Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​ನಲ್ಲಿ ರಿಲೀಸ್ ಆಯ್ತು ‘ಕಾವಾಲಾ..’ ವಿಡಿಯೋ ಸಾಂಗ್; ಸಿಗುತ್ತಿದೆ ಲಕ್ಷ ಲಕ್ಷ ವೀಕ್ಷಣೆ

‘ಕಾವಾಲಾ..’ ವಿಡಿಯೋ ಸಾಂಗ್ ನೋಡಲು ಕೆಲವರು ಚಿತ್ರಮಂದರಕ್ಕೆ ಬಂದ ಉದಾಹರಣೆ ಇದೆ. ಈಗ ‘ಜೈಲರ್’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಈ ಕಾರಣಕ್ಕೆ ವಿಡಿಯೋ ಸಾಂಗ್​ನ ಯೂಟ್ಯೂಬ್​​ನಲ್ಲಿ ರಿಲೀಸ್ ಮಾಡಲಾಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಯೂಟ್ಯೂಬ್​ನಲ್ಲಿ ರಿಲೀಸ್ ಆಯ್ತು ‘ಕಾವಾಲಾ..’ ವಿಡಿಯೋ ಸಾಂಗ್; ಸಿಗುತ್ತಿದೆ ಲಕ್ಷ ಲಕ್ಷ ವೀಕ್ಷಣೆ
ತಮನ್ನಾ
Follow us
ರಾಜೇಶ್ ದುಗ್ಗುಮನೆ
|

Updated on: Sep 08, 2023 | 6:30 AM

‘ಜೈಲರ್’ ಸಿನಿಮಾ (Jailer Movie) ಬಾಕ್ಸ್ ಆಫೀಸ್​​ನಲ್ಲಿ ಪಾರುಪತ್ಯ ಸಾಧಿಸಿದೆ. ಈ ಚಿತ್ರ ಬರೋಬ್ಬರಿ 600+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಸಿನಿಮಾ ಸೆಪ್ಟೆಂಬರ್ 7ರಂದು ಒಟಿಟಿ ಮೂಲಕ ಪ್ರಸಾರ ಕಂಡಿದೆ. ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಐದು ಭಾಷೆಗಳಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಮಧ್ಯೆ ‘ಕಾವಾಲಾ..’ ಹಾಡನ್ನು ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಯೂಟ್ಯೂಬ್​ನಲ್ಲಿ ರಿಲೀಸ್ ಮಾಡೋಕೆ ಕೆಲವು ಲೆಕ್ಕಾಚಾರ ಕೂಡ ಕಾರಣ ಎನ್ನಲಾಗುತ್ತಿದೆ.

‘ಕಾವಾಲಾ..’ ಹಾಡಿನ ಲಿರಿಕಲ್ ವಿಡಿಯೋ ಎರಡು ತಿಂಗಳ ಹಿಂದೆ ರಿಲೀಸ್ ಆಗಿತ್ತು. ಈ ಹಾಡು ಸೆನ್ಸೇಷನ್ ತುಂಬಾನೇ ದೊಡ್ಡ ಮಟ್ಟದ ಸೃಷ್ಟಿ ಮಾಡಿತ್ತು. ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಂಯೋಜನೆ ಕೆಲಸ ಮಾಡಿತ್ತು. ಇನ್ನು, ರೀಲ್ಸ್​ನಲ್ಲೂ ಹಾಡು ಫೇಮಸ್ ಆಯಿತು. ತಮನ್ನಾ ಅವರು ಹಾಕಿದ ರೀತಿಯಲ್ಲೇ ಸೆಲೆಬ್ರಿಟಿಗಳು, ಫ್ಯಾನ್ಸ್ ಸ್ಟೆಪ್ ಹಾಕಿದರು. ಈ ಮೂಲಕ ಹಾಡನ್ನು ಫೇಮಸ್ ಮಾಡಲಾಯಿತು. ಈಗ ವಿಡಿಯೋ ಸಾಂಗ್ ರಿಲೀಸ್ ಮಾಡಲಾಗಿದೆ.

‘ಕಾವಾಲಾ..’ ವಿಡಿಯೋ ಸಾಂಗ್ ನೋಡಲು ಕೆಲವರು ಚಿತ್ರಮಂದರಕ್ಕೆ ಬಂದ ಉದಾಹರಣೆ ಇದೆ. ಈಗ ‘ಜೈಲರ್’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಈ ಕಾರಣಕ್ಕೆ ವಿಡಿಯೋ ಸಾಂಗ್​ನ ಯೂಟ್ಯೂಬ್​​ನಲ್ಲಿ ರಿಲೀಸ್ ಮಾಡಲಾಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ‘ಕಾವಾಲಾ..’ ವಿಡಿಯೋ ಸಾಂಗ್ ಕೂಡ ಭರ್ಜರಿ ವೀಕ್ಷಣೆ ಕಾಣುತ್ತಿದೆ.

‘ಕಾವಾಲಾ..’ ಲಿರಿಕಲ್ ವಿಡಿಯೋ 18 ಕೋಟಿ ಬಾರಿ ವೀಕ್ಷಣೆ ಕಂಡಿದೆ. ಈಗ ರಿಲೀಸ್ ಆಗಿರುವ ವಿಡಿಯೋ ಸಾಂಗ್ ಲಕ್ಷಾಂತರ ಬಾರಿ ವೀಕ್ಷಣೆ ಕಾಣುತ್ತಿದೆ. ‘ಜೈಲರ್’ ಚಿತ್ರವನ್ನು ಜನರು ಒಟಿಟಿಯಲ್ಲಿ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಥಿಯೇಟರ್​ನಲ್ಲಿ ನೋಡಿದವರು ಚಿತ್ರವನ್ನು ಒಟಿಟಿಯಲ್ಲಿ ಮತ್ತೊಮ್ಮೆ ಕಣ್ತುಂಬಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಜಾಲಿವುಡ್​’ಗೆ ಶುಭಕೋರಿದ ಶಿವರಾಜ್​ಕುಮಾರ್​, ಡಿಕೆಶಿ; ಇಲ್ಲಿದೆ ಹತ್ತು ಹಲವು ಬಗೆಯ ಮನರಂಜನೆ

‘ಜೈಲರ್’ ಚಿತ್ರದಲ್ಲಿ ರಜನಿಕಾಂತ್ ಹೀರೊ ಆಗಿ ನಟಿಸಿದ್ದಾರೆ. ಶಿವರಾಜ್​ಕುಮಾರ್ ಮೊದಲಾದವರು ಅತಿಥಿ ಪಾತ್ರ ಮಾಡಿದ್ದಾರೆ. ತಮನ್ನಾ ಅವರ ಗ್ಲಾಮರ್ ಗಮನ ಸೆಳೆದಿದೆ. ರಜನಿಕಾಂತ್, ನಿರ್ದೇಶಕ ನೆಲ್ಸನ್ ದಿಲೀಪ್​ ಕುಮಾರ್ ಹಾಗೂ ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್​ಗೆ ಕಾರ್ ಗಿಫ್ಟ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ