ ರೂಪಾಯಿಗೂ ಅಧಿಕ ವೆಚ್ಛ ಮಾಡಲಾಗಿದೆ. ಈ ಸಿನಿಮಾದ ಮುಹೂರ್ತ ನಡೆದಿತ್ತು. ಅಲ್ಲದೆ, ಕೆಲ ದೃಶ್ಯದ ಶೂಟಿಂಗ್ ಕೂಡ ಮಾಡಲಾಗಿತ್ತು. ಈಗ ಈ ಹಣವೂ ವ್ಯರ್ಥವಾಗಿದೆ.

‘ಅದನ್ನು ಮರೆತುಬಿಡಿ’; ‘ಜನ ಗಣ ಮನ’ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ದೇವರಕೊಂಡ
ವಿಜಯ್
TV9 Web
| Edited By: |

Updated on: Sep 12, 2022 | 3:58 PM

Share

ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಲೈಗರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುವಲ್ಲಿ ವಿಫಲ ಆಗಿದೆ. ಈ ಸಿನಿಮಾ ವಿಮರ್ಶೆಯಲ್ಲೂ ಸೋತಿದೆ. ಅವರ ಜನಪ್ರಿಯತೆಗೆ ಈ ಸೋಲು ಸಾಕಷ್ಟು ಹೊಡೆತ ನೀಡಿದೆ. ವಿಜಯ್ ದೇವರಕೊಂಡ ಅವರು ಅಂದುಕೊಂಡ ಯಾವ ಜಾದೂ ಕೂಡ ಈ ಸಿನಿಮಾದಿಂದ ಆಗಿಲ್ಲ. ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಅವರ ತಪ್ಪು ಲೆಕ್ಕಾಚಾರವೇ ಇದಕ್ಕೆಲ್ಲ ಕಾರಣ ಎಂದು ಅನೇಕರು ಆರೋಪಿಸಿದ್ದಿದೆ. ಈಗ ಇವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿ ಬರಬೇಕಿದ್ದ ‘ಜನ ಗಣ ಮನ’ ಸಿನಿಮಾ ಮೇಲೂ ಈ ಸೋಲು ಪ್ರಭಾವ ಬೀರಿದೆ. ಈ ಸಿನಿಮಾ ಬಗ್ಗೆ ಕೇಳಿದ ಪ್ರಶ್ನೆಗೆ ವಿಜಯ್ ಉತ್ತರಿಸುವುದಕ್ಕೂ ನಿರಾಕರಿಸಿದ್ದಾರೆ.

‘ಲೈಗರ್’ ಚಿತ್ರಕ್ಕಾಗಿ ವಿಜಯ್ ದೇವರಕೊಂಡ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಅವರು ಈ ಚಿತ್ರಕ್ಕಾಗಿ ಮೂರ್ನಾಲ್ಕು ವರ್ಷ ಮೀಸಲಿಟ್ಟಿದ್ದರು. ಆದರೆ, ಈ ಶ್ರಮ ನೀರಿನಲ್ಲಿ ಹೋಮ ಮಾಡಿದಂತೆ ಆಗಿದೆ. ಇದು ವಿಜಯ್ ದೇವರಕೊಂಡ ಅವರಿಗೆ ಬೇಸರ ಮೂಡಿಸಿದೆ. ಈ ಕಾರಣಕ್ಕೆ ‘ಲೈಗರ್’ ಬಳಿಕ ಅವರು ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಈಗ ‘ಸೈಮಾ’ ಅವಾರ್ಡ್ಸ್​​ಗೆ ವಿಜಯ್ ಆಗಮಿಸಿದ್ದರು. ಈ ವೇಳೆ ಮಾಧ್ಯಮವನ್ನು ಅವರು ಎದುರುಗೊಂಡರು.

‘ಲೈಗರ್’ ಬಳಿಕ ವಿಜಯ್ ಹಾಗೂ ಪುರಿ ಜಗನ್ನಾಥ್ ಅವರು ‘ಜನ ಗಣ ಮನ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿತ್ತು. ಆದರೆ, ‘ಲೈಗರ್’ ಸೋತ ಕಾರಣ ‘ಜನ ಗಣ ಮನ’ ಸಿನಿಮಾ ಸೆಟ್ಟೇರುವುದಿಲ್ಲ ಎನ್ನಲಾಗಿತ್ತು. ಈ ಬಗ್ಗೆ ವಿಜಯ್​ಗೆ ಪ್ರಶ್ನೆ ಎದುರಾಗಿದೆ. ಆದರೆ, ಇವರು ಪ್ರಶ್ನೆಗೆ ಉತ್ತರಿಸಿಲ್ಲ.

ಇದನ್ನೂ ಓದಿ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Image
Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
Image
Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ

‘ಜನ ಗಣ ಮನ ಸಿನಿಮಾ ಸೆಟ್ಟೇರುವುದಿಲ್ಲವಂತೆ ನಿಜವೇ?’ ಎಂದು ಮಾಧ್ಯಮದವರು ವಿಜಯ್​ಗೆ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ವಿಜಯ್, ‘ಅದನ್ನೆಲ್ಲ ಮರೆತುಬಿಡಿ. ನಾವು ಇಲ್ಲಿ ಬಂದಿದ್ದು ಸೈಮಾ ಅವಾರ್ಡ್​ಗಾಗಿ. ಈ ಕಾರ್ಯಕ್ರಮವನ್ನು ಎಂಜಾಯ್ ಮಾಡೋಣ’ ಎಂದಿದ್ದಾರೆ ವಿಜಯ್. ಅವರ ಈ ಉತ್ತರ ಅನೇಕರಿಗೆ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ‘ಪುನೀತಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ನೀಡಿದ್ದಾರೆ’: ವಿಜಯ್ ದೇವರಕೊಂಡ

‘ಜನ ಗಣ ಮನ’ ಸಿನಿಮಾಗಾಗಿ ಈಗಾಗಲೇ 8 ಕೋಟಿ ರೂಪಾಯಿಗೂ ಅಧಿಕ ವೆಚ್ಛ ಮಾಡಲಾಗಿದೆ. ಈ ಸಿನಿಮಾದ ಮುಹೂರ್ತ ನಡೆದಿತ್ತು. ಅಲ್ಲದೆ, ಕೆಲ ದೃಶ್ಯದ ಶೂಟಿಂಗ್ ಕೂಡ ಮಾಡಲಾಗಿತ್ತು. ಈಗ ಈ ಹಣವೂ ವ್ಯರ್ಥವಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ