AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸೂರ್ಯ ಬಗ್ಗೆ ಕೀಳು ಕಮೆಂಟ್ ನೋಡಿ ಕಿಸಿಕಿಸಿ ನಕ್ಕ ಪತ್ನಿ ಜ್ಯೋತಿಕಾ; ಬುದ್ಧಿ ಹೇಳಿದ ಜನ

ನಟಿ ಜ್ಯೋತಿಕಾ ಅವರು ಮಾಡಿದ ಒಂದೇ ಒಂದು ಕಮೆಂಟ್​ ಮೂಲಕ ವಿವಾದ ಉಂಟಾಗಿದೆ. ಗಂಡನ ಬಗ್ಗೆ ಬಂದ ನೆಗೆಟಿವ್ ಕಮೆಂಟ್ ನೋಡಿ ಜ್ಯೋತಿಕಾ ಅವರು ಕಿಸಿಕಿಸಿ ನಕ್ಕಿದ್ದಾರೆ. ಸೂರ್ಯ ಅವರ ಅಭಿಮಾನಿಗಳಿಗೆ ಇದು ಸರಿ ಎನಿಸಿಲ್ಲ. ಆದ್ದರಿಂದ ಜ್ಯೋತಿಕಾಗೆ ಸೂರ್ಯ ಫ್ಯಾನ್ಸ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ನಟ ಸೂರ್ಯ ಬಗ್ಗೆ ಕೀಳು ಕಮೆಂಟ್ ನೋಡಿ ಕಿಸಿಕಿಸಿ ನಕ್ಕ ಪತ್ನಿ ಜ್ಯೋತಿಕಾ; ಬುದ್ಧಿ ಹೇಳಿದ ಜನ
Suriya, Jyothika
ಮದನ್​ ಕುಮಾರ್​
|

Updated on: Feb 27, 2025 | 5:01 PM

Share

ಕಾಲಿವುಡ್​ ನಟಿ ಜ್ಯೋತಿಕಾ (Jyothika) ಅವರು ಈಗ ಸಿನಿಮಾಗಳ ಆಯ್ಕೆಯಲ್ಲಿ ತುಂಬ ಚ್ಯೂಸಿ ಆಗಿದ್ದಾರೆ. ಅವರ ಪತಿ ಸೂರ್ಯ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ಸೂರ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಈ ನಡುವೆ ಜ್ಯೋತಿಕಾ ಮತ್ತು ಸೂರ್ಯ ನಡುವೆ ಏನೋ ಕಿರಿಕ್ ಶುರುವಾಗಿದೆಯಾ ಎಂಬ ಪ್ರಶ್ನೆ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಜ್ಯೋತಿಕಾ ಅವರ ವರ್ತನೆ. ಸೋಶಿಯಲ್ ಮೀಡಿಯಾದಲ್ಲಿ ಗಂಡನ ಬಗ್ಗೆ ಬಂದಿರುವ ಕೀಳುಮಟ್ಟಕ್ಕೆ ಕಮೆಂಟ್​ ನೋಡಿ ಜ್ಯೋತಿಕಾ ನಕ್ಕಿದ್ದಾರೆ.

ನೆಟ್​ ಫ್ಲಿಕ್ಸ್ ನಲ್ಲಿ ಜ್ಯೋತಿಕಾ ಅವರ ಹೊಸ ಸಿನಿಮಾ ಬರುತ್ತಿದೆ. ಈ ಪ್ರಯುಕ್ತ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಕಮೆಂಟ್ ಮಾಡಿದ ನೆಟ್ಟಿಗರು ಜ್ಯೋತಿಕಾ ಪತಿ ಸೂರ್ಯ ಕುಟುಂಬವನ್ನು ಟಾರ್ಗೆಟ್ ಮಾಡಿದ್ದಾರೆ. ‘ನಿಮ್ಮ ಗಂಡನಿಗಿಂತ ದಳಪತಿ ವಿಜಯ್ ಉತ್ತಮ’ ಎಂಬ ಕಮೆಂಟ್ ಬಂದಿದೆ. ‘ಸೂರ್ಯ ಮತ್ತು ಕಾರ್ತಿಗಿಂತಲೂ ಬೇರೆ ನಟರೇ ಉತ್ತಮವಾಗಿದ್ದಾರೆ’ ಎಂದು ಕೂಡ ಕೆಲವರು ಕಮೆಂಟ್ ಮಾಡಿದ್ದಾರೆ.

ಈ ನೆಗೆಟಿವ್ ಕಮೆಂಟ್ ನೋಡಿ ಜ್ಯೋತಿಕಾ ಅವರು ಸುಮ್ಮನೆ ಇರಬಹುದಿತ್ತು. ಆದರೆ ಅವರು ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಆ ಕಮೆಂಟ್​ ಗೆ ಪ್ರತಿಕ್ರಿಯೆಯಾಗಿ ಕಿಸಿಕಿಸಿ ನಗುವ ಎಮೋಜಿಯನ್ನು ಹಾಕಿದ್ದಾರೆ. ಇದನ್ನು ನೋಡಿದ ಸೂರ್ಯ ಅಭಿಮಾನಿಗಳಿಗೆ ಬೇಸರ ಆಗಿದೆ. ಗಂಡನ ಬಗ್ಗೆ ಇರುವ ಟ್ರೋಲ್​ ಗೆ ಪತ್ನಿಯೇ ಈ ರೀತಿ ಪ್ರತಿಕ್ರಿಯಿಸಿದ್ದು ಸರಿಯಲ್ಲ ಎಂದು ಫ್ಯಾನ್ಸ್ ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ
Image
ಕೊಲ್ಲೂರು ಚಂಡಿಕಾಯಾಗದಲ್ಲಿ ಕಾಲಿವುಡ್ ದಂಪತಿ; ದರ್ಶನ ಪಡೆದ ಸೂರ್ಯ-ಜ್ಯೋತಿಕಾ
Image
ಪತ್ನಿಗಾಗಿ ತ್ಯಾಗ ಮಾಡಿದ ಸ್ಟಾರ್ ನಟ ಸೂರ್ಯ
Image
ಚಿತ್ರರಂಗಕ್ಕೆ ಕಾಲಿಟ್ಟ ಸೂರ್ಯ-ಜ್ಯೋತಿಕ ಪುತ್ರಿ, ಮೊದಲ ಪ್ರಯತ್ನಕ್ಕೆ ಜಯ
Image
ಒಂದೇ ಒಂದು ವಿಡಿಯೋದಿಂದ ವಿಚ್ಛೇದನ ವದಂತಿಗೆ ಬ್ರೇಕ್ ಹಾಕಿದ ಜ್ಯೋತಿಕಾ-ಸೂರ್ಯ

ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಫ್ಯಾನ್ಸ್ ವಾರ್ ನಡೆಯುತ್ತಲೇ ಇರುತ್ತವೆ. ಅದನ್ನು ತಪ್ಪಿಸಲು ಸೆಲೆಬ್ರಿಟಿಗಳು ಪ್ರಯತ್ನಿಸಬೇಕು. ಜ್ಯೋತಿಕಾ ಇಂಥ ಕಮೆಂಟ್​ ಗಳಿಗೆ ನಕ್ಕು ಎಂಜಾಯ್ ಮಾಡುತ್ತಿದ್ದಾರೆ ಎಂಬುದು ನಿಜವಾದರೆ ಫ್ಯಾನ್ಸ್ ವಾರ್​ ಗೆ ಅವರೇ ಪ್ರೋತ್ಸಾಹ ಕೊಟ್ಟಂತೆ ಆಗುತ್ತದೆ ಎಂಬುದು ಕೆಲವರ ವಾದ. ಹಾಗಾಗಿ ಜ್ಯೋತಿಕಾಗೆ ಕೆಲವರು ಬುದ್ಧಿ ಹೇಳಿದ್ದಾರೆ.

ಇದನ್ನೂ ಓದಿ: ಸೂರ್ಯನ ವಿವಾಹ ಆದಾಗಿನಿಂದ ಜ್ಯೋತಿಕಾಗೆ ಸಂಕಷ್ಟ; ಎದುರಿಸಿದ ಕಷ್ಟಗಳೇನು?

‘ದಯವಿಟ್ಟು ಹೀಗೆಲ್ಲ ಮಾಡಬೇಡಿ’ ಎಂದು ಅನೇಕರು ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರ ಪರಿಣಾಮವಾಗಿ ಜ್ಯೋತಿಕಾ ಅವರು ತಮ್ಮ ಕಮೆಂಟ್ ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ಸೂರ್ಯ ಅವರು ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಅಂತ ಫ್ಯಾನ್ಸ್ ಕುತೂಹಲದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು