AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಜೊತೆ ‘ಕಾಟೇರ’ ಯಶಸ್ಸನ್ನು ಸಂಭ್ರಮಿಸಲಿದ್ದಾರೆ ದರ್ಶನ್

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ. ಈ ಚಿತ್ರ ಮೂರು ದಿನಕ್ಕೆ 58 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಈ ಖುಷಿಯನ್ನು ಸಂಭ್ರಮಿಸಲು ತಂಡ ಮುಂದಾಗಿದೆ.

ಅಭಿಮಾನಿಗಳ ಜೊತೆ ‘ಕಾಟೇರ’ ಯಶಸ್ಸನ್ನು ಸಂಭ್ರಮಿಸಲಿದ್ದಾರೆ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jan 01, 2024 | 11:42 AM

Share

ನಟ ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ದರ್ಶನ್ ಹಾಗೂ ತರುಣ್ ಸುಧೀರ್ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾಗೆ ಬಂಡವಾಳ ಹೂಡಿದ ರಾಕ್​ಲೈನ್ ವೆಂಕಟೇಶ್ ಅವರು ಗೆಲುವು ಕಂಡಿದ್ದಾರೆ. ಈ ಚಿತ್ರದ ಸಕ್ಸಸ್ ಮೀಟ್ ಆಯೋಜನೆ ಮಾಡಿದೆ. ಇದರ ಜೊತೆಗೆ ದರ್ಶನ್ ಅವರು ಅಭಿಮಾನಿಗಳ ಜೊತೆಗೆ ಚಿತ್ರದ ಯಶಸ್ಸನ್ನು ಸಂಭ್ರಮಿಸಲಿದ್ದಾರೆ.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ. ಈ ಚಿತ್ರ ಮೂರು ದಿನಕ್ಕೆ 58 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಈ ಖುಷಿಯನ್ನು ಸಂಭ್ರಮಿಸಲು ತಂಡ ಮುಂದಾಗಿದೆ. ಈ ಬಗ್ಗೆ ತಂಡದ ಕಡೆಯಿಂದ ಮಾಹಿತಿ ಸಿಕ್ಕಿದೆ. ಸಂಜೆ ಏಳು ಗಂಟೆಗೆ ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್​ ಮಾಲ್​ನಲ್ಲಿ ಸಾರ್ವಜನಿಕರ ಜೊತೆಗೆ ಚಿತ್ರದ ಯಶಸ್ಸನ್ನು ಸಂಭ್ರಮಿಸಲಿದ್ದಾರೆ.

‘ಕಾಟೇರ’ ಬಗ್ಗೆ

‘ಕಾಟೇರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಜಾತಿ ಪದ್ಧತಿ, ಸಮಾಜದಲ್ಲಿ ಮೇಲು-ಕೀಳು ಇರಬಾರದು ಎಂದು ಸಿನಿಮಾದಲ್ಲಿ ಸಾರಲಾಗಿದೆ. ಈ ಚಿತ್ರದಲ್ಲಿ ದರ್ಶನ್ ಅವರು ಎರಡು ಶೇಡ್​ನ ಪಾತ್ರದಲ್ಲಿ ಮಿಂಚಿದ್ದಾರೆ. ಎಲ್ಲಾ ಪಾತ್ರಗಳು ಗಮನ ಸೆಳೆದಿವೆ. ದರ್ಶನ್ ಅವರು ಆ್ಯಕ್ಷನ್ ಮೂಲಕವೂ ಮಿಂಚಿದ್ದಾರೆ.

ಗಳಿಕೆ ಲೆಕ್ಕ..

ಡಿಸೆಂಬರ್ 29ರಂದು ‘ಕಾಟೇರ’ ಸಿನಿಮಾ ಬಿಡುಗಡೆ ಆಯಿತು. ಶುಕ್ರವಾರ ಈ ಸಿನಿಮಾ 19.79 ಕೋಟಿ ರೂಪಾಯಿ ಗಳಿಕೆ ಮಾಡಿತು. ಶನಿವಾರ 17.35 ಕೋಟಿ ರೂಪಾಯಿ ಹಾಗೂ ಭಾನುವಾರ (ಡಿಸೆಂಬರ್ 31) ಈ ಚಿತ್ರ 20.94 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಚಿತ್ರದ ಒಟ್ಟಾರೆ ಗಳಿಕೆ 58.8 ಕೋಟಿ ರೂಪಾಯಿ ಆಗಿದೆ ಎಂದು ದರ್ಶನ್ ಆಪ್ತರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:20 am, Mon, 1 January 24

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್