AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

18ನೇ ದಿನವೂ ‘ಕಾಟೇರ’ ಅಬ್ಬರ; ಮಧ್ಯರಾತ್ರಿ 2 ಗಂಟೆ ಶೋ ಹೌಸ್​ಫುಲ್

ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ವೀಕ್ಷಿಸಿದ್ದಾರೆ. ‘ಸಂಕ್ರಾಂತಿಗೆ ಮತ್ತೊಮ್ಮೆ ಕಾಟೇರ’ ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.

18ನೇ ದಿನವೂ ‘ಕಾಟೇರ’ ಅಬ್ಬರ; ಮಧ್ಯರಾತ್ರಿ 2 ಗಂಟೆ ಶೋ ಹೌಸ್​ಫುಲ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jan 16, 2024 | 11:56 AM

Share

‘ಕಾಟೇರ’ ಸಿನಿಮಾ (Kaatera Movie) ಅಬ್ಬರದ ಕಲೆಕ್ಷನ್ ಮಾಡಿದೆ. ದರ್ಶನ್ ಅವರ ಪವರ್​ಫುಲ್ ಆ್ಯಕ್ಟಿಂಗ್ ನೊಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಮೂರು ವಾರ ಕಳೆಯುತ್ತಾ ಬಂದಿದೆ. ಆದಾಗ್ಯೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಅಚ್ಚರಿ ವಿಚಾರ ಏನೆಂದರೆ ಸಂಕ್ರಾಂತಿ ಪ್ರಯುಕ್ತ ‘ಕಾಟೇರ’ ಸಿನಿಮಾಗೆ ಮಧ್ಯರಾತ್ರಿ ಎರಡು ಗಂಟೆ ಶೋ ಇಡಲಾಗಿತ್ತು. ಇದು ಕೂಡ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಈ ಬಗ್ಗೆ ಫ್ಯಾನ್ ಪೇಜ್​ಗಳಲ್ಲಿ ಸುದ್ದಿ ಹರಿದಾಡುತ್ತಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಯಿತು. ಒಂದು ವಾರ ಮೊದಲು ರಿಲೀಸ್ ಆದ ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾಗಳ ಅಬ್ಬರದ ನಡುವೆಯೂ ‘ಕಾಟೇರ’ ಉತ್ತಮ ಗಳಿಕೆ ಮಾಡಿತು. ಈಗಾಗಲೇ ಸಿನಿಮಾದ ಗಳಿಕೆ 200 ಕೋಟಿ ರೂಪಾಯಿ ಸಮೀಪಿಸಿದೆ. ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ನೋಡಿದ್ದಾರೆ. ‘ಸಂಕ್ರಾಂತಿಗೆ ಮತ್ತೊಮ್ಮೆ ಕಾಟೇರ’ ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.

ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ 2 ಗಂಟೆಗೆ ‘ಕಾಟೇರ’ ಶೋ ಪ್ರದರ್ಶಿಸಲಾಗಿದೆ. ಸಾಮಾನ್ಯವಾಗಿ ರಿಲೀಸ್ ದಿನ ಈ ರೀತಿ ಶೋ ಇಟ್ಟರೆ ಫ್ಯಾನ್ಸ್ ಬಂದು ವೀಕ್ಷಿಸುತ್ತಾರೆ. ಆದರೆ, ಸಿನಿಮಾ ರಿಲೀಸ್ ಆಗಿ 18 ದಿನ ಕಳೆದ ಬಳಿಕವೂ ಮಧ್ಯರಾತ್ರಿ ಶೋ ಹೌಸ್ ಫುಲ್ ಆಗಿದೆ ಅನ್ನೋದು ವಿಶೇಷ. ಇದು ‘ಕಾಟೇರ’ ಸಿನಿಮಾದ ಕ್ರೇಜ್ ತೋರಿಸುತ್ತದೆ.

ಇದನ್ನೂ ಓದಿ: ‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ

‘ಕಾಟೇರ’ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ದರ್ಶನ್​ಗೆ ಮಾಲಾಶ್ರೀ ಮಗಳು ಆರಾಧನಾ ರಾಮ್ ಜೊತೆಯಾಗಿದ್ದಾರೆ. ಅಚ್ಯುತ್ ಕುಮಾರ್, ಜಗಪತಿ ಬಾಬು, ವೈಜನಾಥ್ ಬಿರಾದಾರ್, ಶ್ರುತಿ ಸೇರಿ ಅನೇಕರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ರೆಟ್ರೋ ಕಾಲದ ಕಥೆಯನ್ನು ತರುಣ್ ಉತ್ತಮವಾಗಿ ತೆರೆಮೇಲೆ ತಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ