AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ

ಜಸ್ಟಿನ್ ಬೀಬರ್ ಅವರು ಜುಲೈ 4ರಂದು ಮುಂಬೈಗೆ ಆಗಮಿಸಿದ್ದಾರೆ. 30 ವರ್ಷದ ಈ ಗಾಯಕ ಒಂದು ದಿನದ ಕಾರ್ಯಕ್ರಮಕ್ಕೆ ಚಾರ್ಜ್ ಮಾಡುತ್ತಿರುವ ಹಣದ ಮೊತ್ತ ಕೇಳಿ ಅನೇಕರು ದಂಗಾಗಿದ್ದಾರೆ. ಇವರು ಸುಮಾರು ಬರೋಬ್ಬರಿ 83.51 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದಾರೆ.

ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ
ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ
ರಾಜೇಶ್ ದುಗ್ಗುಮನೆ
|

Updated on: Jul 05, 2024 | 8:05 AM

Share

ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಮದುವೆ ಅದ್ದೂರಿಯಾಗಿ ನೆರವೇರುತ್ತಿದೆ. ಅವರು ರಾಧಿಕಾ ಮರ್ಚಂಟ್​ನ ಜುಲೈ 12ರಂದು ವಿವಾಹ ಆಗಲಿದ್ದಾರೆ. ಇಂದು (ಜುಲೈ 5) ಮುಂಬೈನಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ. ಅನೇಕ ಅಂತಾರಾಷ್ಟ್ರೀಯ ಸಿಂಗರ್​ಗಳು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕೆನಡಾದ ಖ್ಯಾತ ಗಾಯಕ ಜಸ್ಟಿನ್ ಬೀಬರ್ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಅವರು ಸಂಗೀತ ಕಾರ್ಯಕ್ರಮದಲ್ಲಿ ಹಾಡನ್ನು ಹಾಡಲಿದ್ದಾರೆ. ಇದಕ್ಕೆ ಅವರು ಪಡೆದ ಸಂಭಾವನೆ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ.

ಜುಲೈ 4ರಂದು ಜಸ್ಟಿನ್ ಬೀಬರ್ ಅವರು ಮುಂಬೈಗೆ ಆಗಮಿಸಿದ್ದಾರೆ. 30 ವರ್ಷದ ಈ ಗಾಯಕ ಒಂದು ದಿನದ ಕಾರ್ಯಕ್ರಮಕ್ಕೆ ಚಾರ್ಜ್ ಮಾಡುತ್ತಿರುವ ಹಣದ ಮೊತ್ತ ಕೇಳಿ ಅನೇಕರು ದಂಗಾಗಿದ್ದಾರೆ. ಇವರು ಸುಮಾರು 10 ಮಿಲಿಯನ್ ಅಮೆರಿಕನ್ ಡಾಲರ್ ಚಾರ್ಜ್ ಮಾಡಿದ್ದಾರೆ. ಅಂದರೆ ಭಾರತದ ರೂಪಾಯಿಗೆ ಲೆಕ್ಕ ಹಾಕಿದರೆ ಅವರ ಸಂಭಾವನೆ ಬರೋಬ್ಬರಿ 83.51 ಕೋಟಿ ರೂಪಾಯಿ.

ರಾಧಿಕಾ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನೇಕ ವಿದೇಶಿ ಗಾಯಕರು ಹಾಡಿದ್ದಾರೆ. ವಿವಾಹ ಪೂರ್ವ ಕಾರ್ಯಕ್ರಮಗಳೇ ಇಷ್ಟೊಂದು ಅದ್ದೂರಿಯಾಗಿ ನಡೆದಿರುವಾಗ ಇನ್ನು ವಿವಾಹ ಪೂರ್ವ ಕಾರ್ಯಕ್ರಮಗಳಲ್ಲೂ ಅದ್ದೂರಿತನ ಇರುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮುಖದ ಪಾರ್ಶ್ವವಾಯುಗೆ ಕೋವಿಡ್-19 ಲಸಿಕೆ ಕಾರಣ ಎಂದು ಹೇಳಿದ್ದಾರೆಯೇ ಜಸ್ಟಿನ್ ಬೀಬರ್?

ಜಸ್ಟಿನ್ ಬೀಬರ್​ಗೆ ಸಾಕಷ್ಟು ಜನಪ್ರಿಯತೆ ಇದೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 29.3 ಕೋಟಿ ಹಿಂಬಾಲಕರು ಇದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಸಾಕ್ಷಿ. 2022ರಲ್ಲಿ ಜಸ್ಟಿನ್ ಬೀಬರ್​ ಮುಖಕ್ಕೆ ಪಾರ್ಶವಾಯು ಆಗಿತ್ತು. ಹೀಗಾಗಿ ಅವರ ಅನೇಕ ಶೋಗಳು ಕ್ಯಾನ್ಸಲ್ ಆಗಿತ್ತು. ಈಗ ಅವರು ಇದರಿಂದ ಚೇತರಿಕೆ ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ