ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ

ಜಸ್ಟಿನ್ ಬೀಬರ್ ಅವರು ಜುಲೈ 4ರಂದು ಮುಂಬೈಗೆ ಆಗಮಿಸಿದ್ದಾರೆ. 30 ವರ್ಷದ ಈ ಗಾಯಕ ಒಂದು ದಿನದ ಕಾರ್ಯಕ್ರಮಕ್ಕೆ ಚಾರ್ಜ್ ಮಾಡುತ್ತಿರುವ ಹಣದ ಮೊತ್ತ ಕೇಳಿ ಅನೇಕರು ದಂಗಾಗಿದ್ದಾರೆ. ಇವರು ಸುಮಾರು ಬರೋಬ್ಬರಿ 83.51 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದಾರೆ.

ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ
ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ
Follow us
|

Updated on: Jul 05, 2024 | 8:05 AM

ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಮದುವೆ ಅದ್ದೂರಿಯಾಗಿ ನೆರವೇರುತ್ತಿದೆ. ಅವರು ರಾಧಿಕಾ ಮರ್ಚಂಟ್​ನ ಜುಲೈ 12ರಂದು ವಿವಾಹ ಆಗಲಿದ್ದಾರೆ. ಇಂದು (ಜುಲೈ 5) ಮುಂಬೈನಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಬಾಲಿವುಡ್​ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ. ಅನೇಕ ಅಂತಾರಾಷ್ಟ್ರೀಯ ಸಿಂಗರ್​ಗಳು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕೆನಡಾದ ಖ್ಯಾತ ಗಾಯಕ ಜಸ್ಟಿನ್ ಬೀಬರ್ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಅವರು ಸಂಗೀತ ಕಾರ್ಯಕ್ರಮದಲ್ಲಿ ಹಾಡನ್ನು ಹಾಡಲಿದ್ದಾರೆ. ಇದಕ್ಕೆ ಅವರು ಪಡೆದ ಸಂಭಾವನೆ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ.

ಜುಲೈ 4ರಂದು ಜಸ್ಟಿನ್ ಬೀಬರ್ ಅವರು ಮುಂಬೈಗೆ ಆಗಮಿಸಿದ್ದಾರೆ. 30 ವರ್ಷದ ಈ ಗಾಯಕ ಒಂದು ದಿನದ ಕಾರ್ಯಕ್ರಮಕ್ಕೆ ಚಾರ್ಜ್ ಮಾಡುತ್ತಿರುವ ಹಣದ ಮೊತ್ತ ಕೇಳಿ ಅನೇಕರು ದಂಗಾಗಿದ್ದಾರೆ. ಇವರು ಸುಮಾರು 10 ಮಿಲಿಯನ್ ಅಮೆರಿಕನ್ ಡಾಲರ್ ಚಾರ್ಜ್ ಮಾಡಿದ್ದಾರೆ. ಅಂದರೆ ಭಾರತದ ರೂಪಾಯಿಗೆ ಲೆಕ್ಕ ಹಾಕಿದರೆ ಅವರ ಸಂಭಾವನೆ ಬರೋಬ್ಬರಿ 83.51 ಕೋಟಿ ರೂಪಾಯಿ.

ರಾಧಿಕಾ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನೇಕ ವಿದೇಶಿ ಗಾಯಕರು ಹಾಡಿದ್ದಾರೆ. ವಿವಾಹ ಪೂರ್ವ ಕಾರ್ಯಕ್ರಮಗಳೇ ಇಷ್ಟೊಂದು ಅದ್ದೂರಿಯಾಗಿ ನಡೆದಿರುವಾಗ ಇನ್ನು ವಿವಾಹ ಪೂರ್ವ ಕಾರ್ಯಕ್ರಮಗಳಲ್ಲೂ ಅದ್ದೂರಿತನ ಇರುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮುಖದ ಪಾರ್ಶ್ವವಾಯುಗೆ ಕೋವಿಡ್-19 ಲಸಿಕೆ ಕಾರಣ ಎಂದು ಹೇಳಿದ್ದಾರೆಯೇ ಜಸ್ಟಿನ್ ಬೀಬರ್?

ಜಸ್ಟಿನ್ ಬೀಬರ್​ಗೆ ಸಾಕಷ್ಟು ಜನಪ್ರಿಯತೆ ಇದೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 29.3 ಕೋಟಿ ಹಿಂಬಾಲಕರು ಇದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಸಾಕ್ಷಿ. 2022ರಲ್ಲಿ ಜಸ್ಟಿನ್ ಬೀಬರ್​ ಮುಖಕ್ಕೆ ಪಾರ್ಶವಾಯು ಆಗಿತ್ತು. ಹೀಗಾಗಿ ಅವರ ಅನೇಕ ಶೋಗಳು ಕ್ಯಾನ್ಸಲ್ ಆಗಿತ್ತು. ಈಗ ಅವರು ಇದರಿಂದ ಚೇತರಿಕೆ ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ