AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ

ಜಸ್ಟಿನ್ ಬೀಬರ್ ಅವರು ಜುಲೈ 4ರಂದು ಮುಂಬೈಗೆ ಆಗಮಿಸಿದ್ದಾರೆ. 30 ವರ್ಷದ ಈ ಗಾಯಕ ಒಂದು ದಿನದ ಕಾರ್ಯಕ್ರಮಕ್ಕೆ ಚಾರ್ಜ್ ಮಾಡುತ್ತಿರುವ ಹಣದ ಮೊತ್ತ ಕೇಳಿ ಅನೇಕರು ದಂಗಾಗಿದ್ದಾರೆ. ಇವರು ಸುಮಾರು ಬರೋಬ್ಬರಿ 83.51 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದಾರೆ.

ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ
ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ
ರಾಜೇಶ್ ದುಗ್ಗುಮನೆ
|

Updated on: Jul 05, 2024 | 8:05 AM

Share

ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಮದುವೆ ಅದ್ದೂರಿಯಾಗಿ ನೆರವೇರುತ್ತಿದೆ. ಅವರು ರಾಧಿಕಾ ಮರ್ಚಂಟ್​ನ ಜುಲೈ 12ರಂದು ವಿವಾಹ ಆಗಲಿದ್ದಾರೆ. ಇಂದು (ಜುಲೈ 5) ಮುಂಬೈನಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ. ಅನೇಕ ಅಂತಾರಾಷ್ಟ್ರೀಯ ಸಿಂಗರ್​ಗಳು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕೆನಡಾದ ಖ್ಯಾತ ಗಾಯಕ ಜಸ್ಟಿನ್ ಬೀಬರ್ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಅವರು ಸಂಗೀತ ಕಾರ್ಯಕ್ರಮದಲ್ಲಿ ಹಾಡನ್ನು ಹಾಡಲಿದ್ದಾರೆ. ಇದಕ್ಕೆ ಅವರು ಪಡೆದ ಸಂಭಾವನೆ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ.

ಜುಲೈ 4ರಂದು ಜಸ್ಟಿನ್ ಬೀಬರ್ ಅವರು ಮುಂಬೈಗೆ ಆಗಮಿಸಿದ್ದಾರೆ. 30 ವರ್ಷದ ಈ ಗಾಯಕ ಒಂದು ದಿನದ ಕಾರ್ಯಕ್ರಮಕ್ಕೆ ಚಾರ್ಜ್ ಮಾಡುತ್ತಿರುವ ಹಣದ ಮೊತ್ತ ಕೇಳಿ ಅನೇಕರು ದಂಗಾಗಿದ್ದಾರೆ. ಇವರು ಸುಮಾರು 10 ಮಿಲಿಯನ್ ಅಮೆರಿಕನ್ ಡಾಲರ್ ಚಾರ್ಜ್ ಮಾಡಿದ್ದಾರೆ. ಅಂದರೆ ಭಾರತದ ರೂಪಾಯಿಗೆ ಲೆಕ್ಕ ಹಾಕಿದರೆ ಅವರ ಸಂಭಾವನೆ ಬರೋಬ್ಬರಿ 83.51 ಕೋಟಿ ರೂಪಾಯಿ.

ರಾಧಿಕಾ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನೇಕ ವಿದೇಶಿ ಗಾಯಕರು ಹಾಡಿದ್ದಾರೆ. ವಿವಾಹ ಪೂರ್ವ ಕಾರ್ಯಕ್ರಮಗಳೇ ಇಷ್ಟೊಂದು ಅದ್ದೂರಿಯಾಗಿ ನಡೆದಿರುವಾಗ ಇನ್ನು ವಿವಾಹ ಪೂರ್ವ ಕಾರ್ಯಕ್ರಮಗಳಲ್ಲೂ ಅದ್ದೂರಿತನ ಇರುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮುಖದ ಪಾರ್ಶ್ವವಾಯುಗೆ ಕೋವಿಡ್-19 ಲಸಿಕೆ ಕಾರಣ ಎಂದು ಹೇಳಿದ್ದಾರೆಯೇ ಜಸ್ಟಿನ್ ಬೀಬರ್?

ಜಸ್ಟಿನ್ ಬೀಬರ್​ಗೆ ಸಾಕಷ್ಟು ಜನಪ್ರಿಯತೆ ಇದೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 29.3 ಕೋಟಿ ಹಿಂಬಾಲಕರು ಇದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಸಾಕ್ಷಿ. 2022ರಲ್ಲಿ ಜಸ್ಟಿನ್ ಬೀಬರ್​ ಮುಖಕ್ಕೆ ಪಾರ್ಶವಾಯು ಆಗಿತ್ತು. ಹೀಗಾಗಿ ಅವರ ಅನೇಕ ಶೋಗಳು ಕ್ಯಾನ್ಸಲ್ ಆಗಿತ್ತು. ಈಗ ಅವರು ಇದರಿಂದ ಚೇತರಿಕೆ ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ