AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಪತಿ ಗೌತಮ್​ ಬಗ್ಗೆ ತಕರಾರು ತೆಗೆದ ಕಾಜಲ್​ ಅಗರ್​ವಾಲ್​

ಕೊವಿಡ್​ ಕೊಂಚ ಕಡಿಮೆ ಆಗಿದ್ದು, ಜನರು ನಿಧಾನವಾಗಿ ಸುತ್ತಾಡೋಕೆ ಆರಂಭಿಸಿದ್ದಾರೆ. ಅದೇ ರೀತಿ, ಕಾಜಲ್​ ಕೂಡ ಇತ್ತೀಚೆಗೆ ಹೊರಗೆ ಹೋಗುವ ಪ್ಲ್ಯಾನ್​ ಮಾಡಿದ್ದರು. ಮುಂದೇನಾಯ್ತು ಎನ್ನುವ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

Kajal Aggarwal: ಪತಿ ಗೌತಮ್​ ಬಗ್ಗೆ ತಕರಾರು ತೆಗೆದ ಕಾಜಲ್​ ಅಗರ್​ವಾಲ್​
ಕಾಜಲ್​ ಹೇಳಿಕೆ ಅವರ ಅಭಿಮಾನಿಗಳಿಗೆ ಬೇಸರ ಹಾಗೂ ಆತಂಕ ಮೂಡಿಸಿತ್ತು.
ರಾಜೇಶ್ ದುಗ್ಗುಮನೆ
| Edited By: |

Updated on: Jun 19, 2021 | 7:32 AM

Share

ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುವ ದಂಪತಿ, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಮಧ್ಯೆ ಪತಿ ಗೌತಮ್​ ಬಗ್ಗೆ ಕಾಜಲ್​ ತಕರಾರು ತೆಗೆದಿದ್ದಾರೆ. ಹಾಗಂತ ಇದು ಗಂಭೀರ ದೂರು ಎಂದು ಪರಿಗಣಿಸಬೇಡಿ.

ದಕ್ಷಿಣ ಭಾರತದಲ್ಲಿ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಕಾಜಲ್​ಗೆ ಇದೆ. ಪ್ಯಾರಿಸ್​ ಪ್ಯಾರಿಸ್​ ಸೇರಿ ಐದಾರು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಈ ಪೈಕಿ ಕೆಲ ಚಿತ್ರಗಳು ರಿಲೀಸ್​ಗೆ ರೆಡಿ ಇದ್ದು, ಕೊರೊನಾದಿಂದ ಬಿಡುಗಡೆ ವಿಳಂಬವಾಗಿದೆ. ಈಗ ಕೊವಿಡ್​ ಕೊಂಚ ಕಡಿಮೆ ಆಗಿದ್ದು, ಜನರು ನಿಧಾನವಾಗಿ ಸುತ್ತಾಡೋಕೆ ಆರಂಭಿಸಿದ್ದಾರೆ. ಅದೇ ರೀತಿ, ಕಾಜಲ್​ ಕೂಡ ಇತ್ತೀಚೆಗೆ ಹೊರಗೆ ಹೋಗುವ ಪ್ಲ್ಯಾನ್​ ಮಾಡಿದ್ದರು. ಮುಂದೇನಾಯ್ತು ಎನ್ನುವ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಕಾಜಲ್​ ಇನ್​ಸ್ಟಾಗ್ರಾಂ ಸ್ಟೋರಿ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ, ನಾನು ಸಂಪೂರ್ಣವಾಗಿ ರೆಡಿ ಆಗಿರುತ್ತೇನೆ. ಆದರೆ ಗಂಡ ಸಾಕಷ್ಟು ಸಮಯ ತೆಗೆದುಕೊಳ್ಳುತ್ತಾರೆ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳ ಬಳಿ ಗಂಡನ ಬಗ್ಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ. ನಾನು ಇಂದು ಈ ಸ್ಥಾನದಲ್ಲಿ ಇರುವುದಕ್ಕೆ ಕಾರಣ ನನ್ನ ಪತಿ ಹಾಗೂ ನನ್ನ ಕುಟುಂಬ. ನಾನು ನನ್ನ ಪತಿಯ ಅನುಮತಿ ಪಡೆದೇ ನಟನೆ ಮುಂದುವರಿಸುತ್ತಿದ್ದೇನೆ’ ಎಂದಿದ್ದರು. ನಟಿ ಶಿಲ್ಪಾ ಶೆಟ್ಟಿ ಮದುವೆ ಆದ ನಂತರ ಚಿತ್ರರಂಗದಿಂದ ಸಂಪೂರ್ಣವಾಗಿ ದೂರವೇ ಉಳಿದುಕೊಂಡರು. ಸೋನಮ್ ಕಪೂರ್​ ಕೂಡ ಮದುವೆ ನಂತರ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟಿವ್​ ಇಲ್ಲ. ಈ ಸಾಲಿಗೆ ಈಗ ಕಾಜಲ್​ ಕೂಡ ಸೇರಿಕೊಂಡರೂ ಅಚ್ಚರಿ ಇಲ್ಲ ಎಂದು ಚರ್ಚೆ ಆಗಿತ್ತು.

ಇದನ್ನೂ ಓದಿ: ನಟಿ ಕಾಜಲ್ ಅವರ ಹೃದಯ ವಿಶಾಲತೆ ಬಗ್ಗೆ ಎಲ್ಲರಿಂದ ಮೆಚ್ಚುಗೆ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ