AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithviraj Sukumaran: ‘ನನ್ನಿಂದ ತಪ್ಪಾಗಿದೆ, ಒಪ್ಪಿಕೊಳ್ತೀನಿ, ದಯವಿಟ್ಟು ಕ್ಷಮಿಸಿ’: ಬಹಿರಂಗವಾಗಿ ಕ್ಷಮೆ ಕೇಳಿದ ಪೃಥ್ವಿರಾಜ್​ ಸುಕುಮಾರನ್​

Kaduva | Prithviraj Sukumaran: ‘ಕಡುವ’ ಚಿತ್ರದ ಒಂದು ದೃಶ್ಯಕ್ಕೆ ಜನರಿಂದ ಆಕ್ಷೇಪ ವ್ಯಕ್ತವಾಗಿದೆ. ನಿರ್ದೇಶಕ ಶಾಜಿ ಕೈಲಾಸ್​ ಮತ್ತು ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

Prithviraj Sukumaran: ‘ನನ್ನಿಂದ ತಪ್ಪಾಗಿದೆ, ಒಪ್ಪಿಕೊಳ್ತೀನಿ, ದಯವಿಟ್ಟು ಕ್ಷಮಿಸಿ’: ಬಹಿರಂಗವಾಗಿ ಕ್ಷಮೆ ಕೇಳಿದ ಪೃಥ್ವಿರಾಜ್​ ಸುಕುಮಾರನ್​
ಪೃಥ್ವಿರಾಜ್ ಸುಕುಮಾರನ್
TV9 Web
| Edited By: |

Updated on: Jul 11, 2022 | 12:58 PM

Share

ಖ್ಯಾತ ನಟ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರ ಸುತ್ತ ವಿವಾದವೊಂದು ಸುತ್ತಿಕೊಂಡಿದೆ. ಅವರ ಹೊಸ ಸಿನಿಮಾದಲ್ಲಿ ಅಂಗವಿಕಲ ಮಕ್ಕಳ ಪೋಷಕರಿಗೆ ಅವಮಾನ ಆಗಿದೆ ಎಂಬ ಆರೋಪ ಎದುರಾಗಿದೆ. ಇದನ್ನು ಸ್ವತಃ ಪೃಥ್ವಿರಾಜ್​ ಸುಕುಮಾರನ್​ ಕೂಡ ಒಪ್ಪಿಕೊಂಡು ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ತಪ್ಪು ಒಪ್ಪಿಕೊಂಡ ಅವರ ನಡೆಗೆ ಅನೇಕರು ಭೇಷ್​ ಎನ್ನುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರ ಪೋಸ್ಟ್​ ವೈರಲ್​ ಆಗುತ್ತಿದೆ. ಪೃಥ್ವಿರಾಜ್​ ಸುಕುಮಾರನ್​ ನಟನೆಯ ‘ಕಡುವ’ ಸಿನಿಮಾ (Kaduva) ಇತ್ತೀಚೆಗಷ್ಟೇ ಬಿಡುಗಡೆ ಆಯಿತು. ಈ ಸಿನಿಮಾದಲ್ಲಿನ ಒಂದು ದೃಶ್ಯದ ಬಗ್ಗೆ ಅಂಗವಿಕಲ ಮಕ್ಕಳ (Differently Abled Children) ಪೋಷಕರು ಆಕ್ಷೇಪ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಚಿತ್ರತಂಡದವರು ಕ್ಷಮೆ ಕೇಳಿದ್ದಾರೆ.

ವಿಭಿನ್ನ ಕಥಾಹಂದರದ ಸಿನಿಮಾಗಳ ಮೂಲಕ ಗುರುತಿಸಿಕೊಂಡ ಖ್ಯಾತಿ ಪೃಥ್ವಿರಾಜ್​ ಸುಕುಮಾರನ್​ ಅವರಿಗೆ ಇದೆ. ಹಾಗಾಗಿ ಅವರ ಮೇಲೆ ಅಭಿಮಾನಿಗಳು ಹೆಚ್ಚು ಭರವಸೆ ಇಟ್ಟುಕೊಂಡಿರುತ್ತಾರೆ. ಅಂಥ ನಟನಿಂದ ಈ ರೀತಿ ಪ್ರಮಾದ ಆಗಿರುವುದು ಎಲ್ಲರಿಗೂ ಬೇಸರ ಆಗಿದೆ. ‘ತಂದೆ-ತಾಯಿ ಮಾಡಿದ ತಪ್ಪಿನಿಂದಲೇ ಅಂಗವಿಕಲ ಮಕ್ಕಳು ಜನಿಸುತ್ತಾರೆ’ ಎಂಬರ್ಥದ ಡೈಲಾಗ್​ ಅನ್ನು ಪೃಥ್ವಿರಾಜ್​ ಸುಕುಮಾರ್ ಅವರು ‘ಕಡುವ’ ಸಿನಿಮಾದಲ್ಲಿ​ ಹೇಳಿದ್ದಾರೆ. ಇದರ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಅಂಕವಿಕಲ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ‘ಕಡುವ’ ಚಿತ್ರದ ನಿರ್ದೇಶಕ ಶಾಜಿ ಕೈಲಾಸ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ‘ಅಂಗವಿಕಲ ಮಕ್ಕಳ ಪೋಷಕರ ನೋವು ಏನು ಎಂಬುದು ನನಗೆ ಅರ್ಥ ಆಗುತ್ತದೆ. ನಮ್ಮಿಂದ ಆದ ತಪ್ಪಿಗೆ ಕ್ಷಮೆ ಕೇಳುತ್ತೇನೆ’ ಎಂದು ಪೋಸ್ಟ್​ ಮಾಡಿರುವ ಅವರು ಸೂಕ್ತ ವಿವರಣೆಯನ್ನು ನೀಡಿದ್ದಾರೆ. ಅವರ ಪೋಸ್ಟ್​ ಶೇರ್​ ಮಾಡಿರುವ ಪೃಥ್ವಿರಾಜ್​ ಸುಕುಮಾರನ್​ ಅವರು ‘ಕ್ಷಮಿಸಿ.. ನನ್ನಿಂದ ತಪ್ಪಾಗಿದೆ. ಅದನ್ನು ಒಪ್ಪಿಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್
Image
‘ಕಡುವ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ಪೃಥ್ವಿರಾಜ್​ ಸುಕುಮಾರನ್​; ವೈರಲ್ ಆಯ್ತು ಫೋಟೋ
Image
Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​
Image
ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್

ಪೃಥ್ವಿರಾಜ್​ ಸುಕುಮಾರನ್​ ಅವರ ಹೋಮ್​ ಬ್ಯಾನರ್​ ಮೂಲಕವೇ ‘ಕಡುವ’ ಸಿನಿಮಾ ನಿರ್ಮಾಣ ಆಗಿದೆ. ಬಾಲಿವುಡ್​ ನಟ ವಿವೇಕ್​ ಒಬೆರಾಯ್​ ಅವರು ವಿಲನ್​ ಪಾತ್ರದಲ್ಲಿ ನಟಿಸಿದ್ದಾರೆ. ಸಂಯುಕ್ತಾ ಮೆನನ್​ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ಜುಲೈ 7ರಂದು ಬಿಡುಗಡೆ ಆಗಿರುವ ಈ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ