Kajal Aggarwal Birthday: ಸಾವಿನ ಕದ ತಟ್ಟಿ ಬಂದಿದ್ದ ಕಾಜಲ್​ ಅಗರ್​ವಾಲ್​; ಬದುಕುಳಿದಿದ್ದು ನಿಜಕ್ಕೂ ಅಚ್ಚರಿ

ಸೆಟ್​ ಕೆಲಸ ಮಾಡುತ್ತಿದ್ದ ಕ್ರೇನ್ ನೋಡನೋಡುತ್ತಿದ್ದಂತೆ ನೆಲಕ್ಕೆ ಉರುಳಿತು. ಕ್ರೇನ್ ಕೆಳಗೆ ಸಿಕ್ಕ ಮೂರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟರೆ 9 ಜನರಿಗೆ ಗಂಭೀರ ಗಾಯವಾಗಿತ್ತು.

Kajal Aggarwal Birthday: ಸಾವಿನ ಕದ ತಟ್ಟಿ ಬಂದಿದ್ದ ಕಾಜಲ್​ ಅಗರ್​ವಾಲ್​; ಬದುಕುಳಿದಿದ್ದು ನಿಜಕ್ಕೂ ಅಚ್ಚರಿ
ಕಾಜಲ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 19, 2022 | 7:00 AM

ನಟಿ ಕಾಜಲ್ ಅಗರ್​ವಾಲ್ ಅವರು (Kajal Aggarwal) ಇಂದು (ಜೂನ್ 19) 37ನೇ ವರ್ಷದ ಬರ್ತ್​ಡೇ (Kajal Aggarwal Birthday) ಆಚರಿಸಿಕೊಳ್ಳುತ್ತಿದ್ದಾರೆ. ಅವರ ಕುಟುಂಬಕ್ಕೆ ಈ ಬಾರಿ ಮಗುವಿನ ಆಗಮನ ಆಗಿದೆ. ಹೀಗಾಗಿ, ಕಾಜಲ್​ ಕುಟುಂಬದಲ್ಲಿ ಸಂಭ್ರಮ ಕೊಂಚ ಹೆಚ್ಚೇ ಮನೆ ಮಾಡಿದೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಕಾಜಲ್​ ಅಗರ್​ವಾಲ್​ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಕಾಜಲ್​ ಅಗರ್​​ವಾಲ್​ ಜೀವನದಲ್ಲಿ ಒಂದು ಭೀಕರ ಘಟನೆ ನಡೆದಿತ್ತು. ಅವರ ಕಣ್ಣೆದುರೇ ಮೂವರು ಮೃತಪಟ್ಟಿದ್ದರು. ಕಾಜಲ್ ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದರು. ಅವರ ಬರ್ತ್​ಡೇ ದಿನ ಕೆಲವರು ಈ ಹಳೆಯ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

ಅದು 2020ರ ಫೆಬ್ರವರಿ ತಿಂಗಳು. ಕಮಲ್ ಹಾಸನ್ ನಟನೆಯ ‘ಇಂಡಿಯನ್​ 2’ ಚಿತ್ರದ ಶೂಟಿಂಗ್​ಗಾಗಿ ಕಾಜಲ್ ಅಗರ್​​ವಾಲ್​ ಅವರು ಚೆನ್ನೈನ ಇವಿಪಿ ಫಿಲ್ಮ್​​ ಸಿಟಿಯಲ್ಲಿದ್ದರು. ದೊಡ್ಡ ದೊಡ್ಡ ಸೆಟ್ ಹಾಕಿ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. ಸೆಟ್​ ಕೆಲಸ ಮಾಡುತ್ತಿದ್ದ ಕ್ರೇನ್ ನೋಡನೋಡುತ್ತಿದ್ದಂತೆ ನೆಲಕ್ಕೆ ಉರುಳಿತು. ಕ್ರೇನ್ ಕೆಳಗೆ ಸಿಕ್ಕ ಮೂರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟರೆ 9 ಜನರಿಗೆ ಗಂಭೀರ ಗಾಯವಾಗಿತ್ತು. ಕಾಜಲ್ ಕೂಡ ಇದೇ ಸೆಟ್​ನಲ್ಲಿದ್ದರು. ಅವರು ಈ ಅವಘಡದಲ್ಲಿ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದರು.

ಈ ಘಟನೆ ವಿಚಾರ ಕಾಡ್ಗಿಚ್ಚಿನಂತೆ ಎಲ್ಲ ಕಡೆಗಳಲ್ಲೂ ಹಬ್ಬಿತ್ತು. ಕೆಲವರು ಈ ಘಟನೆ ಬಗ್ಗೆ ಆತಂಕ ಹೊರಹಾಕಿದರು. ಸ್ವತಃ ಕಾಜಲ್ ಅಗರ್​ವಾಲ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಮಗಾದ ಆಘಾತದ ಬಗ್ಗೆ ವಿವರಿಸಿದ್ದರು. ‘ಕ್ರೇನ್ ಅಪಘಾತದಿಂದ ತುಂಬಾನೇ ಆಘಾತ ಉಂಟಾಗಿದೆ. ನಾನು ಕೂದಲೆಳೆ ಅಂತರದಲ್ಲಿ ಪಾರಾಗಿದ್ದೇನೆ’ ಎಂದು ಕಾಜಲ್ ಬರೆದುಕೊಂಡಿದ್ದರು.

ಇದನ್ನೂ ಓದಿ
Image
ಮೊದಲ ಬಾರಿಗೆ ಮಗುವಿನ ಮುಖ ತೋರಿಸಿದ ನಟಿ ಕಾಜಲ್ ಅಗರ್​​ವಾಲ್​
Image
Kajal Aggarwal: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಕಾಜಲ್ ಅಗರ್ವಾಲ್​​
Image
Kajal Aggarwal: ‘ಆಚಾರ್ಯ’ ಚಿತ್ರದಲ್ಲಿ ಕಾಜಲ್‌ ಪಾತ್ರ ಏಕಿಲ್ಲ? ಕಾರಣ ಬಹಿರಂಗಪಡಿಸಿದ ನಿರ್ದೇಶಕ
Image
Kajal Aggarwal: ಕಾಜಲ್ ಅಗರ್ವಾಲ್ ಪುತ್ರನ ಹೆಸರು ಬಹಿರಂಗ; ಮಗುವಿನ ಹೆಸರು ತಿಳಿಸಿದ ಪತಿ ಗೌತಮ್

ಇದನ್ನೂ ಓದಿ: ಮೊದಲ ಬಾರಿಗೆ ಮಗುವಿನ ಮುಖ ತೋರಿಸಿದ ನಟಿ ಕಾಜಲ್ ಅಗರ್​​ವಾಲ್​

ಕಮಲ್ ಹಾಸನ್ ನಟನೆಯ ‘ಇಂಡಿಯನ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಕಾರಣಕ್ಕೆ ‘ಇಂಡಿಯನ್ 2’ ಮಾಡಲು ಚಿತ್ರತಂಡ ನಿರ್ಧರಿಸಿತ್ತು. 2020ರಲ್ಲೇ ಶೂಟಿಂಗ್ ಆರಂಭ ಕೂಡ ಆಯಿತು. ಆದರೆ, ಈ ಮಧ್ಯೆ ಕೊವಿಡ್ ಕಾಣಿಸಿಕೊಂಡಿತು. ಆ ಬಳಿಕ ಕಮಲ್ ರಾಜಕೀಯದಲ್ಲಿ ಬ್ಯುಸಿ ಆದರು. ಈ ಕಾರಣಕ್ಕೆ ಸಿನಿಮಾ ಕೆಲಸಗಳು ವಿಳಂಬವಾಗುತ್ತಲೇ ಬಂದವು. ಹೀಗಾಗಿ, ಕಾಜಲ್​ ಚಿತ್ರತಂಡದಿಂದ ಹೊರ ನಡೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್