‘ಅರ್ಜುನ್ ಚಕ್ರವರ್ತಿ’ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ; ಈ ಚಿತ್ರದಲ್ಲಿದೆ ಕಬಡ್ಡಿ ಆಟಗಾರನ ಕಥೆ

ವಿಕ್ರಾಂತ್ ರುದ್ರ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ವಿಜಯ ರಾಮರಾಜು ಅವರು ಅರ್ಜುನ್ ಚಕ್ರವರ್ತಿ ಪಾತ್ರವನ್ನು ಮಾಡುತ್ತಿದ್ದಾರೆ. ‘ಜರ್ನಿ ಆಫ್ ಅನ್‌ಸಂಗ್ ಚಾಂಪಿಯನ್’ ಎಂಬ ಟ್ಯಾಗ್​ಲೈನ್​ ಗಮನ ಸೆಳೆಯುತ್ತಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮೂಡಿಬರುತ್ತಿದೆ. ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ.

‘ಅರ್ಜುನ್ ಚಕ್ರವರ್ತಿ’ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ; ಈ ಚಿತ್ರದಲ್ಲಿದೆ ಕಬಡ್ಡಿ ಆಟಗಾರನ ಕಥೆ
‘ಅರ್ಜುನ್​ ಚಕ್ರವರ್ತಿ’ ಸಿನಿಮಾ ಫಸ್ಟ್​ ಲುಕ್​ ಪೋಸ್ಟರ್​
Follow us
|

Updated on: Oct 30, 2023 | 4:02 PM

ಕ್ರೀಡೆ ಮತ್ತು ಸಿನಿಮಾ ಕ್ಷೇತ್ರದ ನಡುವೆ ಮೊದಲಿನಿಂದಲೂ ನಂಟು ಇದೆ. ಕ್ರೀಡೆಯಲ್ಲಿ ಸಾಧನೆ ಮಾಡಿದ ಅನೇಕರ ಜೀವನವನ್ನು ಆಧರಿಸಿ ಈಗಾಗಲೇ ಸಾಕಷ್ಟು ಸಿನಿಮಾಗಳು (Biopic) ಬಂದಿವೆ. ಆ ಪೈಕಿ ಕೆಲವು ಚಿತ್ರಗಳು ಸೂಪರ್​ ಹಿಟ್​ ಆಗಿವೆ ಕೂಡ. ಇನ್ನೂ ಅಂತಹ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇವೆ. ತೆರೆಗೆ ತರಬಹುದಾದ ಅನೇಕ ಕಥೆಗಳು ಬಾಕಿ ಇವೆ. ಈಗ ಕಬಡ್ಡಿ (Kabaddi) ಆಟಗಾರ ಅರ್ಜುನ್​ ಚಕ್ರವರ್ತಿ ಕುರಿತು ಸಿನಿಮಾ ಸಿದ್ಧವಾಗುತ್ತಿದೆ. ‘ಅರ್ಜುನ್ ಚಕ್ರವರ್ತಿ’ (Arjun Chakravarthy) ಎಂದೇ ಈ ಸಿನಿಮಾಗೆ ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಅನಾವರಣ ಮಾಡಲಾಯಿತು.

ಹೇಗಿದೆ ‘ಅರ್ಜುನ್ ಚಕ್ರವರ್ತಿ’ ಫಸ್ಟ್​ ಲುಕ್​?

ಕ್ರೀಡಾಧಾರಿತ ಸಿನಿಮಾ ಆದ್ದರಿಂದ ‘ಅರ್ಜುನ್ ಚಕ್ರವರ್ತಿ’ ಪ್ರಾಜೆಕ್ಟ್​ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿದೆ. ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗಷ್ಟೇ ರಿಲೀಸ್​ ಆಗಿದ್ದು, ಪದಕವನ್ನು ಹಿಡಿದುಕೊಂಡು ಕ್ರೀಡಾಂಗಣದ ಮಧ್ಯಭಾಗದಲ್ಲಿ ನಿಂತು ವಿಜಯದ ಕ್ಷಣವನ್ನು ಅರ್ಜುನ್ ಚಕ್ರವರ್ತಿ ಅವರು ವಿವರಿಸುತ್ತಿರುವಂತಹ ದೃಶ್ಯ ಇದರಲ್ಲಿದೆ. ವಿಕ್ರಾಂತ್ ರುದ್ರ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ವಿಜಯ ರಾಮರಾಜು ಅವರು ಅರ್ಜುನ್ ಚಕ್ರವರ್ತಿ ಪಾತ್ರವನ್ನು ಮಾಡುತ್ತಿದ್ದಾರೆ. ಸಿಜಾ ರೋಸ್ ಕೂಡ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಲಾಲು ಬಯೋಪಿಕ್​ನಲ್ಲಿ ನಟಿಸೋಕೆ ಪಂಕಜ್ ತ್ರಿಪಾಠಿ ಸೂಕ್ತ; ಶುರುವಾಗಿದೆ ಚರ್ಚೆ 

ಸಿನಿಮಾದ ಬಗ್ಗೆ ವಿವರ:

1980ರ ದಶಕದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕಬಡ್ಡಿ ಆಟಗಾರ ಅರ್ಜುನ್ ಚಕ್ರವರ್ತಿ ಅವರ ಬದುಕಿನ ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮೂಡಿಬರುತ್ತಿದೆ. ಒಬ್ಬ ಕ್ರೀಡಾಪಟುವಿನ ಬದುಕಿನಲ್ಲಿ ಎದುರಾದ ಹೋರಾಟಗಳು ಹಾಗೂ ಸಿಕ್ಕ ಗೆಲುವಿನ ಸುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ದಯಾನಂದ ರೆಡ್ಡಿ, ಅಜಯ್, ಅಜಯ್ ಘೋಷ್ ಹಾಗೂ ದುರ್ಗೇಶ್ ಅವರು ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ವಿಘ್ನೇಶ್ ಭಾಸ್ಕರನ್ ಅವರ ಸಂಗೀತ ನಿರ್ದೇಶನ ಹಾಗೂ ಜಗದೀಶ್ ಚೀಕಾಟಿ ಅವರ ಛಾಯಾಗ್ರಹಣ ಈ ಸಿನಿಮಾಗಿದೆ. ‘ಗ್ಯಾನೆಟ್ ಸೆಲ್ಯುಲಾಯ್ಡ್’ ಬ್ಯಾನರ್​ ಅಡಿಯಲ್ಲಿ ನಿರ್ಮಾಪಕ ಶ್ರೀನಿ ಗುಬ್ಬಾಳ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ರಾಖಿ ಸಾವಂತ್​ ಬಯೋಪಿಕ್​ಗೆ ರಿಷಬ್​ ಶೆಟ್ಟಿ ನಿರ್ದೇಶನ? ಮೈಸೂರಿನಿಂದ ಹೊಸ ನ್ಯೂಸ್​

‘ಅರ್ಜುನ್​ ಚಕ್ರವರ್ತಿ’ ಚಿತ್ರದ ಬಗ್ಗೆ ನಿರ್ಮಾಪಕ ಶ್ರೀನಿ ಗುಬ್ಬಾಳ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಜರ್ನಿ ಆಫ್ ಅನ್‌ಸಂಗ್ ಚಾಂಪಿಯನ್’ ಎಂಬುದು ಈ ಚಿತ್ರದ ಟ್ಯಾಗ್​ ಲೈನ್​. ‘ಇದು ಕೇವಲ ಸಿನಿಮಾ ಅಲ್ಲ. ಸವಾಲುಗಳನ್ನು ಮೀರಿ ಎದ್ದುನಿಲ್ಲುವಂತಹ ಹಾಗೂ ನಮ್ಮೆಲ್ಲರಿಗೂ ಸ್ಫೂರ್ತಿ, ಪ್ರೇರಣೆ ನೀಡುವಂತಹ ವ್ಯಕ್ತಿಗಳ ಅದಮ್ಯ ಮನೋಭಾವಕ್ಕೆ ಸಲ್ಲಿಸುವಂತಹ ಗೌರವ ಇದಾಗಿದೆ. ಈ ಚಿತ್ರದಿಂದ ನಾವು ಇಚ್ಛಾಶಕ್ತಿ ಹಾಗೂ ಆತ್ಮಬಲದ ವಿಜಯವನ್ನು ಪ್ರದರ್ಶಿಸಲು ಬಯಸುತ್ತೇವೆ’ ಎಂದಿದ್ದಾರೆ ಶ್ರೀನಿ ಗುಬ್ಬಾಳ. ತೆಲುಗು ಹಾಗೂ ತಮಿಳಿನಲ್ಲಿ ಏಕಕಾಲದಲ್ಲಿ ಶೂಟಿಂಗ್​ ಮಾಡಲಾಗುತ್ತಿದೆ. ಕನ್ನಡ, ಮಲಯಾಳಂ ಮತ್ತು ಹಿಂದಿಗೆ ಡಬ್​ ಮಾಡಲಾಗುವುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ