AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal Birthday: ಸಾವಿನ ಕದ ತಟ್ಟಿ ಬಂದಿದ್ದ ಕಾಜಲ್​ ಅಗರ್​ವಾಲ್​; ಬದುಕುಳಿದಿದ್ದು ನಿಜಕ್ಕೂ ಅಚ್ಚರಿ

ಸೆಟ್​ ಕೆಲಸ ಮಾಡುತ್ತಿದ್ದ ಕ್ರೇನ್ ನೋಡನೋಡುತ್ತಿದ್ದಂತೆ ನೆಲಕ್ಕೆ ಉರುಳಿತು. ಕ್ರೇನ್ ಕೆಳಗೆ ಸಿಕ್ಕ ಮೂರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟರೆ 9 ಜನರಿಗೆ ಗಂಭೀರ ಗಾಯವಾಗಿತ್ತು.

Kajal Aggarwal Birthday: ಸಾವಿನ ಕದ ತಟ್ಟಿ ಬಂದಿದ್ದ ಕಾಜಲ್​ ಅಗರ್​ವಾಲ್​; ಬದುಕುಳಿದಿದ್ದು ನಿಜಕ್ಕೂ ಅಚ್ಚರಿ
ಕಾಜಲ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 19, 2022 | 7:00 AM

ನಟಿ ಕಾಜಲ್ ಅಗರ್​ವಾಲ್ ಅವರು (Kajal Aggarwal) ಇಂದು (ಜೂನ್ 19) 37ನೇ ವರ್ಷದ ಬರ್ತ್​ಡೇ (Kajal Aggarwal Birthday) ಆಚರಿಸಿಕೊಳ್ಳುತ್ತಿದ್ದಾರೆ. ಅವರ ಕುಟುಂಬಕ್ಕೆ ಈ ಬಾರಿ ಮಗುವಿನ ಆಗಮನ ಆಗಿದೆ. ಹೀಗಾಗಿ, ಕಾಜಲ್​ ಕುಟುಂಬದಲ್ಲಿ ಸಂಭ್ರಮ ಕೊಂಚ ಹೆಚ್ಚೇ ಮನೆ ಮಾಡಿದೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಕಾಜಲ್​ ಅಗರ್​ವಾಲ್​ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಕಾಜಲ್​ ಅಗರ್​​ವಾಲ್​ ಜೀವನದಲ್ಲಿ ಒಂದು ಭೀಕರ ಘಟನೆ ನಡೆದಿತ್ತು. ಅವರ ಕಣ್ಣೆದುರೇ ಮೂವರು ಮೃತಪಟ್ಟಿದ್ದರು. ಕಾಜಲ್ ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದರು. ಅವರ ಬರ್ತ್​ಡೇ ದಿನ ಕೆಲವರು ಈ ಹಳೆಯ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

ಅದು 2020ರ ಫೆಬ್ರವರಿ ತಿಂಗಳು. ಕಮಲ್ ಹಾಸನ್ ನಟನೆಯ ‘ಇಂಡಿಯನ್​ 2’ ಚಿತ್ರದ ಶೂಟಿಂಗ್​ಗಾಗಿ ಕಾಜಲ್ ಅಗರ್​​ವಾಲ್​ ಅವರು ಚೆನ್ನೈನ ಇವಿಪಿ ಫಿಲ್ಮ್​​ ಸಿಟಿಯಲ್ಲಿದ್ದರು. ದೊಡ್ಡ ದೊಡ್ಡ ಸೆಟ್ ಹಾಕಿ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. ಸೆಟ್​ ಕೆಲಸ ಮಾಡುತ್ತಿದ್ದ ಕ್ರೇನ್ ನೋಡನೋಡುತ್ತಿದ್ದಂತೆ ನೆಲಕ್ಕೆ ಉರುಳಿತು. ಕ್ರೇನ್ ಕೆಳಗೆ ಸಿಕ್ಕ ಮೂರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟರೆ 9 ಜನರಿಗೆ ಗಂಭೀರ ಗಾಯವಾಗಿತ್ತು. ಕಾಜಲ್ ಕೂಡ ಇದೇ ಸೆಟ್​ನಲ್ಲಿದ್ದರು. ಅವರು ಈ ಅವಘಡದಲ್ಲಿ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದರು.

ಈ ಘಟನೆ ವಿಚಾರ ಕಾಡ್ಗಿಚ್ಚಿನಂತೆ ಎಲ್ಲ ಕಡೆಗಳಲ್ಲೂ ಹಬ್ಬಿತ್ತು. ಕೆಲವರು ಈ ಘಟನೆ ಬಗ್ಗೆ ಆತಂಕ ಹೊರಹಾಕಿದರು. ಸ್ವತಃ ಕಾಜಲ್ ಅಗರ್​ವಾಲ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಮಗಾದ ಆಘಾತದ ಬಗ್ಗೆ ವಿವರಿಸಿದ್ದರು. ‘ಕ್ರೇನ್ ಅಪಘಾತದಿಂದ ತುಂಬಾನೇ ಆಘಾತ ಉಂಟಾಗಿದೆ. ನಾನು ಕೂದಲೆಳೆ ಅಂತರದಲ್ಲಿ ಪಾರಾಗಿದ್ದೇನೆ’ ಎಂದು ಕಾಜಲ್ ಬರೆದುಕೊಂಡಿದ್ದರು.

ಇದನ್ನೂ ಓದಿ
Image
ಮೊದಲ ಬಾರಿಗೆ ಮಗುವಿನ ಮುಖ ತೋರಿಸಿದ ನಟಿ ಕಾಜಲ್ ಅಗರ್​​ವಾಲ್​
Image
Kajal Aggarwal: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಕಾಜಲ್ ಅಗರ್ವಾಲ್​​
Image
Kajal Aggarwal: ‘ಆಚಾರ್ಯ’ ಚಿತ್ರದಲ್ಲಿ ಕಾಜಲ್‌ ಪಾತ್ರ ಏಕಿಲ್ಲ? ಕಾರಣ ಬಹಿರಂಗಪಡಿಸಿದ ನಿರ್ದೇಶಕ
Image
Kajal Aggarwal: ಕಾಜಲ್ ಅಗರ್ವಾಲ್ ಪುತ್ರನ ಹೆಸರು ಬಹಿರಂಗ; ಮಗುವಿನ ಹೆಸರು ತಿಳಿಸಿದ ಪತಿ ಗೌತಮ್

ಇದನ್ನೂ ಓದಿ: ಮೊದಲ ಬಾರಿಗೆ ಮಗುವಿನ ಮುಖ ತೋರಿಸಿದ ನಟಿ ಕಾಜಲ್ ಅಗರ್​​ವಾಲ್​

ಕಮಲ್ ಹಾಸನ್ ನಟನೆಯ ‘ಇಂಡಿಯನ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಕಾರಣಕ್ಕೆ ‘ಇಂಡಿಯನ್ 2’ ಮಾಡಲು ಚಿತ್ರತಂಡ ನಿರ್ಧರಿಸಿತ್ತು. 2020ರಲ್ಲೇ ಶೂಟಿಂಗ್ ಆರಂಭ ಕೂಡ ಆಯಿತು. ಆದರೆ, ಈ ಮಧ್ಯೆ ಕೊವಿಡ್ ಕಾಣಿಸಿಕೊಂಡಿತು. ಆ ಬಳಿಕ ಕಮಲ್ ರಾಜಕೀಯದಲ್ಲಿ ಬ್ಯುಸಿ ಆದರು. ಈ ಕಾರಣಕ್ಕೆ ಸಿನಿಮಾ ಕೆಲಸಗಳು ವಿಳಂಬವಾಗುತ್ತಲೇ ಬಂದವು. ಹೀಗಾಗಿ, ಕಾಜಲ್​ ಚಿತ್ರತಂಡದಿಂದ ಹೊರ ನಡೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ