AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಕಲಾವಿದ ಕಬೀರ್​ ಬೇಡಿ ಇಟಲಿಯಲ್ಲಿ ‘ಮಾದಕ ನಟ’ ಎನಿಸಿಕೊಳ್ಳಲು ಕಾರಣ ಆಗಿದ್ದು ಆ ಒಂದು ಧಾರಾವಾಹಿ

ಇಷ್ಟು ವರ್ಷಗಳ ತಮ್ಮ ಸಿನಿಮಾ ಪಯಣ ಮತ್ತು ವೈಯಕ್ತಿಕ ಜೀವನದ ಬಗ್ಗೆ ಕಬೀರ್​ ಬೇಡಿ ಆತ್ಮಚರಿತ್ರೆ ಬರೆದಿದ್ದಾರೆ. ‘ಸ್ಟೋರೀಸ್​ ಐ ಮಸ್ಟ್​ ಟೆಲ್​’ ಹೆಸರಿನ ಈ ಪುಸ್ತಕದಲ್ಲಿ ಹಲವು ಘಟನೆಗಳನ್ನು ಮೆಲುಕು ಹಾಕಲಾಗಿದೆ.

ಬಾಲಿವುಡ್​ ಕಲಾವಿದ ಕಬೀರ್​ ಬೇಡಿ ಇಟಲಿಯಲ್ಲಿ ‘ಮಾದಕ ನಟ’ ಎನಿಸಿಕೊಳ್ಳಲು ಕಾರಣ ಆಗಿದ್ದು ಆ ಒಂದು ಧಾರಾವಾಹಿ
ಕಬೀರ್ ಬೇಡಿ
ಮದನ್​ ಕುಮಾರ್​
|

Updated on: May 02, 2021 | 9:24 AM

Share

ನಟ ಕಬೀರ್​ ಬೇಡಿ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಛಾಫು ಮೂಡಿಸಿದವರು. ಬಾಲಿವುಡ್​ಗೆ ಮಾತ್ರ ಅವರ ಪ್ರತಿಭೆ ಸೀಮಿತ ಆಗಿರಲಿಲ್ಲ. 1970ರ ದಶಕದಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಅವರು ಬೇರೆ ದೇಶಗಳಲ್ಲೂ ಫೇಮಸ್​ ಆಗಿದ್ದಾರೆ. ಅಮೆರಿಕ ಮತ್ತು ಇಟಲಿಯಲ್ಲೂ ಈ ನಟನಿಗೆ ಅಭಿಮಾನಿಗಳಿದ್ದಾರೆ. ಟಿವಿ, ಸಿನಿಮಾ ಮತ್ತು ರಂಗಭೂಮಿಯಲ್ಲಿ ಗುರುತಿಸಿಕೊಂಡ ಕಬೀರ್​ ಬೇಡಿ ಅವರು ಇಟಲಿಯಲ್ಲಿ ಮಾದಕ ನಟ ಎಂಬ ಖ್ಯಾತಿಗೆ ಒಳಗಾಗಿದ್ದರು.

ಇಷ್ಟು ವರ್ಷಗಳ ತಮ್ಮ ಸಿನಿಮಾ ಪಯಣ ಮತ್ತು ವೈಯಕ್ತಿಕ ಜೀವನದ ಬಗ್ಗೆ ಕಬೀರ್​ ಬೇಡಿ ಆತ್ಮಚರಿತ್ರೆ ಬರೆದಿದ್ದಾರೆ. ‘ಸ್ಟೋರೀಸ್​ ಐ ಮಸ್ಟ್​ ಟೆಲ್​’ ಹೆಸರಿನ ಈ ಪುಸ್ತಕದಲ್ಲಿ ಹಲವು ಘಟನೆಗಳನ್ನು ಮೆಲುಕು ಹಾಕಲಾಗಿದೆ. ವಿಶೇಷವಾಗಿ ‘ಸಾಂಡುಕಾನ್​’ ಧಾರಾವಾಹಿ ಬಗ್ಗೆ ಕಬೀರ್ ಬೇಡಿ ನೆನಪಿಸಿಕೊಂಡಿದ್ದಾರೆ. 1976ರಲ್ಲಿ ಸಾಂಡುಕಾನ್​ ಸೀರಿಯಲ್​ ಇಟಲಿಯಲ್ಲಿ ಮೂಡಿಬಂದಿತ್ತು. ಆ ಧಾರಾವಾಹಿಯಲ್ಲಿ ಕಥಾನಾಯಕನ (ಸಾಂಡುಕಾನ್​) ಪಾತ್ರ ಮಾಡಿದವರು ಕಬೀರ್​ ಬೇಡಿ.

ಈ ಧಾರಾವಾಹಿಯಲ್ಲಿ ನಟಿಸಿದ ಬಳಿಕ ಕಬೀರ್​ ಬೇಡಿಗೆ ಇಡೀ ಯೂರೋಪ್​ನಲ್ಲಿ ಜನಪ್ರಿಯತೆ ಸಿಕ್ಕಿತು. ಬಳಿಕ ಅವರು ಹಾಲಿವುಡ್​ಗೂ ಕಾಲಿಡುವಂತಾಯಿತು. ಅಚ್ಚರಿ ಎಂದರೆ ಸಾಂಡುಕಾನ್​ ಧಾರಾವಾಹಿಯಲ್ಲಿ ನಟಿಸಿದ ಬಳಿಕ ಕಬೀರ್​ ಬೇಡಿ ಅವರು ಇಟಲಿಯ ಪ್ರೇಕ್ಷಕರಿಂದ ‘ಮಾದಕ ನಟ’ ಎಂದು ಕರೆಸಿಕೊಳ್ಳಬೇಕಾಯಿತು. ಅದಕ್ಕೆ ಕಾರಣ ಅವರು ಮಾಡಿದ ಆ ಪಾತ್ರ. ಬ್ರಿಟಿಷರ ವಿರುದ್ಧ ಸೇಡು ತೀರಿಸಿಕೊಳ್ಳುವ ಪೈರೇಟ್​ ಆಗಿ ಕಬೀರ್ ಬೇಡಿ ಕಾಣಿಸಿಕೊಂಡಿದ್ದರು.

ಆ ಸಮಯಕ್ಕೆ ಸಾಂಡುಕಾನ್​ ಸೀರಿಯಲ್​ನಿಂದ ಕಬೀರ್​ಗೆ ಎಷ್ಟು ಜನಪ್ರಿಯತೆ ಸಿಕ್ಕಿತ್ತು ಎಂದರೆ ಇಟಲಿಯ ಅನೇಕ ಪೋಷಕರು ತಮ್ಮ ಮಕ್ಕಳಿಗೆ ಕಬೀರ್​ ಎಂದು ಹೆಸರಿಡಲು ನೋಂದಣಿ ಕಚೇರಿ ಎದುರು ಸಾಲುಗಟ್ಟಿ ನಿಂತಿದ್ದರು ಎಂಬುದನ್ನು ಈ ಪುಸ್ತಕದಲ್ಲಿ ಅವರು ನೆನಪಿಸಿಕೊಂಡಿದ್ದಾರೆ. ಬ್ರಿಟಿಷ್​ ಹುಡುಗಿಯ ಜೊತೆಗೆ ಸಾಂಡುಕಾನ್​ಗೆ ಲವ್​ ಆಗುತ್ತದೆ. ಪ್ರೀತಿ-ಪ್ರೇಮದ ದೃಶ್ಯಗಳಲ್ಲಿ ಕಬೀರ್​ ಎಲ್ಲರನ್ನೂ ಸೆಳೆದುಕೊಂಡಿದ್ದರು. ಆ ಕಾರಣಕ್ಕಾಗಿ ಅವರಿಗೆ ಮಾದಕ ನಟ ಎಂಬ ಇಮೇಜ್​ ಸಿಕ್ಕಿತು.

ಕೇವಲ 6 ಎಪಿಸೋಡ್​ಗಳನ್ನು ಹೊಂದಿದ್ದ ಆ ಧಾರಾವಾಹಿಗೆ ಇಟಲಿ ಜನರು ಫಿದಾ ಆಗಿದ್ದರು. ಫ್ರೆಂಚ್, ಡಚ್​, ಸ್ಪ್ಯಾನಿಶ್​, ಜರ್ಮನ್​ ಭಾಷೆಗಳಲ್ಲೂ ಈ ಧಾರಾವಾಹಿ ಮೂಡಿಬಂದಿತ್ತು. 2012ರಲ್ಲಿ ಇದು ಹಿಂದಿಗೂ ಡಬ್​ ಆಗಿ, ಡಿವಿಡಿಗಳ ಮೂಲಕ ಭಾರತದಲ್ಲೂ ವೀಕ್ಷಣೆಗೆ ಲಭ್ಯವಾಯಿತು. ಸಾಂಡುಕಾನ್​ ಸೀರಿಯಲ್​ ಮಾತ್ರವಲ್ಲದೆ ಅನೇಕ ವಿಚಾರಗಳ ಬಗ್ಗೆ ತಮ್ಮ ಆತ್ಮಚರಿತ್ರೆಯಲ್ಲಿ ಕಬೀರ್​ ಬೇಡಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

ಚಿತ್ರರಂಗಕ್ಕೆ ಶಾಪವಾದ ಕೊರೊನಾ; ಬಾಲಿವುಡ್​ನ ಖ್ಯಾತ ನಟ ಕೊವಿಡ್​​ಗೆ ಬಲಿ

ದೊಡ್ಡ ಹೀರೋಗಳು ತಲೆಮರೆಸಿಕೊಂಡಿದ್ದಾರೆ, ಬಾಲಿವುಡ್​ ಉಳಿಯೋದು ನನ್ನಿಂದಲೇ: ಕಂಗನಾ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು