AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

18ನೇ ದಿನವೂ ‘ಕಾಟೇರ’ ಅಬ್ಬರ; ಮಧ್ಯರಾತ್ರಿ 2 ಗಂಟೆ ಶೋ ಹೌಸ್​ಫುಲ್

ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ವೀಕ್ಷಿಸಿದ್ದಾರೆ. ‘ಸಂಕ್ರಾಂತಿಗೆ ಮತ್ತೊಮ್ಮೆ ಕಾಟೇರ’ ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.

18ನೇ ದಿನವೂ ‘ಕಾಟೇರ’ ಅಬ್ಬರ; ಮಧ್ಯರಾತ್ರಿ 2 ಗಂಟೆ ಶೋ ಹೌಸ್​ಫುಲ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jan 16, 2024 | 11:56 AM

Share

‘ಕಾಟೇರ’ ಸಿನಿಮಾ (Kaatera Movie) ಅಬ್ಬರದ ಕಲೆಕ್ಷನ್ ಮಾಡಿದೆ. ದರ್ಶನ್ ಅವರ ಪವರ್​ಫುಲ್ ಆ್ಯಕ್ಟಿಂಗ್ ನೊಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಮೂರು ವಾರ ಕಳೆಯುತ್ತಾ ಬಂದಿದೆ. ಆದಾಗ್ಯೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಅಚ್ಚರಿ ವಿಚಾರ ಏನೆಂದರೆ ಸಂಕ್ರಾಂತಿ ಪ್ರಯುಕ್ತ ‘ಕಾಟೇರ’ ಸಿನಿಮಾಗೆ ಮಧ್ಯರಾತ್ರಿ ಎರಡು ಗಂಟೆ ಶೋ ಇಡಲಾಗಿತ್ತು. ಇದು ಕೂಡ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಈ ಬಗ್ಗೆ ಫ್ಯಾನ್ ಪೇಜ್​ಗಳಲ್ಲಿ ಸುದ್ದಿ ಹರಿದಾಡುತ್ತಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಯಿತು. ಒಂದು ವಾರ ಮೊದಲು ರಿಲೀಸ್ ಆದ ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾಗಳ ಅಬ್ಬರದ ನಡುವೆಯೂ ‘ಕಾಟೇರ’ ಉತ್ತಮ ಗಳಿಕೆ ಮಾಡಿತು. ಈಗಾಗಲೇ ಸಿನಿಮಾದ ಗಳಿಕೆ 200 ಕೋಟಿ ರೂಪಾಯಿ ಸಮೀಪಿಸಿದೆ. ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ನೋಡಿದ್ದಾರೆ. ‘ಸಂಕ್ರಾಂತಿಗೆ ಮತ್ತೊಮ್ಮೆ ಕಾಟೇರ’ ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.

ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ 2 ಗಂಟೆಗೆ ‘ಕಾಟೇರ’ ಶೋ ಪ್ರದರ್ಶಿಸಲಾಗಿದೆ. ಸಾಮಾನ್ಯವಾಗಿ ರಿಲೀಸ್ ದಿನ ಈ ರೀತಿ ಶೋ ಇಟ್ಟರೆ ಫ್ಯಾನ್ಸ್ ಬಂದು ವೀಕ್ಷಿಸುತ್ತಾರೆ. ಆದರೆ, ಸಿನಿಮಾ ರಿಲೀಸ್ ಆಗಿ 18 ದಿನ ಕಳೆದ ಬಳಿಕವೂ ಮಧ್ಯರಾತ್ರಿ ಶೋ ಹೌಸ್ ಫುಲ್ ಆಗಿದೆ ಅನ್ನೋದು ವಿಶೇಷ. ಇದು ‘ಕಾಟೇರ’ ಸಿನಿಮಾದ ಕ್ರೇಜ್ ತೋರಿಸುತ್ತದೆ.

ಇದನ್ನೂ ಓದಿ: ‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ

‘ಕಾಟೇರ’ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ದರ್ಶನ್​ಗೆ ಮಾಲಾಶ್ರೀ ಮಗಳು ಆರಾಧನಾ ರಾಮ್ ಜೊತೆಯಾಗಿದ್ದಾರೆ. ಅಚ್ಯುತ್ ಕುಮಾರ್, ಜಗಪತಿ ಬಾಬು, ವೈಜನಾಥ್ ಬಿರಾದಾರ್, ಶ್ರುತಿ ಸೇರಿ ಅನೇಕರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ರೆಟ್ರೋ ಕಾಲದ ಕಥೆಯನ್ನು ತರುಣ್ ಉತ್ತಮವಾಗಿ ತೆರೆಮೇಲೆ ತಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್