AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘K46’ ಟೀಸರ್​ ಬಗ್ಗೆ ದೊಡ್ಡ ಅಪ್​ಡೇಟ್ ನೀಡಿದ ನಟ ಕಿಚ್ಚ ಸುದೀಪ್  

ಈ ಟೀಸರ್ ಯಾವಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳ ವಲಯದಲ್ಲಿ ಮೂಡಿತ್ತು. ಅದಕ್ಕೆ ಸುದೀಪ್ ಕಡೆಯಿಂದಲೇ ಅಪ್​ಡೇಟ್ ಸಿಕ್ಕಿದೆ.

Kichcha Sudeep: ‘K46’ ಟೀಸರ್​ ಬಗ್ಗೆ ದೊಡ್ಡ ಅಪ್​ಡೇಟ್ ನೀಡಿದ ನಟ ಕಿಚ್ಚ ಸುದೀಪ್  
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on:Jun 24, 2023 | 11:27 AM

‘ವಿಕ್ರಾಂತ್​ ರೋಣ’ (Vikrant Rona) ರಿಲೀಸ್ ಆದ ಬಳಿಕ ದೀರ್ಘ ಗ್ಯಾಪ್​ ಮಾಡಿದ್ದ ಕಿಚ್ಚ ಸುದೀಪ್ ಅವರು ನಟನೆಯಲ್ಲಿ ತೊಡಗಿಕೊಂಡಿದ್ದಾರೆ. ಸುದೀಪ್​ ನಟನೆಯ 46ನೇ ಸಿನಿಮಾ ಕುರಿತು ಮೇ 24ರಂದು ಮಾಹಿತಿ ಹೊರಬಿದ್ದಿತ್ತು. ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ ‘ವಿ ಕ್ರಿಯೇಷನ್ಸ್​’ (V Creations) ಜೊತೆ ಅವರು ಕೈ ಜೋಡಿಸಿದ್ದರು. ಈ ಚಿತ್ರವನ್ನು ಕಲೈಪುಲಿ ಎಸ್​. ಧಾನು ನಿರ್ಮಾಣ ಮಾಡುತ್ತಿದ್ದಾರೆ. ‘ಕಬಾಲಿ’, ‘ಅಸುರನ್​’, ‘ತುಪಾಕಿ’ ರೀತಿಯ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ‘ವಿ ಕ್ರಿಯೇಷನ್ಸ್​’ ಸಂಸ್ಥೆಗೆ ಇದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ.

ಸುದೀಪ್ ಅವರು ಇತ್ತೀಚೆಗೆ ಚಿತ್ರದ ಟೀಸರ್ ಶೂಟ್​ನಲ್ಲಿ ಭಾಗಿ ಆಗಿದ್ದರು. ಈ ಟೀಸರ್​ನ ಕೆಲಸಗಳು ಭರದಿಂದ ಸಾಗಿದ್ದವು. ಈ ಟೀಸರ್ ಯಾವಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳ ವಲಯದಲ್ಲಿ ಮೂಡಿತ್ತು. ಅದಕ್ಕೆ ಸುದೀಪ್ ಕಡೆಯಿಂದಲೇ ಉತ್ತರ ಸಿಕ್ಕಿದೆ. ಈ ಬಗ್ಗೆ ಸುದೀಪ್ ಅವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

‘K46 ಚಿತ್ರದ ಟೀಸರ್ ಸಿದ್ಧವಾಗಿದೆ. ತಂಡ ಸಾಕಷ್ಟು ಕಷ್ಟಪಟ್ಟಿದೆ. ಅದನ್ನು ನಿಮ್ಮ ಮುಂದಿಡಲು ಎಗ್ಸೈಟ್ ಆಗಿದ್ದೇವೆ. ದಿನಾಂಕ ಘೋಷಣೆ ಜೂನ್ 27ರಂದು ಆಗಲಿದೆ’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಕೂಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಆ ಸಿನಿಮಾದ ಮುಹೂರ್ತ ಇತ್ತೀಚೆಗೆ ನಡೆಯಿತು. ಈಗ ಜೂನ್ 25ರಂದು ದೊಡ್ಡ ಮಟ್ಟದಲ್ಲಿ ಅನೌನ್ಸ್​ಮೆಂಟ್ ಮಾಡಲಾಗುತ್ತಿದೆ. ಆ ಬಗ್ಗೆಯೂ ಸುದೀಪ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Kichcha Sudeep: ಗ್ರ್ಯಾಂಡ್ ಎಂಟ್ರಿ ಕೊಟ್ಟ ಕಿಚ್ಚ-ಪ್ರಿಯಾ ದಂಪತಿ; ನವ ಜೋಡಿಗೆ ವಿಶ್

‘ವಿಕ್ರಾಂತ್ ರೋಣ’ ರಿಲೀಸ್ ಆದ ಬಳಿಕ ಸುದೀಪ್ ಅವರು ಹೊಸ ಸಿನಿಮಾ ಒಪ್ಪಿಕೊಳ್ಳಲು ವಿಳಂಬ ಮಾಡಿದರು. ರಾಜಕೀಯ ಪ್ರಚಾರದಲ್ಲೂ ತೊಡಗಿಕೊಂಡರು. ಈ ಮಧ್ಯೆ ಹಲವು ಸಿನಿಮಾದ ಟೀಸರ್-ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿ ಆದರು. ಈಗ ಸುದೀಪ್ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:36 am, Sat, 24 June 23

Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ