AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Twitter Review: ‘ಕಬ್ಜ’ ನೋಡಿ ಏನು ಹೇಳ್ತಿದ್ದಾರೆ ಫಸ್ಟ್​ ಡೇ ಪ್ರೇಕ್ಷಕರು? ಇಲ್ಲಿದೆ ಟ್ವಿಟರ್​ ವಿಮರ್ಶೆ

Kabzaa Review | Upendra: ಉಪೇಂದ್ರ, ಶಿವರಾಜ್​ಕುಮಾರ್​, ಕಿಚ್ಚ ಸುದೀಪ್​ ಅವರ ಕಾಂಬಿನೇಷನ್​ನಿಂದ ‘ಕಬ್ಜ’ ಚಿತ್ರ ಸೌಂಡು ಮಾಡುತ್ತಿದೆ. ಅಭಿಮಾನಿಗಳು ಟ್ವಿಟರ್​ನಲ್ಲಿ ತಮ್ಮ ವಿಮರ್ಶೆ ತಿಳಿಸಿದ್ದಾರೆ.

Kabzaa Twitter Review: ‘ಕಬ್ಜ’ ನೋಡಿ ಏನು ಹೇಳ್ತಿದ್ದಾರೆ ಫಸ್ಟ್​ ಡೇ ಪ್ರೇಕ್ಷಕರು? ಇಲ್ಲಿದೆ ಟ್ವಿಟರ್​ ವಿಮರ್ಶೆ
ಕಬ್ಜ ಸಿನಿಮಾ ಪೋಸ್ಟರ್
ಮದನ್​ ಕುಮಾರ್​
|

Updated on:Mar 17, 2023 | 3:30 PM

Share

‘ಕೆಜಿಎಫ್​: ಚಾಪ್ಟರ್​ 2’, ‘ವಿಕ್ರಾಂತ್​ ರೋಣ’, ‘ಕಾಂತಾರ’ ಸಿನಿಮಾಗಳು ಅಬ್ಬರಿಸಿದ ಪರಿ ಕಂಡು ಕನ್ನಡ ಚಿತ್ರರಂಗದ ಬಗ್ಗೆ ಇಡೀ ಭಾರತೀಯ ಸಿನಿಮಾರಂಗ ಮಾತನಾಡಿಕೊಳ್ಳುವಂತೆ ಆಯಿತು. ಅದೇ ಮಾದರಿಯಲ್ಲಿ ‘ಕಬ್ಜ’ ಚಿತ್ರ (Kabzaa Movie) ಕೂಡ ಸೌಂಡು ಮಾಡುತ್ತಿದೆ. ಆರ್​. ಚಂದ್ರು (R Chandru) ಅವರ ಸಾರಥ್ಯದಲ್ಲಿ ಬಂದಿರುವ ಈ ಚಿತ್ರ ಇಂದು (ಮಾರ್ಚ್​ 17) ಗ್ರ್ಯಾಂಡ್​ ಆಗಿ ತೆರೆಕಂಡಿದೆ. ವಿಶ್ವಾದ್ಯಂತ 4000 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ‘ಕಬ್ಜ’ ಪ್ರದರ್ಶನ ಕಾಣುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ಮಲಯಾಳಂ, ಹಿಂದಿ, ತಮಿಳಿನಲ್ಲಿ ಈ ಚಿತ್ರ ರಿಲೀಸ್​ ಆಗಿದೆ. ಕನ್ನಡಿಗರ ಹಾಗೆಯೇ ಪರಭಾಷೆಯ ಪ್ರೇಕ್ಷಕರು ಕೂಡ ಫಸ್ಟ್​ ಡೇ ಫಸ್ಟ್​ ಶೋ ನೋಡಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಉಪೇಂದ್ರ ಅವರ ಅಭಿಮಾನಿಗಳಿಗೆ ಈ ಸಿನಿಮಾ ಮಸ್ತ್​ ಮನರಂಜನೆ ನೀಡಿದೆ. ಪ್ರೇಕ್ಷಕರು ಹಂಚಿಕೊಂಡ ‘ಕಬ್ಜ’ ಟ್ವಿಟರ್​ ವಿಮರ್ಶೆ (Kabzaa Twitter Review) ಇಲ್ಲಿದೆ..

ಕಿಚ್ಚ ಸುದೀಪ್​ ಅವರು ‘ಕಬ್ಜ’ ಸಿನಿಮಾದ ಆರಂಭದಲ್ಲೇ ಎಂಟ್ರಿ ನೀಡುತ್ತಾರೆ. ಅವರ ಪಾತ್ರದ ಮ್ಯಾನರಿಸಂ, ಡೈಲಾಗ್​ ಡೆಲಿವರಿ ಅಭಿಮಾನಿಗಳಿಗೆ ಇಷ್ಟ ಆಗಿದೆ. ಸಿನಿಮಾದುದ್ದಕ್ಕೂ ಅವರ ಧ್ವನಿಯಲ್ಲೇ ಕಥೆ ನಿರೂಪಿತವಾಗುತ್ತದೆ. ಕ್ಲೈಮ್ಯಾಕ್ಸ್​ನಲ್ಲೂ ಅವರು ಅಬ್ಬರಿಸುತ್ತಾರೆ. ಹಾಗಾಗಿ ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ಈ ಚಿತ್ರ ಇಷ್ಟ ಆಗಿದೆ.

ಇದನ್ನೂ ಓದಿ
Image
Kabzaa Movie Review: 1970ರ ಕಾಲಕ್ಕೆ ಕರೆದೊಯ್ಯುವ ‘ಕಬ್ಜ’; ತೆರೆ ಹಿಂದಿನ ಹೀರೋಗಳ ಅದ್ದೂರಿ ಸಿನಿಮಾ
Image
‘ಕ್ಲೈಮ್ಯಾಕ್ಸ್ ಮಿಸ್ ಮಾಡೋ ಮಾತೇ ಇಲ್ಲ’; ‘ಕಬ್ಜ’ ನೋಡಿದ ಅಭಿಮಾನಿಗಳ ರಿಯಾಕ್ಷನ್
Image
Kabzaa First Half Review: ಹೇಗಿದೆ ‘ಕಬ್ಜ’ ಚಿತ್ರದ ಮೊದಲಾರ್ಧ? ಉಪೇಂದ್ರ-ಆರ್​. ಚಂದ್ರು ತೆರೆದಿಟ್ಟ ಬೇರೊಂದು ಲೋಕ ಇಲ್ಲಿದೆ..
Image
ಪವನ್ ಕಲ್ಯಾಣ್​ ಚಿತ್ರಕ್ಕೆ ಆರ್​. ಚಂದ್ರು ನಿರ್ದೇಶನ? ‘ಕಬ್ಜ’ ನೋಡಿ ಮೆಚ್ಚಿಕೊಂಡ ಪವರ್​ಸ್ಟಾರ್

ಬಹುತೇಕ ಎಲ್ಲರಿಗೂ ‘ಕಬ್ಜ’ ಸಿನಿಮಾದ ಕ್ಲೈಮ್ಯಾಕ್ಸ್​ ಇಷ್ಟ ಆಗಿದೆ. ಪ್ರತಿ ಹಂತದಲ್ಲೂ ಕೌತುಕ ಮೂಡಿಸುವಂತಹ ಶಕ್ತಿ ಈ ಚಿತ್ರಕ್ಕಿದೆ. ಉಪೇಂದ್ರ, ಶ್ರೀಯಾ ಶರಣ್​, ಮುರಳಿ ಶರ್ಮಾ ಅವರ ಕಾಂಬಿನೇಷನ್​ ಚೆನ್ನಾಗಿದೆ ಎಂದು ಅಭಿಮಾನಿಗಳು ಟ್ವೀಟ್​ ಮಾಡಿದ್ದಾರೆ.

ಶಿವರಾಜ್​ಕುಮಾರ್​ ಅವರು ಕುತೂಹಲಭರಿತವಾದ ಪಾತ್ರದಲ್ಲಿ ಪ್ರೇಕ್ಷಕರ ಎದುರು ಕಾಣಿಸಿಕೊಳ್ಳುತ್ತಾರೆ. ‘ನೀವು ಏನನ್ನು ಬೇಕಿದ್ದರೂ ನಿರ್ಲಕ್ಷಿಸಬಹುದು. ಆದರೆ ಶಿವಣ್ಣನ ಎಂಟ್ರಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ’ ಎಂದು ಶಿವರಾಜ್​ಕುಮಾರ್​ ಅವರ ಅಪ್ಪಟ ಅಭಿಮಾನಿಗಳು ಟ್ವಿಟರ್​ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

‘ಕಬ್ಜ’ ಚಿತ್ರದಲ್ಲಿ ತಾಂತ್ರಿಕ ಗುಣಮಟ್ಟ ಸೂಪರ್​ ಆಗಿದೆ. ಎಜೆ ಶೆಟ್ಟಿ ಅವರ ಛಾಯಾಗ್ರಹಣ, ಶಿವಕುಮಾರ್​ ಅವರ ಕಲಾ ನಿರ್ದೇಶನ, ರವಿ ಬಸ್ರೂರು ಅವರ ಸಂಗೀತ ನಿರ್ದೇಶನ, ಮಹೇಶ್​ ರೆಡ್ಡಿ ಅವರ ಸಂಕಲನ ಗಮನ ಸೆಳೆಯುತ್ತಿದೆ. ಹಾಗಾಗಿ ಈ ಸಿನಿಮಾವನ್ನು ಚಿತ್ರಮಂದಿರದಲ್ಲೇ ನೋಡಿ ಎಂಜಾಯ್​ ಮಾಡಬೇಕು ಎನ್ನುತ್ತಿದ್ದಾರೆ ಫ್ಯಾನ್ಸ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:30 pm, Fri, 17 March 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!