AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಸಿನಿಮಾನಲ್ಲಿ ಸ್ಟಾರ್ ನಟಿ ವಿಲನ್? ಯಾರಾಕೆ?

SS Rajamouli: ರಾಜಮೌಳಿ-ಮಹೇಶ್ ಬಾಬು ಕಾಂಬಿನೇಷನ್​ನ ಮುಂದಿನ ಸಿನಿಮಾದಲ್ಲಿ ತೆಲುಗಿನ ಸ್ಟಾರ್ ನಟಿಯೊಬ್ಬರು ಖಳನಾಯಕಿಯಾಗಿ ನಟಿಸಲಿದ್ದಾರೆ. ಯಾರು ಆ ನಟಿ?

ರಾಜಮೌಳಿ ಸಿನಿಮಾನಲ್ಲಿ ಸ್ಟಾರ್ ನಟಿ ವಿಲನ್? ಯಾರಾಕೆ?
ಎಸ್​ಎಸ್ ರಾಜಮೌಳಿ
ಮಂಜುನಾಥ ಸಿ.
|

Updated on: Oct 10, 2023 | 4:21 PM

Share

ಎಸ್ಎಸ್ ರಾಜಮೌಳಿ (SS Rajamouli), ಪ್ರಸ್ತುತ ದೇಶದ ನಂಬರ್ ಸಿನಿಮಾ ನಿರ್ದೇಶಕ. ರಾಜಮೌಳಿ ನಿರ್ದೇಶಿಸಿರುವ ಅಷ್ಟೂ ಸಿನಿಮಾಗಳು ಬ್ಲಾಕ್ ಬಸ್ಟರ್. ಇತ್ತೀಚೆಗಿನ ‘ಆರ್​ಆರ್​ಆರ್’ ಸಿನಿಮಾದಿಂದ ವಿಶ್ವಮಟ್ಟದಲ್ಲಿ ಖ್ಯಾತಿಗಳಿಸಿರುವ ರಾಜಮೌಳಿ, ತಮ್ಮ ಮುಂದಿನ ಸಿನಿಮಾವನ್ನು ‘ಆರ್​ಆರ್​ಆರ್’ ಗಿಂತಲೂ ದೊಡ್ಡದಾಗಿ ಕಟ್ಟಿಕೊಡುವ ತಯಾರಿಯಲ್ಲಿದ್ದಾರೆ. ಭಾರತದ ಸಿನಿಮಾ ಪ್ರೇಕ್ಷಕರನ್ನು ಮಾತ್ರವೇ ಅಲ್ಲದೆ ವಿಶ್ವ ಸಿನಿಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಸಿನಿಮಾ ಮಾಡಲು ರಾಜಮೌಳಿ ಸಜ್ಜಾಗಿದ್ದಾರೆ. ರಾಜಮೌಳಿ ತಮ್ಮ ಮುಂದಿನ ಸಿನಿಮಾಕ್ಕೆ ಸ್ಟಾರ್ ನಟಿಯೊಬ್ಬರನ್ನು ವಿಲನ್ ಆಗಿ ಹಾಕಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ತೆಲುಗು ಚಿತ್ರರಂಗದಲ್ಲಿ ಅನುಷ್ಕಾ ಶೆಟ್ಟಿ ಬಳಿಕ ಅತಿ ಹೆಚ್ಚು ಜನಪ್ರಿಯತೆ ಗಳಿಸಿದ, ಹಲವು ಸ್ಟಾರ್​ ನಟರೊಟ್ಟಿಗೆ ನಟಿಸಿದ ಕಾಜಲ್ ಅಗರ್ವಾಲ್, ರಾಜಮೌಳಿಯ ಮುಂದಿನ ಸಿನಿಮಾದಲ್ಲಿ ಖಳನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಕಾಜಲ್ ಅಗರ್ವಾಲ್ ಇತ್ತೀಚೆಗೆ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹೀಗಿರುವಾಗ ರಾಜಮೌಳಿ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್ ಖಳನಾಯಕಿಯಾಗಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ರಾಜಮೌಳಿ, ತಮ್ಮ ಮುಂದಿನ ಸಿನಿಮಾವನ್ನು ಮಹೇಶ್ ಬಾಬು ಜೊತೆ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ರಾಜಮೌಳಿ ಹಾಗೂ ಮಹೇಶ್ ಬಾಬು ಒಂದಾಗುತ್ತಿದ್ದಾರೆ. ಸಹಜವಾಗಿಯೇ ಈ ಸಿನಿಮಾ ಭಾರಿ ನಿರೀಕ್ಷೆಗಳನ್ನು ಮೂಡಿಸಿದೆ. ಮಹೇಶ್ ಬಾಬು ಸಹ ರಾಜಮೌಳಿ ಸಿನಿಮಾಕ್ಕಾಗಿ ವಿಶೇಷ ರೀತಿಯಲ್ಲಿ ತಯಾರಾಗುತ್ತಿದ್ದಾರೆ. ಈ ಸಿನಿಮಾವು ಸಾಹಸಮಯ ಕತೆಯನ್ನು ಒಳಗೊಂಡಿರಲಿದೆ. ಹಾಲಿವುಡ್​ನ ‘ಇಂಡಿಯಾನಾ ಜೋನ್ಸ್’ ಮಾದರಿಯ ಕತೆಯನ್ನು ಒಳಗೊಂಡಿರಲಿದೆ. ಅದರಲ್ಲಿಯೂ ಅರಣ್ಯದಲ್ಲಿ ನಡೆಯುವ ಸಾಹಸಗಳನ್ನು ಈ ಸಿನಿಮಾ ಒಳಗೊಂಡಿರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಗಾಂಧಿ ನಗರಕ್ಕೆ ಎಂಟ್ರಿ ಕೊಟ್ಟ ಮಹೇಶ್ ಬಾಬು: ಏನಿದು ಕತೆ?

ಮಹೇಶ್ ಬಾಬು ಹಾಗೂ ಕಾಜಲ್ ಅಗರ್ವಾಲ್ ಈ ಹಿಂದೆ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ‘ಬ್ಯುಸಿನೆಸನ್’ ಸಿನಿಮಾದಲ್ಲಿ ಮಹೇಶ್ ಬಾಬು ಹೀರೋ, ಕಾಜಲ್ ಹೀರೋಯಿನ್. ಆದರೆ ಈಗ ಹೀರೋ-ವಿಲನ್ ಆಗಿ ಎದುರು-ಬದುರು ಕಾಣಿಸಿಕೊಳ್ಳಲಿದ್ದಾರೆ. ರಾಜಮೌಳಿ ಸಿನಿಮಾಗಳಲ್ಲಿ ವಿಲನ್​ಗಳು ಬಹಳ ಪವರ್​ಫುಲ್ ಆಗಿರುತ್ತಾರೆ. ಆದರೆ ಕಾಜಲ್ ಅನ್ನು ರಾಜಮೌಳಿ ವಿಲನ್ ಆಗಿ ಆಯ್ಕೆ ಮಾಡಿಕೊಂಡಿರುವ ಬಗ್ಗೆಯೂ ಸಾಕಷ್ಟು ಕುತೂಹಲ ಇದೆ. ಕಾಜಲ್ ಪಾತ್ರವನ್ನು ರಾಜಮೌಳಿ ಹೇಗೆ ಡಿಸೈನ್ ಮಾಡಿದ್ದಾರೆಂದು ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ.

ರಾಜಮೌಳಿ ಹಾಗೂ ಮಹೇಶ್ ಬಾಬು ಅವರ ಸಿನಿಮಾ ಇನ್ನೂ ಸೆಟ್ಟೇರಿಲ್ಲ. ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಸಿನಿಮಾ ಇದೆ. ಸಿನಿಮಾಕ್ಕಾಗಿ ಹಲವು ಹಾಲಿವುಡ್ ದೊಡ್ಡ ಸಂಸ್ಥೆಗಳೊಟ್ಟಿಗೆ ರಾಜಮೌಳಿ ಮಾತುಕತೆ ನಡೆಸಿದ್ದಾರೆ. ಮಹೇಶ್ ಬಾಬು ಸಹ ಜಿಮ್​ನಲ್ಲಿ ವಿಶೇಷ ತರಬೇತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸಿನಿಮಾದ ಲೊಕೇಶನ್ ಹುಡುಕಾಟವನ್ನು ರಾಜಮೌಳಿ ಮುಗಿಸಿದ್ದು, ಇದೇ ವರ್ಷಾಂತ್ಯಕ್ಕೆ ಸಿನಿಮಾದ ಮುಹೂರ್ತ ನಡೆಯಲಿದೆ ಎನ್ನಲಾಗುತ್ತಿದೆ.

ಇದರ ಹೊರತಾಗಿ ಕಾಜಲ್ ಅಗರ್ವಾಲ್ ಪ್ರಸ್ತುತ ಬಾಲಕೃಷ್ಣ ಜೊತೆಗೆ ‘ಭಗವಂತ ಕೇಸರಿ’, ಕಮಲ್ ಹಾಸನ್ ಜೊತೆಗೆ ‘ಇಂಡಿಯನ್ 2’ ಮಹಿಳಾ ಪ್ರಧಾನ ಸಿನಿಮಾಗಳಾದ ‘ಉಮಾ’ ಹಾಗೂ ‘ಸತ್ಯಭಾಮಾ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನು ಮಹೇಶ್ ಬಾಬು ತ್ರಿವಿಕ್ರಮ್ ನಿರ್ದೇಶನದ ‘ಗುಂಟೂರು ಖಾರಂ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ಹಾಗೂ ಕನ್ನಡತಿ ಶ್ರೀಲೀಲಾ ನಾಯಕಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್