AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಗೆದ್ದ ಬಾಲಯ್ಯ, ಪವನ್​ ಕಲ್ಯಾಣ್​ಗೆ ಕಾಜಲ್​ ಅಗರ್​ವಾಲ್ ಅಭಿನಂದನೆ

ಹಿಂದೂಪುರದಲ್ಲಿ ನಟ ನಂದಮೂರಿ ಬಾಲಕೃಷ್ಣ ಅವರು ಚುನಾವಣೆ ಗೆದ್ದಿದ್ದಾರೆ. ಅವರಿಗೆ ನಟಿ ಕಾಜಲ್​ ಅಗರ್​ವಾಲ್​ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು, ಪವನ್​ ಕಲ್ಯಾಣ್​ ಕೂಡ ಆಂಧ್ರ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದಾರೆ. ಅವರಿಗೂ ಕಾಜಲ್​ ಅಗರ್​ವಾಲ್​ ಅವರು ಅಭಿನಂದನೆ ತಿಳಿಸಿದ್ದಾರೆ. ಬಾಲಯ್ಯ ಕುರಿತ ಪೋಸ್ಟ್​ಗೆ ಕೆಲವು ನೆಟ್ಟಿಗರು ನೆಗೆಟಿವ್​ ಕಮೆಂಟ್​ ಮಾಡಿದ್ದಾರೆ.

ಚುನಾವಣೆ ಗೆದ್ದ ಬಾಲಯ್ಯ, ಪವನ್​ ಕಲ್ಯಾಣ್​ಗೆ ಕಾಜಲ್​ ಅಗರ್​ವಾಲ್ ಅಭಿನಂದನೆ
ನಂದಮೂರಿ ಬಾಲಕೃಷ್ಣ, ಕಾಜಲ್​ ಅಗರ್​ವಾಲ್​
ಮದನ್​ ಕುಮಾರ್​
|

Updated on: Jun 05, 2024 | 7:14 PM

Share

ಟಾಲಿವುಡ್​ನ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಹ್ಯಾಟ್ರಿಕ್​ ಗೆಲುವು ಸಾಧಿಸಿದ್ದಾರೆ. ಹಿಂದೂಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅವರು ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆ ಆಗಿದ್ದಾರೆ. ಈ ಗೆಲುವಿಗಾಗಿ ಅನೇಕರು ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ನಟಿ ಕಾಜಲ್​ ಅಗರ್​ವಾಲ್​ (Kajal Aggarwal) ಕೂಡ ಬಾಲಯ್ಯ ಅವರಿಗೆ ವಿಶ್​ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಬಾಲಯ್ಯ (Balayya) ಬಗ್ಗೆ ಕಾಜಲ್​ ಅಗರ್​ವಾಲ್​ ಮಾಡಿರುವ ಪೋಸ್ಟ್​ ವೈರಲ್​ ಆಗಿದೆ. ಇದಕ್ಕೆ ಕಮೆಂಟ್​ ಮಾಡಿರುವ ಕೆಲವರು ಕಟು ಟೀಕೆ ಮಾಡಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಇತ್ತೀಚಿನ ಘಟನೆ.

ಸಿನಿಮಾ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ನಟಿ ಅಂಜಲಿ ಅವರನ್ನು ನಂದಮೂರಿ ಬಾಲಕೃಷ್ಣ ತಳ್ಳಿದ್ದರು. ಆ ಸಂದರ್ಭದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿತ್ತು. ಬಾಲಯ್ಯ ನಡೆದುಕೊಂಡ ರೀತಿ ಸರಿಯಿಲ್ಲ ಎಂದು ತುಂಬ ಜನರು ಕ್ಲಾಸ್​ ತೆಗೆದುಕೊಂಡಿದ್ದರು. ಅದರಲ್ಲೂ ಉತ್ತರ ಭಾರತದ ನೆಟ್ಟಿಗರು ತುಂಬಾನೇ ಗರಂ ಆಗಿದ್ದರು. ಈಗ ಕಾಜಲ್​ ಅಗರ್​ವಾಲ್​ ಅವರು ಬಾಲಯ್ಯ ಕುರಿತು ಮಾಡಿರುವ ಪೋಸ್ಟ್​ಗೂ ಕೆಲವರು ನೆಗೆಟಿವ್​ ಕಮೆಂಟ್​ ಮಾಡುತ್ತಿದ್ದಾರೆ.

‘ಬಾಲಯ್ಯ ಅವರೇ.. ನಿಮ್ಮ ಅಮೋಘ ಯಶಸ್ಸಿಗೆ ಧನ್ಯವಾದಗಳು. ನಿಮ್ಮ ಪರಿಶ್ರಮ, ಬದ್ಧತೆ, ದೂರದೃಷ್ಟಿಯ ಕಾರಣದಿಂದಾಗಿ ನಿಮಗೆ ಜನರಿಂದ ಈ ಪರಿ ಪ್ರೀತಿ ಸಿಕ್ಕಿದೆ’ ಎಂದು ಕಾಜಲ್​ ಅಗರ್​ವಾಲ್​ ಅವರು ಎಕ್ಸ್​ (ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದು ವೈರಲ್​ ಆಗಿದೆ.

ಇದನ್ನೂ ಓದಿ: ‘ಬಾಲಯ್ಯಗೆ ಧನ್ಯವಾದ’; ವಿವಾದದ ಬಳಿಕ ತೇಪೆ ಹಚ್ಚುವ ಕೆಲಸ ಮಾಡಿದ ನಟಿ ಅಂಜಲಿ

ನಂದಮೂರಿ ಬಾಲಕೃಷ್ಣ ಅವರ ಅಪ್ಪಟ ಅಭಿಮಾನಿಗಳು ಈ ಪೋಸ್ಟ್​ಗೆ ಲೈಕ್​ ಮಾಡಿದ್ದಾರೆ. ‘ನಮ್ಮ ನಾಯಕನಿಗೆ ಅಭಿನಂದನೆ ತಿಳಿಸಿದ್ದಕ್ಕೆ ಧನ್ಯವಾದಗಳು’ ಎಂದು ಕಾಜಲ್​ ಪೋಸ್ಟ್​ಗೆ ಬಾಲಯ್ಯ ಫ್ಯಾನ್ಸ್​ ಪ್ರತಿಕ್ರಿಯಿಸಿದ್ದಾರೆ. ಆದರೆ ಕೆಲವರು ತಕರಾರು ತೆಗೆದಿದ್ದಾರೆ. ‘ಓಹ್​ ಇದು ಆ ಮನುಷ್ಯ ಅಲ್ಲವೇ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಎಂಥ ವ್ಯರ್ಥ’ ಎಂಬ ಕಮೆಂಟ್​ ಕೂಡ ಬಂದಿದೆ.

ಆಂಧ್ರ ಪ್ರದೇಶ ಚುನಾವಣೆಯಲ್ಲಿ ಪವನ್​ ಕಲ್ಯಾಣ್​ ಕೂಡ ಜಯ ಸಾಧಿಸಿದ್ದಾರೆ. ಅವರಿಗೂ ಕಾಜಲ್​ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ