AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೀಘ್ರವೇ ಮಹತ್ವದ ಘೋಷಣೆ ಮಾಡುತ್ತೇನೆ ಎಂದ ಕಾಜಲ್ ಅಗರ್​​ವಾಲ್​’​; ನಟಿ ಪ್ರೆಗ್ನೆಂಟ್​ ಎಂದ ಅಭಿಮಾನಿಗಳು

ಹೀರೋಯಿನ್​ಗಳು ತಮ್ಮ ವೃತ್ತಿ ಜೀವನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಮದುವೆ ಆದ ನಂತರ ಮಗು ಮಾಡಿಕೊಳ್ಳೋಕೆ ವಿಳಂಬ ಮಾಡುತ್ತಾರೆ. ಆದರೆ, ಕಾಜಲ್​ ಈ ವಿಚಾರದಲ್ಲಿ ಹಾಗಿಲ್ಲ.

‘ಶೀಘ್ರವೇ ಮಹತ್ವದ ಘೋಷಣೆ ಮಾಡುತ್ತೇನೆ ಎಂದ ಕಾಜಲ್ ಅಗರ್​​ವಾಲ್​’​; ನಟಿ ಪ್ರೆಗ್ನೆಂಟ್​ ಎಂದ ಅಭಿಮಾನಿಗಳು
ಕಾಜಲ್ ಅಗರ್​​ವಾಲ್​
TV9 Web
| Edited By: |

Updated on: Oct 07, 2021 | 4:39 PM

Share

ನಟಿ ಕಾಜಲ್​ ಅಗರ್​ವಾಲ್​ ಕಳೆದ ಅಕ್ಟೋಬರ್​ ತಿಂಗಳಲ್ಲಿ ಮದುವೆ ಆಗಿದ್ದರು. ತಮ್ಮ ಬಾಯ್​ಫ್ರೆಂಡ್​ ಗೌತಮ್​ ಅವರನ್ನು ಮದುವೆ ಆಗುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ಶೀಘ್ರದಲ್ಲೇ ಈ ಜೋಡಿ ವೆಡ್ಡಿಂಗ್​ ಆ್ಯನಿವರ್ಸರಿ ಆಚರಿಸಿಕೊಳ್ಳುತ್ತಿದೆ. ಅದಕ್ಕೂ ಮೊದಲೇ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಸಿಕ್ಕಿದೆ. ಕಾಜಲ್​ ಪ್ರೆಗ್ನೆಂಟ್​ ಎನ್ನುವ ವಿಚಾರ ಜೋರಾಗಿ ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ಅವರು ಪ್ರಮುಖ ಘೋಷಣೆ ಮಾಡುವ ಬಗ್ಗೆ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಹೀರೋಯಿನ್​ಗಳು ತಮ್ಮ ವೃತ್ತಿ ಜೀವನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಮದುವೆ ಆದ ನಂತರ ಮಗು ಮಾಡಿಕೊಳ್ಳೋಕೆ ವಿಳಂಬ ಮಾಡುತ್ತಾರೆ. ಆದರೆ, ಕಾಜಲ್​ ಈ ವಿಚಾರದಲ್ಲಿ ಹಾಗಿಲ್ಲ. ಮದುವೆ ಆದ ಒಂದೇ ವರ್ಷದಲ್ಲಿ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುತ್ತಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೀಘ್ರವೇ ಪ್ರಮುಖ ಘೋಷಣೆ ಮಾಡುತ್ತೇನೆ ಎಂದಿದ್ದಾರೆ.

ಕಾಜಲ್ ಅಗರ್​ವಾಲ್​ ಅವರು ಅಕ್ಕಿನೇನಿ ನಾಗಾರ್ಜುನ ನಟನೆಯ ‘ಘೋಸ್ಟ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್​ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ತೆಲುಗು ಬಿಗ್​ ಬಾಸ್​ ಸೀಸನ್​ 5ರ ನಿರೂಪಣೆಯಲ್ಲಿ ಬ್ಯುಸಿ ಇರುವ ನಾಗಾರ್ಜುನ ಶೀಘ್ರವೇ ಈ ಸಿನಿಮಾದ ಸೆಟ್​ ಸೇರಿಕೊಳ್ಳುತ್ತಿದ್ದಾರೆ. ಆದರೆ, ಈ ಸಿನಿಮಾದಿಂದ ಹೊರ ನಡೆಯಲು ಕಾಜಲ್​ ನಿರ್ಧರಿಸಿದ್ದಾರೆ. ಗರ್ಭಿಣಿ ಆದ ನಂತರ ಶೂಟಿಂಗ್​ ಪೂರ್ಣಗೊಳಿಸೋದು ಕಷ್ಟ. ಈ ಕಾರಣಕ್ಕೆ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಇನ್ನು, ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದಲ್ಲಿಯೂ ಕಾಜಲ್​ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಪೂರ್ಣಗೊಂಡಿದ್ದು, ಪ್ಯಾಚ್​ವರ್ಕ್​ ಕೆಲಸಗಳು ಬಾಕಿ ಇವೆ. ಇದನ್ನು ಕಾಜಲ್​ ಶೀಘ್ರವೇ ಪೂರ್ಣಗೊಳಿಸಲಿದ್ದಾರೆ. ನಂತರ ಅವರು ವಿಶ್ರಾಂತಿ ಪಡೆಯಲಿದ್ದಾರೆ. ಇನ್ನು, ಅವರು ಒಪ್ಪಿಕೊಂಡಿರುವ ಬಹುತೇಕ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ‘ಇಂಡಿಯನ್ 2’ ಸಿನಿಮಾದಲ್ಲಿಯೂ ಕಾಜಲ್​ ಅಗರ್​ವಾಲ್​ ನಟಿಸುತ್ತಿದ್ದಾರೆ. ಕಮಲ್​ ಹಾಸನ್​ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಕೆಲಸಗಳು ಸೆಟ್ಟೇರುವುದು ವಿಳಂಬವಾಗುತ್ತಲೇ ಇದೆ.

ಕೆಲ ತಿಂಗಳ ಹಿಂದೆ ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ. ನಾನು ಇಂದು ಈ ಸ್ಥಾನದಲ್ಲಿ ಇರುವುದಕ್ಕೆ ಕಾರಣ ನನ್ನ ಪತಿ ಹಾಗೂ ನನ್ನ ಕುಟುಂಬ. ನಾನು ನನ್ನ ಪತಿಯ ಅನುಮತಿ ಪಡೆದೇ ನಟನೆ ಮುಂದುವರಿಸುತ್ತಿದ್ದೇನೆ’ ಎಂದಿದ್ದರು.

ಇದನ್ನೂ ಓದಿ: ಮದುವೆ ನಂತರ ಬಿಕಿನಿ ತೊಟ್ಟ ಕಾಜಲ್​ ಅಗರ್​ವಾಲ್​; ಆದರೆ, ಇದರ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ