Prithviraj Sukumaran: ‘ನನ್ನಿಂದ ತಪ್ಪಾಗಿದೆ, ಒಪ್ಪಿಕೊಳ್ತೀನಿ, ದಯವಿಟ್ಟು ಕ್ಷಮಿಸಿ’: ಬಹಿರಂಗವಾಗಿ ಕ್ಷಮೆ ಕೇಳಿದ ಪೃಥ್ವಿರಾಜ್​ ಸುಕುಮಾರನ್​

| Updated By: ಮದನ್​ ಕುಮಾರ್​

Updated on: Jul 11, 2022 | 12:58 PM

Kaduva | Prithviraj Sukumaran: ‘ಕಡುವ’ ಚಿತ್ರದ ಒಂದು ದೃಶ್ಯಕ್ಕೆ ಜನರಿಂದ ಆಕ್ಷೇಪ ವ್ಯಕ್ತವಾಗಿದೆ. ನಿರ್ದೇಶಕ ಶಾಜಿ ಕೈಲಾಸ್​ ಮತ್ತು ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

Prithviraj Sukumaran: ‘ನನ್ನಿಂದ ತಪ್ಪಾಗಿದೆ, ಒಪ್ಪಿಕೊಳ್ತೀನಿ, ದಯವಿಟ್ಟು ಕ್ಷಮಿಸಿ’: ಬಹಿರಂಗವಾಗಿ ಕ್ಷಮೆ ಕೇಳಿದ ಪೃಥ್ವಿರಾಜ್​ ಸುಕುಮಾರನ್​
ಪೃಥ್ವಿರಾಜ್ ಸುಕುಮಾರನ್
Follow us on

ಖ್ಯಾತ ನಟ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರ ಸುತ್ತ ವಿವಾದವೊಂದು ಸುತ್ತಿಕೊಂಡಿದೆ. ಅವರ ಹೊಸ ಸಿನಿಮಾದಲ್ಲಿ ಅಂಗವಿಕಲ ಮಕ್ಕಳ ಪೋಷಕರಿಗೆ ಅವಮಾನ ಆಗಿದೆ ಎಂಬ ಆರೋಪ ಎದುರಾಗಿದೆ. ಇದನ್ನು ಸ್ವತಃ ಪೃಥ್ವಿರಾಜ್​ ಸುಕುಮಾರನ್​ ಕೂಡ ಒಪ್ಪಿಕೊಂಡು ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ತಪ್ಪು ಒಪ್ಪಿಕೊಂಡ ಅವರ ನಡೆಗೆ ಅನೇಕರು ಭೇಷ್​ ಎನ್ನುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರ ಪೋಸ್ಟ್​ ವೈರಲ್​ ಆಗುತ್ತಿದೆ. ಪೃಥ್ವಿರಾಜ್​ ಸುಕುಮಾರನ್​ ನಟನೆಯ ‘ಕಡುವ’ ಸಿನಿಮಾ (Kaduva) ಇತ್ತೀಚೆಗಷ್ಟೇ ಬಿಡುಗಡೆ ಆಯಿತು. ಈ ಸಿನಿಮಾದಲ್ಲಿನ ಒಂದು ದೃಶ್ಯದ ಬಗ್ಗೆ ಅಂಗವಿಕಲ ಮಕ್ಕಳ (Differently Abled Children) ಪೋಷಕರು ಆಕ್ಷೇಪ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಚಿತ್ರತಂಡದವರು ಕ್ಷಮೆ ಕೇಳಿದ್ದಾರೆ.

ವಿಭಿನ್ನ ಕಥಾಹಂದರದ ಸಿನಿಮಾಗಳ ಮೂಲಕ ಗುರುತಿಸಿಕೊಂಡ ಖ್ಯಾತಿ ಪೃಥ್ವಿರಾಜ್​ ಸುಕುಮಾರನ್​ ಅವರಿಗೆ ಇದೆ. ಹಾಗಾಗಿ ಅವರ ಮೇಲೆ ಅಭಿಮಾನಿಗಳು ಹೆಚ್ಚು ಭರವಸೆ ಇಟ್ಟುಕೊಂಡಿರುತ್ತಾರೆ. ಅಂಥ ನಟನಿಂದ ಈ ರೀತಿ ಪ್ರಮಾದ ಆಗಿರುವುದು ಎಲ್ಲರಿಗೂ ಬೇಸರ ಆಗಿದೆ. ‘ತಂದೆ-ತಾಯಿ ಮಾಡಿದ ತಪ್ಪಿನಿಂದಲೇ ಅಂಗವಿಕಲ ಮಕ್ಕಳು ಜನಿಸುತ್ತಾರೆ’ ಎಂಬರ್ಥದ ಡೈಲಾಗ್​ ಅನ್ನು ಪೃಥ್ವಿರಾಜ್​ ಸುಕುಮಾರ್ ಅವರು ‘ಕಡುವ’ ಸಿನಿಮಾದಲ್ಲಿ​ ಹೇಳಿದ್ದಾರೆ. ಇದರ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಅಂಕವಿಕಲ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ‘ಕಡುವ’ ಚಿತ್ರದ ನಿರ್ದೇಶಕ ಶಾಜಿ ಕೈಲಾಸ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ‘ಅಂಗವಿಕಲ ಮಕ್ಕಳ ಪೋಷಕರ ನೋವು ಏನು ಎಂಬುದು ನನಗೆ ಅರ್ಥ ಆಗುತ್ತದೆ. ನಮ್ಮಿಂದ ಆದ ತಪ್ಪಿಗೆ ಕ್ಷಮೆ ಕೇಳುತ್ತೇನೆ’ ಎಂದು ಪೋಸ್ಟ್​ ಮಾಡಿರುವ ಅವರು ಸೂಕ್ತ ವಿವರಣೆಯನ್ನು ನೀಡಿದ್ದಾರೆ. ಅವರ ಪೋಸ್ಟ್​ ಶೇರ್​ ಮಾಡಿರುವ ಪೃಥ್ವಿರಾಜ್​ ಸುಕುಮಾರನ್​ ಅವರು ‘ಕ್ಷಮಿಸಿ.. ನನ್ನಿಂದ ತಪ್ಪಾಗಿದೆ. ಅದನ್ನು ಒಪ್ಪಿಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್
‘ಕಡುವ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ಪೃಥ್ವಿರಾಜ್​ ಸುಕುಮಾರನ್​; ವೈರಲ್ ಆಯ್ತು ಫೋಟೋ
Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​
ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್

ಪೃಥ್ವಿರಾಜ್​ ಸುಕುಮಾರನ್​ ಅವರ ಹೋಮ್​ ಬ್ಯಾನರ್​ ಮೂಲಕವೇ ‘ಕಡುವ’ ಸಿನಿಮಾ ನಿರ್ಮಾಣ ಆಗಿದೆ. ಬಾಲಿವುಡ್​ ನಟ ವಿವೇಕ್​ ಒಬೆರಾಯ್​ ಅವರು ವಿಲನ್​ ಪಾತ್ರದಲ್ಲಿ ನಟಿಸಿದ್ದಾರೆ. ಸಂಯುಕ್ತಾ ಮೆನನ್​ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ಜುಲೈ 7ರಂದು ಬಿಡುಗಡೆ ಆಗಿರುವ ಈ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.