AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18ನೇ ದಿನವೂ ‘ಕಾಟೇರ’ ಅಬ್ಬರ; ಮಧ್ಯರಾತ್ರಿ 2 ಗಂಟೆ ಶೋ ಹೌಸ್​ಫುಲ್

ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ವೀಕ್ಷಿಸಿದ್ದಾರೆ. ‘ಸಂಕ್ರಾಂತಿಗೆ ಮತ್ತೊಮ್ಮೆ ಕಾಟೇರ’ ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.

18ನೇ ದಿನವೂ ‘ಕಾಟೇರ’ ಅಬ್ಬರ; ಮಧ್ಯರಾತ್ರಿ 2 ಗಂಟೆ ಶೋ ಹೌಸ್​ಫುಲ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jan 16, 2024 | 11:56 AM

Share

‘ಕಾಟೇರ’ ಸಿನಿಮಾ (Kaatera Movie) ಅಬ್ಬರದ ಕಲೆಕ್ಷನ್ ಮಾಡಿದೆ. ದರ್ಶನ್ ಅವರ ಪವರ್​ಫುಲ್ ಆ್ಯಕ್ಟಿಂಗ್ ನೊಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಮೂರು ವಾರ ಕಳೆಯುತ್ತಾ ಬಂದಿದೆ. ಆದಾಗ್ಯೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಅಚ್ಚರಿ ವಿಚಾರ ಏನೆಂದರೆ ಸಂಕ್ರಾಂತಿ ಪ್ರಯುಕ್ತ ‘ಕಾಟೇರ’ ಸಿನಿಮಾಗೆ ಮಧ್ಯರಾತ್ರಿ ಎರಡು ಗಂಟೆ ಶೋ ಇಡಲಾಗಿತ್ತು. ಇದು ಕೂಡ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಈ ಬಗ್ಗೆ ಫ್ಯಾನ್ ಪೇಜ್​ಗಳಲ್ಲಿ ಸುದ್ದಿ ಹರಿದಾಡುತ್ತಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಯಿತು. ಒಂದು ವಾರ ಮೊದಲು ರಿಲೀಸ್ ಆದ ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾಗಳ ಅಬ್ಬರದ ನಡುವೆಯೂ ‘ಕಾಟೇರ’ ಉತ್ತಮ ಗಳಿಕೆ ಮಾಡಿತು. ಈಗಾಗಲೇ ಸಿನಿಮಾದ ಗಳಿಕೆ 200 ಕೋಟಿ ರೂಪಾಯಿ ಸಮೀಪಿಸಿದೆ. ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ನೋಡಿದ್ದಾರೆ. ‘ಸಂಕ್ರಾಂತಿಗೆ ಮತ್ತೊಮ್ಮೆ ಕಾಟೇರ’ ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.

ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ 2 ಗಂಟೆಗೆ ‘ಕಾಟೇರ’ ಶೋ ಪ್ರದರ್ಶಿಸಲಾಗಿದೆ. ಸಾಮಾನ್ಯವಾಗಿ ರಿಲೀಸ್ ದಿನ ಈ ರೀತಿ ಶೋ ಇಟ್ಟರೆ ಫ್ಯಾನ್ಸ್ ಬಂದು ವೀಕ್ಷಿಸುತ್ತಾರೆ. ಆದರೆ, ಸಿನಿಮಾ ರಿಲೀಸ್ ಆಗಿ 18 ದಿನ ಕಳೆದ ಬಳಿಕವೂ ಮಧ್ಯರಾತ್ರಿ ಶೋ ಹೌಸ್ ಫುಲ್ ಆಗಿದೆ ಅನ್ನೋದು ವಿಶೇಷ. ಇದು ‘ಕಾಟೇರ’ ಸಿನಿಮಾದ ಕ್ರೇಜ್ ತೋರಿಸುತ್ತದೆ.

ಇದನ್ನೂ ಓದಿ: ‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ

‘ಕಾಟೇರ’ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ದರ್ಶನ್​ಗೆ ಮಾಲಾಶ್ರೀ ಮಗಳು ಆರಾಧನಾ ರಾಮ್ ಜೊತೆಯಾಗಿದ್ದಾರೆ. ಅಚ್ಯುತ್ ಕುಮಾರ್, ಜಗಪತಿ ಬಾಬು, ವೈಜನಾಥ್ ಬಿರಾದಾರ್, ಶ್ರುತಿ ಸೇರಿ ಅನೇಕರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ರೆಟ್ರೋ ಕಾಲದ ಕಥೆಯನ್ನು ತರುಣ್ ಉತ್ತಮವಾಗಿ ತೆರೆಮೇಲೆ ತಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ