AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Tittle Song: ರಿಲೀಸ್ ಆಯ್ತು ‘ಕಬ್ಜ’ ಟೈಟಲ್ ಸಾಂಗ್​; ರವಿ ಬಸ್ರೂರ್ ಕಮಾಲ್

‘ಕೆಜಿಎಫ್’ ಸರಣಿಯಿಂದ ಹೊರ ಬಂದ ಎರಡೂ ಚಿತ್ರಗಳಿಗೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಚಿತ್ರದ ಹಾಡುಗಳು ಹಿಟ್ ಆದವು. ಈಗ ‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 04, 2023 | 7:59 PM

Share

ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ಕಬ್ಜ’ ಸಿನಿಮಾದ (Kabzaa Movie) ಟೈಟಲ್ ಸಾಂಗ್ ಅದ್ದೂರಿ ಕಾರ್ಯಕ್ರಮದಲ್ಲಿ ಇಂದು ರಿಲೀಸ್ ಆಗಿದೆ. ಈ ಸಾಂಗ್ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಐದು ಭಾಷೆಗಳಲ್ಲಿ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ರವಿ ಬಸ್ರೂರ್ (Ravi Basrur) ಅವರ ಸಂಗೀತ ಸಂಯೋಜನೆ ಕಮಾಲ್ ಮಾಡಿದೆ. ಈ ಹಾಡಿನಿಂದ ಚಿತ್ರಕ್ಕೆ ಮತ್ತಷ್ಟು ಮೈಲೇಜ್ ಸಿಕ್ಕಿದೆ.

‘ಕೆಜಿಎಫ್’ ಸರಣಿಯಿಂದ ಹೊರ ಬಂದ ಎರಡೂ ಚಿತ್ರಗಳಿಗೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಚಿತ್ರದ ಹಾಡುಗಳು ಹಿಟ್ ಆದವು. ಚಿತ್ರದ ಬಿಜಿಎಂಗೆ ಭರಪೂರ ಮೆಚ್ಚುಗೆ ಸಿಕ್ಕವು. ಈಗ ‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ ರೀತಿಯೇ ‘ಕಬ್ಜ’ ಚಿತ್ರ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಈ ಎಲ್ಲಾ ಕಾರಣದಿಂದ ‘ಕಬ್ಜ’ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ.

ಇಂದು ಹೈದರಾಬಾದ್​ನಲ್ಲಿ ಅದ್ದೂರಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಹಲವು ದಿಗ್ಗಜರು ಬರುತ್ತಿದ್ದಾರೆ. ‘ಆರ್​ಆರ್​ಆರ್​’ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕಿತ್ತು. ಆದರೆ, ಇತ್ತೀಚೆಗೆ ಕೆ. ವಿಶ್ವನಾಥ್ ಅವರು ನಿಧನ ಹೊಂದಿದರು. ಟಾಲಿವುಡ್​ನಲ್ಲಿ ಶೋಕದ ವಾತಾವರಣ ಇರುವುದರಿಂದ ಈ ಸೆಲೆಬ್ರಿಟಿಗಳು ಇಂದಿನ ಕಾರ್ಯಕ್ರಮಕ್ಕೆ ಹಾಜರಿ ಹಾಕಿಲ್ಲ. ಸದ್ಯ ರಿಲೀಸ್ ಆಗಿರುವ ಹಾಡಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರವಿ ಬಸ್ರೂರ್ ಅವರ ಸಂಗೀತ ಸಂಯೋಜನೆಯನ್ನು ಕೇಳುಗರು ಇಷ್ಟಪಟ್ಟಿದ್ದಾರೆ.

ಮಾರ್ಚ್ 17ಕ್ಕೆ ಸಿನಿಮಾ ರಿಲೀಸ್

ಮಾರ್ಚ್​ 17ಕ್ಕೆ ಕಬ್ಜ ಸಿನಿಮಾ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರ ಪ್ಯಾನ್ ಇಂಡಿಯಾ ಆದ ಕಾರಣ ಎಲ್ಲ ನಗರಗಳಿಗೆ ತೆರಳಿ ಸಾಂಗ್ ರಿಲೀಸ್ ಮಾಡಲಾಗುತ್ತಿದೆ. ಟ್ರೇಲರ್ ರಿಲೀಸ್ ಕಾರ್ಯಕ್ರಮ ಕೂಡ ಜೋರಾಗಿಯೇ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ