AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್​ ಕೇಸ್​ನಲ್ಲಿ ಅರೆಸ್ಟ್ ಆದ ನಿರ್ಮಾಪಕನಿಗೆ ಚಿತ್ರರಂಗದವರೇ ಗ್ರಾಹಕರು? ಬಿಗ್ ಬಾಸ್ ಸ್ಪರ್ಧಿಯ ಹೆಸರು ರಿವೀಲ್

ಇತ್ತೀಚೆಗೆ ಚೌದರಿಯನ್ನು ಪೊಲೀಸರು ರೆಡ್​​ಹ್ಯಾಂಡ್​ ಆಗಿ ಹಿಡಿದಿದ್ದರು. ಅವರ ಬಳಿ ಡ್ರಗ್ಸ್ ಕೂಡ ಪತ್ತೆ ಆಗಿತ್ತು. ಈ ಕಾರಣದಿಂದ ಚೌದರಿಯನ್ನು ಪೊಲೀಸರು ನ್ಯಾಯಾಲಯದ ಎದುರು ಹಾಜರು ಪಡಿಸಿ, ತಮ್ಮ ಕಸ್ಟಡಿಗೆ ಪಡೆದಿದ್ದರು.

ಡ್ರಗ್​ ಕೇಸ್​ನಲ್ಲಿ ಅರೆಸ್ಟ್ ಆದ ನಿರ್ಮಾಪಕನಿಗೆ ಚಿತ್ರರಂಗದವರೇ ಗ್ರಾಹಕರು? ಬಿಗ್ ಬಾಸ್ ಸ್ಪರ್ಧಿಯ ಹೆಸರು ರಿವೀಲ್
ಚೌದರಿ-ಆಶು ರೆಡ್ಡಿ
ರಾಜೇಶ್ ದುಗ್ಗುಮನೆ
|

Updated on:Jun 24, 2023 | 8:58 AM

Share

ಟಾಲಿವುಡ್​​​ನಲ್ಲಿ ಮತ್ತೆ ಡ್ರಗ್ಸ್​ ವಾಸನೆ ಬಂದಿದೆ. ರಜನಿಕಾಂತ್ ನಟನೆಯ ‘ಕಬಾಲಿ’ ಚಿತ್ರದ ತೆಲುಗು ನಿರ್ಮಾಪಕ ಕೆ.ಪಿ.ಚೌದರಿಯನ್ನು (KP Chowdary) ಪೊಲೀಸರ ಇತ್ತೀಚೆಗೆ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಈ ಸಂದರ್ಭದಲ್ಲಿ ಅವರು ನೀಡಿರುವ ಮಾಹಿತಿಗಳು ಟಾಲಿವುಡ್​​ನಲ್ಲಿ ಸಂಚಲನ ಮೂಡಿಸಿವೆ. ಸದ್ಯ ಬೆಳಕಿಗೆ ಬಂದಿರುವ ಮಾಹಿತಿಗಳು ಸಾಕಷ್ಟು ಆತಂಕ ಮೂಡಿಸಿದೆ. ಇವರ ಜೊತೆ ನಂಟು ಹೊಂದಿದ ಸುಮಾರು 12 ಹೆಸರುಗಳು 2 ದಿನಗಳ ತನಿಖೆಯಲ್ಲಿ ಬೆಳಕಿಗೆ ಬಂದಿವೆ.  ‘ಬಿಗ್ ಬಾಸ್ ತೆಲುಗು’ ಸೀಸನ್ ಒಂದರಲ್ಲಿ ಭಾಗವಹಿಸಿದ್ದ ಆಶು ರೆಡ್ಡಿ (Ashu Reddy) ಜೊತೆ ಕೆ.ಪಿ.ಚೌದರಿ ನೂರಾರು ಬಾರಿ ಫೋನ್​ನಲ್ಲಿ ಮಾತನಾಡಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಇತ್ತೀಚೆಗೆ ಚೌದರಿಯನ್ನು ಪೊಲೀಸರು ರೆಡ್​​ಹ್ಯಾಂಡ್​ ಆಗಿ ಹಿಡಿದಿದ್ದರು. ಅವರ ಬಳಿ ಡ್ರಗ್ಸ್ ಕೂಡ ಪತ್ತೆ ಆಗಿತ್ತು. ಈ ಕಾರಣದಿಂದ ಚೌದರಿಯನ್ನು ಪೊಲೀಸರು ನ್ಯಾಯಾಲಯದ ಎದುರು ಹಾಜರು ಪಡಿಸಿ, ತಮ್ಮ ಕಸ್ಟಡಿಗೆ ಪಡೆದಿದ್ದರು. ಕೆಪಿ ಬ್ಯಾಂಕ್ ವಹಿವಾಟುಗಳನ್ನು ಪೊಲೀಸರು ಪರಿಶೀಲಿಸಿದ್ದರು. ಈ ವೇಳೆ 12 ವ್ಯಕ್ತಿಗಳ ಮೇಲೆ ಅನುಮಾನ ಮೂಡಿದೆ. ರಘು ತೇಜ, ಸುಶಾಂತ್ ರೆಡ್ಡಿ, ಸನಾ ಮಿಶ್ರಾ, ಶ್ವೇತಾ, ಟಾಗೋರ್ ಪ್ರಸಾದ್ ಸೇರಿದಂತೆ ಕೆಲವರ ಹೆಸರು ಕೆ.ಪಿ.ಚೌದರಿ ಅವರ ಡ್ರಗ್ಸ್ ಗ್ರಾಹಕರ ಪಟ್ಟಿಯಲ್ಲಿ ಇರುವುದು ಗೊತ್ತಾಗಿದೆ.

ಇದು ಒಂದು ಮಾಹಿತಿ ಆದರೆ, ಮತ್ತೊಂದು ಕಡೆ ಅವರು ತಾವು ಯಾವ ಸೆಲೆಬ್ರಿಟಿಗೂ ಡ್ರಗ್ ಸಪ್ಲೈ ಮಾಡಿಲ್ಲ ಎಂದು ಹೇಳಿದ್ದಾರಂತೆ. ‘ನಾನೇ ಡ್ರಗ್ಸ್ ತೆಗೆದುಕೊಳ್ಳುತ್ತೇನೆ. ಆ ಡ್ರಗ್ಸ್ ನನಗಾಗಿ ತಂದಿದ್ದು. ನಾನು ಯಾವ ಸೆಲೆಬ್ರಿಟಿಗಳಿಗೂ ಡ್ರಗ್ಸ್ ಮಾರಿಲ್ಲ’ ಎಂದು ಅವರು ಹೇಳಿದ್ದಾರೆ ಎನ್ನುತ್ತಿವೆ ಮೂಲಗಳು.

ಇದನ್ನೂ ಓದಿ: KP Chowdary: ಡ್ರಗ್ಸ್​ ಮಾರಾಟ ಮಾಡುತ್ತಿದ್ದ ‘ಕಬಾಲಿ’ ಸಿನಿಮಾ ನಿರ್ಮಾಪಕ ಕೆ.ಪಿ. ಚೌದರಿ ಬಂಧನ; 90 ಪಾಕೆಟ್​ ಮಾದಕ ವಸ್ತು ವಶ

ಸದ್ಯ ಈ ಬೆಳವಣಿಗೆ ಬಾಲಿವುಡ್​ನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಈಗ ಪೊಲೀಸರು ಆಶು ರೆಡ್ಡಿ ಹಾಗೂ ಇತರರಿಗೆ ಶೀಘ್ರವೇ ನೋಟಿಸ್ ನೀಡುವ ಸಾಧ್ಯತೆ ಇದೆ. ಇವರ ವಿಚಾರಣೆ ವೇಳೆ ಮತ್ತಷ್ಟು ಮಾಹಿತಿಗಳು ಲೀಕ್ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:13 am, Sat, 24 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ