AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18ನೇ ದಿನವೂ ‘ಕಾಟೇರ’ ಅಬ್ಬರ; ಮಧ್ಯರಾತ್ರಿ 2 ಗಂಟೆ ಶೋ ಹೌಸ್​ಫುಲ್

ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ವೀಕ್ಷಿಸಿದ್ದಾರೆ. ‘ಸಂಕ್ರಾಂತಿಗೆ ಮತ್ತೊಮ್ಮೆ ಕಾಟೇರ’ ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.

18ನೇ ದಿನವೂ ‘ಕಾಟೇರ’ ಅಬ್ಬರ; ಮಧ್ಯರಾತ್ರಿ 2 ಗಂಟೆ ಶೋ ಹೌಸ್​ಫುಲ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jan 16, 2024 | 11:56 AM

Share

‘ಕಾಟೇರ’ ಸಿನಿಮಾ (Kaatera Movie) ಅಬ್ಬರದ ಕಲೆಕ್ಷನ್ ಮಾಡಿದೆ. ದರ್ಶನ್ ಅವರ ಪವರ್​ಫುಲ್ ಆ್ಯಕ್ಟಿಂಗ್ ನೊಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಮೂರು ವಾರ ಕಳೆಯುತ್ತಾ ಬಂದಿದೆ. ಆದಾಗ್ಯೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಅಚ್ಚರಿ ವಿಚಾರ ಏನೆಂದರೆ ಸಂಕ್ರಾಂತಿ ಪ್ರಯುಕ್ತ ‘ಕಾಟೇರ’ ಸಿನಿಮಾಗೆ ಮಧ್ಯರಾತ್ರಿ ಎರಡು ಗಂಟೆ ಶೋ ಇಡಲಾಗಿತ್ತು. ಇದು ಕೂಡ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಈ ಬಗ್ಗೆ ಫ್ಯಾನ್ ಪೇಜ್​ಗಳಲ್ಲಿ ಸುದ್ದಿ ಹರಿದಾಡುತ್ತಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಯಿತು. ಒಂದು ವಾರ ಮೊದಲು ರಿಲೀಸ್ ಆದ ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾಗಳ ಅಬ್ಬರದ ನಡುವೆಯೂ ‘ಕಾಟೇರ’ ಉತ್ತಮ ಗಳಿಕೆ ಮಾಡಿತು. ಈಗಾಗಲೇ ಸಿನಿಮಾದ ಗಳಿಕೆ 200 ಕೋಟಿ ರೂಪಾಯಿ ಸಮೀಪಿಸಿದೆ. ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ನೋಡಿದ್ದಾರೆ. ‘ಸಂಕ್ರಾಂತಿಗೆ ಮತ್ತೊಮ್ಮೆ ಕಾಟೇರ’ ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.

ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ 2 ಗಂಟೆಗೆ ‘ಕಾಟೇರ’ ಶೋ ಪ್ರದರ್ಶಿಸಲಾಗಿದೆ. ಸಾಮಾನ್ಯವಾಗಿ ರಿಲೀಸ್ ದಿನ ಈ ರೀತಿ ಶೋ ಇಟ್ಟರೆ ಫ್ಯಾನ್ಸ್ ಬಂದು ವೀಕ್ಷಿಸುತ್ತಾರೆ. ಆದರೆ, ಸಿನಿಮಾ ರಿಲೀಸ್ ಆಗಿ 18 ದಿನ ಕಳೆದ ಬಳಿಕವೂ ಮಧ್ಯರಾತ್ರಿ ಶೋ ಹೌಸ್ ಫುಲ್ ಆಗಿದೆ ಅನ್ನೋದು ವಿಶೇಷ. ಇದು ‘ಕಾಟೇರ’ ಸಿನಿಮಾದ ಕ್ರೇಜ್ ತೋರಿಸುತ್ತದೆ.

ಇದನ್ನೂ ಓದಿ: ‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ

‘ಕಾಟೇರ’ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ದರ್ಶನ್​ಗೆ ಮಾಲಾಶ್ರೀ ಮಗಳು ಆರಾಧನಾ ರಾಮ್ ಜೊತೆಯಾಗಿದ್ದಾರೆ. ಅಚ್ಯುತ್ ಕುಮಾರ್, ಜಗಪತಿ ಬಾಬು, ವೈಜನಾಥ್ ಬಿರಾದಾರ್, ಶ್ರುತಿ ಸೇರಿ ಅನೇಕರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ರೆಟ್ರೋ ಕಾಲದ ಕಥೆಯನ್ನು ತರುಣ್ ಉತ್ತಮವಾಗಿ ತೆರೆಮೇಲೆ ತಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?