AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೀಘ್ರವೇ ಮಹತ್ವದ ಘೋಷಣೆ ಮಾಡುತ್ತೇನೆ ಎಂದ ಕಾಜಲ್ ಅಗರ್​​ವಾಲ್​’​; ನಟಿ ಪ್ರೆಗ್ನೆಂಟ್​ ಎಂದ ಅಭಿಮಾನಿಗಳು

ಹೀರೋಯಿನ್​ಗಳು ತಮ್ಮ ವೃತ್ತಿ ಜೀವನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಮದುವೆ ಆದ ನಂತರ ಮಗು ಮಾಡಿಕೊಳ್ಳೋಕೆ ವಿಳಂಬ ಮಾಡುತ್ತಾರೆ. ಆದರೆ, ಕಾಜಲ್​ ಈ ವಿಚಾರದಲ್ಲಿ ಹಾಗಿಲ್ಲ.

‘ಶೀಘ್ರವೇ ಮಹತ್ವದ ಘೋಷಣೆ ಮಾಡುತ್ತೇನೆ ಎಂದ ಕಾಜಲ್ ಅಗರ್​​ವಾಲ್​’​; ನಟಿ ಪ್ರೆಗ್ನೆಂಟ್​ ಎಂದ ಅಭಿಮಾನಿಗಳು
ಕಾಜಲ್ ಅಗರ್​​ವಾಲ್​
TV9 Web
| Edited By: |

Updated on: Oct 07, 2021 | 4:39 PM

Share

ನಟಿ ಕಾಜಲ್​ ಅಗರ್​ವಾಲ್​ ಕಳೆದ ಅಕ್ಟೋಬರ್​ ತಿಂಗಳಲ್ಲಿ ಮದುವೆ ಆಗಿದ್ದರು. ತಮ್ಮ ಬಾಯ್​ಫ್ರೆಂಡ್​ ಗೌತಮ್​ ಅವರನ್ನು ಮದುವೆ ಆಗುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ಶೀಘ್ರದಲ್ಲೇ ಈ ಜೋಡಿ ವೆಡ್ಡಿಂಗ್​ ಆ್ಯನಿವರ್ಸರಿ ಆಚರಿಸಿಕೊಳ್ಳುತ್ತಿದೆ. ಅದಕ್ಕೂ ಮೊದಲೇ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಸಿಕ್ಕಿದೆ. ಕಾಜಲ್​ ಪ್ರೆಗ್ನೆಂಟ್​ ಎನ್ನುವ ವಿಚಾರ ಜೋರಾಗಿ ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ಅವರು ಪ್ರಮುಖ ಘೋಷಣೆ ಮಾಡುವ ಬಗ್ಗೆ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಹೀರೋಯಿನ್​ಗಳು ತಮ್ಮ ವೃತ್ತಿ ಜೀವನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಮದುವೆ ಆದ ನಂತರ ಮಗು ಮಾಡಿಕೊಳ್ಳೋಕೆ ವಿಳಂಬ ಮಾಡುತ್ತಾರೆ. ಆದರೆ, ಕಾಜಲ್​ ಈ ವಿಚಾರದಲ್ಲಿ ಹಾಗಿಲ್ಲ. ಮದುವೆ ಆದ ಒಂದೇ ವರ್ಷದಲ್ಲಿ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುತ್ತಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೀಘ್ರವೇ ಪ್ರಮುಖ ಘೋಷಣೆ ಮಾಡುತ್ತೇನೆ ಎಂದಿದ್ದಾರೆ.

ಕಾಜಲ್ ಅಗರ್​ವಾಲ್​ ಅವರು ಅಕ್ಕಿನೇನಿ ನಾಗಾರ್ಜುನ ನಟನೆಯ ‘ಘೋಸ್ಟ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್​ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ತೆಲುಗು ಬಿಗ್​ ಬಾಸ್​ ಸೀಸನ್​ 5ರ ನಿರೂಪಣೆಯಲ್ಲಿ ಬ್ಯುಸಿ ಇರುವ ನಾಗಾರ್ಜುನ ಶೀಘ್ರವೇ ಈ ಸಿನಿಮಾದ ಸೆಟ್​ ಸೇರಿಕೊಳ್ಳುತ್ತಿದ್ದಾರೆ. ಆದರೆ, ಈ ಸಿನಿಮಾದಿಂದ ಹೊರ ನಡೆಯಲು ಕಾಜಲ್​ ನಿರ್ಧರಿಸಿದ್ದಾರೆ. ಗರ್ಭಿಣಿ ಆದ ನಂತರ ಶೂಟಿಂಗ್​ ಪೂರ್ಣಗೊಳಿಸೋದು ಕಷ್ಟ. ಈ ಕಾರಣಕ್ಕೆ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಇನ್ನು, ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದಲ್ಲಿಯೂ ಕಾಜಲ್​ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಪೂರ್ಣಗೊಂಡಿದ್ದು, ಪ್ಯಾಚ್​ವರ್ಕ್​ ಕೆಲಸಗಳು ಬಾಕಿ ಇವೆ. ಇದನ್ನು ಕಾಜಲ್​ ಶೀಘ್ರವೇ ಪೂರ್ಣಗೊಳಿಸಲಿದ್ದಾರೆ. ನಂತರ ಅವರು ವಿಶ್ರಾಂತಿ ಪಡೆಯಲಿದ್ದಾರೆ. ಇನ್ನು, ಅವರು ಒಪ್ಪಿಕೊಂಡಿರುವ ಬಹುತೇಕ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ‘ಇಂಡಿಯನ್ 2’ ಸಿನಿಮಾದಲ್ಲಿಯೂ ಕಾಜಲ್​ ಅಗರ್​ವಾಲ್​ ನಟಿಸುತ್ತಿದ್ದಾರೆ. ಕಮಲ್​ ಹಾಸನ್​ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಕೆಲಸಗಳು ಸೆಟ್ಟೇರುವುದು ವಿಳಂಬವಾಗುತ್ತಲೇ ಇದೆ.

ಕೆಲ ತಿಂಗಳ ಹಿಂದೆ ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ. ನಾನು ಇಂದು ಈ ಸ್ಥಾನದಲ್ಲಿ ಇರುವುದಕ್ಕೆ ಕಾರಣ ನನ್ನ ಪತಿ ಹಾಗೂ ನನ್ನ ಕುಟುಂಬ. ನಾನು ನನ್ನ ಪತಿಯ ಅನುಮತಿ ಪಡೆದೇ ನಟನೆ ಮುಂದುವರಿಸುತ್ತಿದ್ದೇನೆ’ ಎಂದಿದ್ದರು.

ಇದನ್ನೂ ಓದಿ: ಮದುವೆ ನಂತರ ಬಿಕಿನಿ ತೊಟ್ಟ ಕಾಜಲ್​ ಅಗರ್​ವಾಲ್​; ಆದರೆ, ಇದರ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್