ಚುನಾವಣೆ ಗೆದ್ದ ಬಾಲಯ್ಯ, ಪವನ್​ ಕಲ್ಯಾಣ್​ಗೆ ಕಾಜಲ್​ ಅಗರ್​ವಾಲ್ ಅಭಿನಂದನೆ

ಹಿಂದೂಪುರದಲ್ಲಿ ನಟ ನಂದಮೂರಿ ಬಾಲಕೃಷ್ಣ ಅವರು ಚುನಾವಣೆ ಗೆದ್ದಿದ್ದಾರೆ. ಅವರಿಗೆ ನಟಿ ಕಾಜಲ್​ ಅಗರ್​ವಾಲ್​ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು, ಪವನ್​ ಕಲ್ಯಾಣ್​ ಕೂಡ ಆಂಧ್ರ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದಾರೆ. ಅವರಿಗೂ ಕಾಜಲ್​ ಅಗರ್​ವಾಲ್​ ಅವರು ಅಭಿನಂದನೆ ತಿಳಿಸಿದ್ದಾರೆ. ಬಾಲಯ್ಯ ಕುರಿತ ಪೋಸ್ಟ್​ಗೆ ಕೆಲವು ನೆಟ್ಟಿಗರು ನೆಗೆಟಿವ್​ ಕಮೆಂಟ್​ ಮಾಡಿದ್ದಾರೆ.

ಚುನಾವಣೆ ಗೆದ್ದ ಬಾಲಯ್ಯ, ಪವನ್​ ಕಲ್ಯಾಣ್​ಗೆ ಕಾಜಲ್​ ಅಗರ್​ವಾಲ್ ಅಭಿನಂದನೆ
ನಂದಮೂರಿ ಬಾಲಕೃಷ್ಣ, ಕಾಜಲ್​ ಅಗರ್​ವಾಲ್​

Updated on: Jun 05, 2024 | 7:14 PM

ಟಾಲಿವುಡ್​ನ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಹ್ಯಾಟ್ರಿಕ್​ ಗೆಲುವು ಸಾಧಿಸಿದ್ದಾರೆ. ಹಿಂದೂಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅವರು ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆ ಆಗಿದ್ದಾರೆ. ಈ ಗೆಲುವಿಗಾಗಿ ಅನೇಕರು ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ನಟಿ ಕಾಜಲ್​ ಅಗರ್​ವಾಲ್​ (Kajal Aggarwal) ಕೂಡ ಬಾಲಯ್ಯ ಅವರಿಗೆ ವಿಶ್​ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಬಾಲಯ್ಯ (Balayya) ಬಗ್ಗೆ ಕಾಜಲ್​ ಅಗರ್​ವಾಲ್​ ಮಾಡಿರುವ ಪೋಸ್ಟ್​ ವೈರಲ್​ ಆಗಿದೆ. ಇದಕ್ಕೆ ಕಮೆಂಟ್​ ಮಾಡಿರುವ ಕೆಲವರು ಕಟು ಟೀಕೆ ಮಾಡಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಇತ್ತೀಚಿನ ಘಟನೆ.

ಸಿನಿಮಾ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ನಟಿ ಅಂಜಲಿ ಅವರನ್ನು ನಂದಮೂರಿ ಬಾಲಕೃಷ್ಣ ತಳ್ಳಿದ್ದರು. ಆ ಸಂದರ್ಭದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿತ್ತು. ಬಾಲಯ್ಯ ನಡೆದುಕೊಂಡ ರೀತಿ ಸರಿಯಿಲ್ಲ ಎಂದು ತುಂಬ ಜನರು ಕ್ಲಾಸ್​ ತೆಗೆದುಕೊಂಡಿದ್ದರು. ಅದರಲ್ಲೂ ಉತ್ತರ ಭಾರತದ ನೆಟ್ಟಿಗರು ತುಂಬಾನೇ ಗರಂ ಆಗಿದ್ದರು. ಈಗ ಕಾಜಲ್​ ಅಗರ್​ವಾಲ್​ ಅವರು ಬಾಲಯ್ಯ ಕುರಿತು ಮಾಡಿರುವ ಪೋಸ್ಟ್​ಗೂ ಕೆಲವರು ನೆಗೆಟಿವ್​ ಕಮೆಂಟ್​ ಮಾಡುತ್ತಿದ್ದಾರೆ.

‘ಬಾಲಯ್ಯ ಅವರೇ.. ನಿಮ್ಮ ಅಮೋಘ ಯಶಸ್ಸಿಗೆ ಧನ್ಯವಾದಗಳು. ನಿಮ್ಮ ಪರಿಶ್ರಮ, ಬದ್ಧತೆ, ದೂರದೃಷ್ಟಿಯ ಕಾರಣದಿಂದಾಗಿ ನಿಮಗೆ ಜನರಿಂದ ಈ ಪರಿ ಪ್ರೀತಿ ಸಿಕ್ಕಿದೆ’ ಎಂದು ಕಾಜಲ್​ ಅಗರ್​ವಾಲ್​ ಅವರು ಎಕ್ಸ್​ (ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದು ವೈರಲ್​ ಆಗಿದೆ.

ಇದನ್ನೂ ಓದಿ: ‘ಬಾಲಯ್ಯಗೆ ಧನ್ಯವಾದ’; ವಿವಾದದ ಬಳಿಕ ತೇಪೆ ಹಚ್ಚುವ ಕೆಲಸ ಮಾಡಿದ ನಟಿ ಅಂಜಲಿ

ನಂದಮೂರಿ ಬಾಲಕೃಷ್ಣ ಅವರ ಅಪ್ಪಟ ಅಭಿಮಾನಿಗಳು ಈ ಪೋಸ್ಟ್​ಗೆ ಲೈಕ್​ ಮಾಡಿದ್ದಾರೆ. ‘ನಮ್ಮ ನಾಯಕನಿಗೆ ಅಭಿನಂದನೆ ತಿಳಿಸಿದ್ದಕ್ಕೆ ಧನ್ಯವಾದಗಳು’ ಎಂದು ಕಾಜಲ್​ ಪೋಸ್ಟ್​ಗೆ ಬಾಲಯ್ಯ ಫ್ಯಾನ್ಸ್​ ಪ್ರತಿಕ್ರಿಯಿಸಿದ್ದಾರೆ. ಆದರೆ ಕೆಲವರು ತಕರಾರು ತೆಗೆದಿದ್ದಾರೆ. ‘ಓಹ್​ ಇದು ಆ ಮನುಷ್ಯ ಅಲ್ಲವೇ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಎಂಥ ವ್ಯರ್ಥ’ ಎಂಬ ಕಮೆಂಟ್​ ಕೂಡ ಬಂದಿದೆ.

ಆಂಧ್ರ ಪ್ರದೇಶ ಚುನಾವಣೆಯಲ್ಲಿ ಪವನ್​ ಕಲ್ಯಾಣ್​ ಕೂಡ ಜಯ ಸಾಧಿಸಿದ್ದಾರೆ. ಅವರಿಗೂ ಕಾಜಲ್​ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us