AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೋತಿ ರೈ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ವೈರಲ್, ಆಕ್ರೋಶಗೊಂಡ ನಟಿ

ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಖಾಸಗಿ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದೀಗ ನಟಿ ಜ್ಯೋತಿ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದು, ದೂರಿನ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಜ್ಯೋತಿ ರೈ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ವೈರಲ್, ಆಕ್ರೋಶಗೊಂಡ ನಟಿ
ಮಂಜುನಾಥ ಸಿ.
|

Updated on: May 09, 2024 | 12:00 PM

Share

ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣ ದೇಶದಾದ್ಯಂತ ಚರ್ಚೆಯಾಗುತ್ತಿರುವಾಗಲೇ ಕೆಲವು ಕಿಡಿಗೇಡಿಗಳು ನಟಿ ಜ್ಯೋತಿ ರೈರದ್ದು ಎನ್ನಲಾದ ಕೆಲವು ಅಶ್ಲೀಲ ವಿಡಿಯೋ, ಚಿತ್ರಗಳನ್ನು ವೈರಲ್ ಮಾಡುತ್ತಿದ್ದಾರೆ. ಜ್ಯೋತಿ ರೈ ಅವರದ್ದು ಎನ್ನಲಾಗುತ್ತಿರುವ ವಿಡಿಯೋ, ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ಹರಿದಾಡುತ್ತಿವೆ. ಇದೀಗ ನಟಿ ಜ್ಯೋತಿ ರೈ ಈ ಬಗ್ಗೆ ಮೌನ ಮುರಿದಿದ್ದು, ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಅಸಮಾಧಾನ ಹೊರಹಾಕಿದ್ದಾರೆ.

ಕನ್ನಡದ ನಟಿ ಜ್ಯೋತಿ ರೈ ತೆಲುಗು, ತಮಿಳು ಚಿತ್ರರಂಗ ಹಾಗೂ ಟಿವಿ ಲೋಕದಲ್ಲಿ ಜನಪ್ರಿಯರು. ಇನ್​ಸ್ಟಾಗ್ರಾಂನಲ್ಲಿ ಸಹ ತಮ್ಮ ಮಾದಕ ಚಿತ್ರಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಈಗ ಅವರದ್ದೆನ್ನಲಾದ ಕೆಲವು ಅಶ್ಲೀಲ ವಿಡಿಯೋ ಹಾಗೂ ಚಿತ್ರಗಳು ವೈರಲ್ ಆಗಿವೆ. ಈ ಬಗ್ಗೆ ಮಾತನಾಡಿರುವ ಜ್ಯೋತಿ ರೈ, ತಮ್ಮ ನಕಲಿ ವಿಡಿಯೋ ಹಾಗೂ ಚಿತ್ರಗಳನ್ನು ಹರಿಬಿಡುವ ಮೂಲಕ ತಮ್ಮ ಮಾನಹಾನಿಗೆ ಯತ್ನಿಸಲಾಗುತ್ತಿದೆ ಎಂದಿದ್ದಾರೆ.

ಟ್ವಿಟ್ಟರ್​ನಲ್ಲಿ ಎಡಿಟ್ ಬೈ ಅಭಿ ಹೆಸರಿನ ಖಾತೆಯಲ್ಲಿ ಜ್ಯೋತಿ ರೈ ಅವರದ್ದು ಎನ್ನಲಾದ ಕೆಲವು ಚಿತ್ರಗಳು ಹಾಗೂ ವಿಡಿಯೋ ಅಪ್​ಲೋಡ್ ಆಗಿತ್ತು. ತಮ್ಮ ಯೂಟ್ಯೂಬ್ ಚಾನೆಲ್ ಸಬ್​ಸ್ಕ್ರೈಬ್ ಮಾಡಿದರೆ ಪೂರ್ಣ ವಿಡಿಯೋ ಬಿಡುಗಡೆ ಮಾಡುವುದಾಗಿಯೂ ಆ ಖಾತೆಯಿಂದ ಸಂದೇಶ ಹಂಚಿಕೊಳ್ಳಲಾಗಿತ್ತು. ಆದರೆ ಆ ಬಳಿಕ ವಿಡಿಯೋ ಹಾಗೂ ಚಿತ್ರಗಳನ್ನು ಡಿಲೀಟ್ ಮಾಡಲಾಗಿದೆ. ಆದರೆ ಅಷ್ಟರಲ್ಲಾಗಲೆ ಹಲವರು ವಿಡಿಯೋ, ಚಿತ್ರಗಳನ್ನು ಡೌನ್​ಲೋಡ್ ಮಾಡಿ ವೈರಲ್ ಮಾಡಿಬಿಟ್ಟಿದ್ದಾರೆ.

ಇದನ್ನೂ ಓದಿ:ಹ್ಯಾಕರ್​ಗಳಿಂದಾಗಿ ರಾತ್ರಿ ನಿದ್ದೆಯಿಲ್ಲದಂತಾಗಿದೆ: ಆತಂಕ ಹೊರ ಹಾಕಿದ ನಟಿ

ಘಟನೆ ಬಗ್ಗೆ ದೂರು ನೀಡಿರುವ ನಟಿ ಜ್ಯೋತಿ ರೈ, ‘ಸತತವಾಗಿ ಸಂದೇಶಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ದಯವಿಟ್ಟು ಇಂಥಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ನನ್ನ ಹಾಗೂ ನನ್ನ ಕುಟುಂಬದ ಘನತೆಗೆ ಧಕ್ಕೆಯಾಗುತ್ತಿದೆ. ಒಂದೊಮ್ಮೆ ನೀವು ಶೀಘ್ರವೇ ಕ್ರಮ ಜರುಗಿಸದಿದ್ದರೆ ಇದು ಇನ್ನೂ ಮುಂದುವರೆಯುವ ಸಾಧ್ಯತೆ ಇದ್ದು, ಸರಿಪಡಿಸಲಾಗದಷ್ಟು ಸಮಸ್ಯೆಯನ್ನು ತಂದೊಡ್ಡಬಹುದಾಗಿದೆ’ ಎಂದಿದ್ದಾರೆ.

ನಟಿ ಜ್ಯೋತಿ ರೈ ಇನ್​ಸ್ಟಾಗ್ರಾಂನಲ್ಲಿ ತಮ್ಮ ಹಾಟ್ ಚಿತ್ರಗಳನ್ನು ಆಗಾಗ್ಗೆ ಅಪ್​ಲೋಡ್ ಮಾಡುತ್ತಿರುತ್ತಾರೆ. ಜೊತೆಗೆ ನಿರ್ದೇಶಕ ಸುಕುಪುವರಾಜ್ ಅವರೊಟ್ಟಿಗೆ ಆಪ್ತವಾಗಿರುವ ಚಿತ್ರಗಳನ್ನು ಸಹ ಅಪ್​ಲೋಡ್ ಮಾಡುತ್ತಿರುತ್ತಾರೆ. ಟ್ವಿಟ್ಟರ್​ನ ಎಡಿಟ್ ಬೈ ಅಭಿ ಹೆಸರಿನ ಖಾತೆಯ ಬಳಕೆದಾರ, ತಾನು ಜ್ಯೋತಿ ಹಾಗೂ ಸುಕುಪುವರಾಜ್​ ಖಾಸಗಿ ವಿಡಿಯೋ ಹೊಂದಿದ್ದೇನೆ ಎಂದು ಹೇಳಿಕೊಂಡಿದ್ದ. ಆದರೆ ಜ್ಯೋತಿ ರೈ ಅವರದ್ದೆನ್ನಲಾದ ಖಾಸಗಿ ವಿಡಿಯೋ, ಚಿತ್ರಗಳ ಬಗ್ಗೆ ಆಕ್ಷೇಪಗಳು ಕೇಳಿ ಬರುತ್ತಿದ್ದಂತೆ ಆ ಚಿತ್ರಗಳು ಹಾಗೂ ವಿಡಿಯೋಗಳನ್ನು ಡಿಲೀಟ್ ಮಾಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?