AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಗೆದ್ದ ಬಾಲಯ್ಯ, ಪವನ್​ ಕಲ್ಯಾಣ್​ಗೆ ಕಾಜಲ್​ ಅಗರ್​ವಾಲ್ ಅಭಿನಂದನೆ

ಹಿಂದೂಪುರದಲ್ಲಿ ನಟ ನಂದಮೂರಿ ಬಾಲಕೃಷ್ಣ ಅವರು ಚುನಾವಣೆ ಗೆದ್ದಿದ್ದಾರೆ. ಅವರಿಗೆ ನಟಿ ಕಾಜಲ್​ ಅಗರ್​ವಾಲ್​ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು, ಪವನ್​ ಕಲ್ಯಾಣ್​ ಕೂಡ ಆಂಧ್ರ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದಾರೆ. ಅವರಿಗೂ ಕಾಜಲ್​ ಅಗರ್​ವಾಲ್​ ಅವರು ಅಭಿನಂದನೆ ತಿಳಿಸಿದ್ದಾರೆ. ಬಾಲಯ್ಯ ಕುರಿತ ಪೋಸ್ಟ್​ಗೆ ಕೆಲವು ನೆಟ್ಟಿಗರು ನೆಗೆಟಿವ್​ ಕಮೆಂಟ್​ ಮಾಡಿದ್ದಾರೆ.

ಚುನಾವಣೆ ಗೆದ್ದ ಬಾಲಯ್ಯ, ಪವನ್​ ಕಲ್ಯಾಣ್​ಗೆ ಕಾಜಲ್​ ಅಗರ್​ವಾಲ್ ಅಭಿನಂದನೆ
ನಂದಮೂರಿ ಬಾಲಕೃಷ್ಣ, ಕಾಜಲ್​ ಅಗರ್​ವಾಲ್​
ಮದನ್​ ಕುಮಾರ್​
|

Updated on: Jun 05, 2024 | 7:14 PM

Share

ಟಾಲಿವುಡ್​ನ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಹ್ಯಾಟ್ರಿಕ್​ ಗೆಲುವು ಸಾಧಿಸಿದ್ದಾರೆ. ಹಿಂದೂಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅವರು ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆ ಆಗಿದ್ದಾರೆ. ಈ ಗೆಲುವಿಗಾಗಿ ಅನೇಕರು ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ನಟಿ ಕಾಜಲ್​ ಅಗರ್​ವಾಲ್​ (Kajal Aggarwal) ಕೂಡ ಬಾಲಯ್ಯ ಅವರಿಗೆ ವಿಶ್​ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಬಾಲಯ್ಯ (Balayya) ಬಗ್ಗೆ ಕಾಜಲ್​ ಅಗರ್​ವಾಲ್​ ಮಾಡಿರುವ ಪೋಸ್ಟ್​ ವೈರಲ್​ ಆಗಿದೆ. ಇದಕ್ಕೆ ಕಮೆಂಟ್​ ಮಾಡಿರುವ ಕೆಲವರು ಕಟು ಟೀಕೆ ಮಾಡಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಇತ್ತೀಚಿನ ಘಟನೆ.

ಸಿನಿಮಾ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ನಟಿ ಅಂಜಲಿ ಅವರನ್ನು ನಂದಮೂರಿ ಬಾಲಕೃಷ್ಣ ತಳ್ಳಿದ್ದರು. ಆ ಸಂದರ್ಭದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿತ್ತು. ಬಾಲಯ್ಯ ನಡೆದುಕೊಂಡ ರೀತಿ ಸರಿಯಿಲ್ಲ ಎಂದು ತುಂಬ ಜನರು ಕ್ಲಾಸ್​ ತೆಗೆದುಕೊಂಡಿದ್ದರು. ಅದರಲ್ಲೂ ಉತ್ತರ ಭಾರತದ ನೆಟ್ಟಿಗರು ತುಂಬಾನೇ ಗರಂ ಆಗಿದ್ದರು. ಈಗ ಕಾಜಲ್​ ಅಗರ್​ವಾಲ್​ ಅವರು ಬಾಲಯ್ಯ ಕುರಿತು ಮಾಡಿರುವ ಪೋಸ್ಟ್​ಗೂ ಕೆಲವರು ನೆಗೆಟಿವ್​ ಕಮೆಂಟ್​ ಮಾಡುತ್ತಿದ್ದಾರೆ.

‘ಬಾಲಯ್ಯ ಅವರೇ.. ನಿಮ್ಮ ಅಮೋಘ ಯಶಸ್ಸಿಗೆ ಧನ್ಯವಾದಗಳು. ನಿಮ್ಮ ಪರಿಶ್ರಮ, ಬದ್ಧತೆ, ದೂರದೃಷ್ಟಿಯ ಕಾರಣದಿಂದಾಗಿ ನಿಮಗೆ ಜನರಿಂದ ಈ ಪರಿ ಪ್ರೀತಿ ಸಿಕ್ಕಿದೆ’ ಎಂದು ಕಾಜಲ್​ ಅಗರ್​ವಾಲ್​ ಅವರು ಎಕ್ಸ್​ (ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದು ವೈರಲ್​ ಆಗಿದೆ.

ಇದನ್ನೂ ಓದಿ: ‘ಬಾಲಯ್ಯಗೆ ಧನ್ಯವಾದ’; ವಿವಾದದ ಬಳಿಕ ತೇಪೆ ಹಚ್ಚುವ ಕೆಲಸ ಮಾಡಿದ ನಟಿ ಅಂಜಲಿ

ನಂದಮೂರಿ ಬಾಲಕೃಷ್ಣ ಅವರ ಅಪ್ಪಟ ಅಭಿಮಾನಿಗಳು ಈ ಪೋಸ್ಟ್​ಗೆ ಲೈಕ್​ ಮಾಡಿದ್ದಾರೆ. ‘ನಮ್ಮ ನಾಯಕನಿಗೆ ಅಭಿನಂದನೆ ತಿಳಿಸಿದ್ದಕ್ಕೆ ಧನ್ಯವಾದಗಳು’ ಎಂದು ಕಾಜಲ್​ ಪೋಸ್ಟ್​ಗೆ ಬಾಲಯ್ಯ ಫ್ಯಾನ್ಸ್​ ಪ್ರತಿಕ್ರಿಯಿಸಿದ್ದಾರೆ. ಆದರೆ ಕೆಲವರು ತಕರಾರು ತೆಗೆದಿದ್ದಾರೆ. ‘ಓಹ್​ ಇದು ಆ ಮನುಷ್ಯ ಅಲ್ಲವೇ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಎಂಥ ವ್ಯರ್ಥ’ ಎಂಬ ಕಮೆಂಟ್​ ಕೂಡ ಬಂದಿದೆ.

ಆಂಧ್ರ ಪ್ರದೇಶ ಚುನಾವಣೆಯಲ್ಲಿ ಪವನ್​ ಕಲ್ಯಾಣ್​ ಕೂಡ ಜಯ ಸಾಧಿಸಿದ್ದಾರೆ. ಅವರಿಗೂ ಕಾಜಲ್​ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ