AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Tittle Song: ರಿಲೀಸ್ ಆಯ್ತು ‘ಕಬ್ಜ’ ಟೈಟಲ್ ಸಾಂಗ್​; ರವಿ ಬಸ್ರೂರ್ ಕಮಾಲ್

‘ಕೆಜಿಎಫ್’ ಸರಣಿಯಿಂದ ಹೊರ ಬಂದ ಎರಡೂ ಚಿತ್ರಗಳಿಗೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಚಿತ್ರದ ಹಾಡುಗಳು ಹಿಟ್ ಆದವು. ಈಗ ‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 04, 2023 | 7:59 PM

Share

ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ಕಬ್ಜ’ ಸಿನಿಮಾದ (Kabzaa Movie) ಟೈಟಲ್ ಸಾಂಗ್ ಅದ್ದೂರಿ ಕಾರ್ಯಕ್ರಮದಲ್ಲಿ ಇಂದು ರಿಲೀಸ್ ಆಗಿದೆ. ಈ ಸಾಂಗ್ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಐದು ಭಾಷೆಗಳಲ್ಲಿ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ರವಿ ಬಸ್ರೂರ್ (Ravi Basrur) ಅವರ ಸಂಗೀತ ಸಂಯೋಜನೆ ಕಮಾಲ್ ಮಾಡಿದೆ. ಈ ಹಾಡಿನಿಂದ ಚಿತ್ರಕ್ಕೆ ಮತ್ತಷ್ಟು ಮೈಲೇಜ್ ಸಿಕ್ಕಿದೆ.

‘ಕೆಜಿಎಫ್’ ಸರಣಿಯಿಂದ ಹೊರ ಬಂದ ಎರಡೂ ಚಿತ್ರಗಳಿಗೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಚಿತ್ರದ ಹಾಡುಗಳು ಹಿಟ್ ಆದವು. ಚಿತ್ರದ ಬಿಜಿಎಂಗೆ ಭರಪೂರ ಮೆಚ್ಚುಗೆ ಸಿಕ್ಕವು. ಈಗ ‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ ರೀತಿಯೇ ‘ಕಬ್ಜ’ ಚಿತ್ರ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಈ ಎಲ್ಲಾ ಕಾರಣದಿಂದ ‘ಕಬ್ಜ’ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ.

ಇಂದು ಹೈದರಾಬಾದ್​ನಲ್ಲಿ ಅದ್ದೂರಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಹಲವು ದಿಗ್ಗಜರು ಬರುತ್ತಿದ್ದಾರೆ. ‘ಆರ್​ಆರ್​ಆರ್​’ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕಿತ್ತು. ಆದರೆ, ಇತ್ತೀಚೆಗೆ ಕೆ. ವಿಶ್ವನಾಥ್ ಅವರು ನಿಧನ ಹೊಂದಿದರು. ಟಾಲಿವುಡ್​ನಲ್ಲಿ ಶೋಕದ ವಾತಾವರಣ ಇರುವುದರಿಂದ ಈ ಸೆಲೆಬ್ರಿಟಿಗಳು ಇಂದಿನ ಕಾರ್ಯಕ್ರಮಕ್ಕೆ ಹಾಜರಿ ಹಾಕಿಲ್ಲ. ಸದ್ಯ ರಿಲೀಸ್ ಆಗಿರುವ ಹಾಡಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರವಿ ಬಸ್ರೂರ್ ಅವರ ಸಂಗೀತ ಸಂಯೋಜನೆಯನ್ನು ಕೇಳುಗರು ಇಷ್ಟಪಟ್ಟಿದ್ದಾರೆ.

ಮಾರ್ಚ್ 17ಕ್ಕೆ ಸಿನಿಮಾ ರಿಲೀಸ್

ಮಾರ್ಚ್​ 17ಕ್ಕೆ ಕಬ್ಜ ಸಿನಿಮಾ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರ ಪ್ಯಾನ್ ಇಂಡಿಯಾ ಆದ ಕಾರಣ ಎಲ್ಲ ನಗರಗಳಿಗೆ ತೆರಳಿ ಸಾಂಗ್ ರಿಲೀಸ್ ಮಾಡಲಾಗುತ್ತಿದೆ. ಟ್ರೇಲರ್ ರಿಲೀಸ್ ಕಾರ್ಯಕ್ರಮ ಕೂಡ ಜೋರಾಗಿಯೇ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ