AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ಹಿರಿಯ ನಟ ಕೈಕಾಲ ಸತ್ಯನಾರಾಯಣ​ ನಿಧನ; ರಾಜ್​ಕುಮಾರ್ ಸಿನಿಮಾದಲ್ಲಿ ನಟಿಸಿದ್ದ ಕಲಾವಿದ

Kaikala Satyanarayana Death: ಕೈಕಾಲ ಸತ್ಯನಾರಾಯಣ ಅವರು 1935ರ ಜುಲೈ 25ರಂದು ಆಂಧ್ರ ಪ್ರದೇಶದಲ್ಲಿ ಜನಿಸಿದರು. 1959ರಂದು ಅವರು ಚಿತ್ರರಂಗಕ್ಕೆ ಕಾಲಿಟ್ಟರು. 1960ರಲ್ಲಿ ನಾಗೇಶ್ವರಮ್ಮ ಅವರನ್ನು ಮದುವೆ ಆದರು.

ತೆಲುಗಿನ ಹಿರಿಯ ನಟ ಕೈಕಾಲ ಸತ್ಯನಾರಾಯಣ​ ನಿಧನ; ರಾಜ್​ಕುಮಾರ್ ಸಿನಿಮಾದಲ್ಲಿ ನಟಿಸಿದ್ದ ಕಲಾವಿದ
ರಾಜ್​ಕುಮಾರ್-ಸತ್ಯನಾರಾಯಣ್
TV9 Web
| Edited By: |

Updated on:Dec 23, 2022 | 9:53 AM

Share

ತೆಲುಗಿನ ಹಿರಿಯ ನಟ ಕೈಕಾಲ ಸತ್ಯನಾರಾಯಣ (Kaikala Satyanarayana Death) ಅವರು ಇಂದು ಮುಂಜಾನೆ (ಡಿಸೆಂಬರ್ 23) ಹೈದರಾಬಾದ್​ನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಅವರು ಕಳೆದ ಕೆಲವು ತಿಂಗಳಿಂದ ಹಲವು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೆ ಅವರು ಇಹಲೋಕ ತ್ಯಜಿಸಿದ್ದಾರೆ. ಸತ್ಯನಾರಾಯಣ ಅವರ ನಿಧನ ಸುದ್ದಿ ಕೇಳಿ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. 1962ರಲ್ಲಿ ತೆರೆಗೆ ಬಂದ ರಾಜ್​ಕುಮಾರ್ ನಟನೆಯ ‘ಸ್ವರ್ಣಗೌರಿ’ ಚಿತ್ರದಲ್ಲಿ ಅವರು ಶಿವನ ಪಾತ್ರ ಮಾಡಿದ್ದರು ಎಂಬುದು ವಿಶೇಷ.

ಕೈಕಾಲ ಸತ್ಯನಾರಾಯಣ ಅವರು 1935ರ ಜುಲೈ 25ರಂದು ಆಂಧ್ರ ಪ್ರದೇಶದಲ್ಲಿ ಜನಿಸಿದರು. 1959ರಂದು ಅವರು ಚಿತ್ರರಂಗಕ್ಕೆ ಕಾಲಿಟ್ಟರು. 1960ರಲ್ಲಿ ನಾಗೇಶ್ವರಮ್ಮ ಅವರನ್ನು ಮದುವೆ ಆದರು. ಈ ದಂಪತಿಗೆ ನಾಲ್ಕು ಮಕ್ಕಳಿದ್ದಾರೆ. ಈಗ ಸತ್ಯನಾರಾಯಣ ಅವರು ನಿಧನ ಹೊಂದಿರುವ ಸುದ್ದಿ ಫ್ಯಾನ್ಸ್ ಹಾಗೂ ಸೆಲೆಬ್ರಿಟಿಗಳಿಗೆ ಸಾಕಷ್ಟು ದುಃಖ ನೀಡಿದೆ.

ನಂದಮೂರಿ ಕಲ್ಯಾಣ್​ ರಾಮ್ ಅವರು ಸತ್ಯಾನಾರಾಯಣ್ ಅವರ ನಿಧನ ವಾರ್ತೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಖಚಿತಪಡಿಸಿದ್ದಾರೆ. ‘ಕೈಕಾಲ ಸತ್ಯನಾರಾಯಣ್ ಅವರು ನಿಧನ ಹೊಂದಿದ್ದಾರೆ ಎಂಬ ವಿಚಾರ ಹೇಳಲು ಬೇಸರ ಆಗುತ್ತಿದೆ. ಅವರು ಓರ್ವ ಅದ್ಭುತ ನಟ. ತೆಲುಗಿನಲ್ಲಿ ಹಲವು ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದಾರೆ’ ಎಂದು ನಂದಮೂರಿ ಕಲ್ಯಾಣ್​ ರಾಮ್ ಬರೆದುಕೊಂಡಿದ್ದಾರೆ.

ಸತ್ಯನಾರಾಯಣ ಅವರ ಸಿನಿ ಜರ್ನಿ

1959ರಲ್ಲಿ ತೆರೆಗೆ ಬಂದ ‘ಸಿಪಾಯಿ ಕೂತುರು’ ಚಿತ್ರದಲ್ಲಿ ಸತ್ಯನಾರಾಯಣ ಮೊದಲ ಬಾರಿಗೆ ಬಣ್ಣ ಹಚ್ಚಿದರು. ಡಿಎಲ್​ ನಾರಾಯಣ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಸತ್ಯನಾರಾಯಣ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಖ್ಯಾತಿ ನಾರಾಯಣ ಅವರಿಗೆ ಸಲ್ಲುತ್ತದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಲೇ ಇಲ್ಲ. ಎನ್​ಟಿಆರ್ ಜತೆ ಹಲವು ಸಿನಿಮಾಗಳಲ್ಲಿ ಸತ್ಯನಾರಾಯಣ್ ನಟಿಸಿದ್ದಾರೆ. ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದರು. 750ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ಪ್ರಶಸ್ತಿಗಳನ್ನು ಕೂಡ ಅವರು ಗೆದ್ದಿದ್ದಾರೆ.

ಇದನ್ನೂ ಓದಿ: Gandasi Nagaraj Death: ಜಗ್ಗೇಶ್​ ಅವರ ಆಪ್ತ ವಸ್ತ್ರಾಲಂಕಾರ ಕಲಾವಿದ ಗಂಡಸಿ ನಾಗರಾಜ್​ ನಿಧನ

2019ರಲ್ಲಿ ತೆರೆಗೆ ಬಂದ ಮಹೇಶ್ ಬಾಬು ನಟನೆಯ ‘ಮಹರ್ಷಿ’ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಸತ್ಯನಾರಾಯಣ್ ಅವರು ಕಾಣಿಸಿಕೊಂಡಿದ್ದರು. ಈ ಸಿನಿಮಾ ಹಿಟ್ ಆಗಿತ್ತು. ಇದಾದ ಬಳಿಕ ಅವರು ಯಾವುದೇ ಚಿತ್ರಗಳಲ್ಲಿ ನಟಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:37 am, Fri, 23 December 22

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ