Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಪತಿಗಾಗಿ ಚಿತ್ರರಂಗ ತೊರೆಯೋ ನಿರ್ಧಾರಕ್ಕೆ ಬಂದ ಕಾಜಲ್​ ಅಗರ್​ವಾಲ್​

ದಕ್ಷಿಣ ಭಾರತದಲ್ಲಿ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಕಾಜಲ್​ಗೆ ಇದೆ. ಪ್ಯಾರಿಸ್​ ಪ್ಯಾರಿಸ್​ ಸೇರಿ ಐದಾರು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ.

Kajal Aggarwal: ಪತಿಗಾಗಿ ಚಿತ್ರರಂಗ ತೊರೆಯೋ ನಿರ್ಧಾರಕ್ಕೆ ಬಂದ ಕಾಜಲ್​ ಅಗರ್​ವಾಲ್​
ಕಾಜಲ್​ ಹೇಳಿಕೆ ಅವರ ಅಭಿಮಾನಿಗಳಿಗೆ ಬೇಸರ ಹಾಗೂ ಆತಂಕ ಮೂಡಿಸಿತ್ತು.
Follow us
ರಾಜೇಶ್ ದುಗ್ಗುಮನೆ
|

Updated on:May 19, 2021 | 8:09 PM

ಮದುವೆ ಆದ ನಂತರದಲ್ಲಿ ಸಾಕಷ್ಟು ನಟಿಯರು ಚಿತ್ರರಂಗ ತೊರೆದಿದ್ದಾರೆ. ಸಂಸಾರದಲ್ಲಿ ಬ್ಯುಸಿಯಾಗಿ ಸಿನಿಮಾ ರಂಗದಿಂದ ದೂರ ಉಳಿದವರ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಈ ಸಾಲಿಗೆ ಈಗ ನಟಿ ಕಾಜಲ್​ ಅಗರ್​ವಾಲ್​ ಕೂಡ ಸೇರ್ಪಡೆ ಆಗುವ ಲಕ್ಷಣ ಗೋಚರವಾಗಿದೆ. ಅವರು ಶೀಘ್ರವೇ ಚಿತ್ರರಂಗ ತೊರೆಯುವ ಸೂಚನೆ ಸಿಕ್ಕಿದೆ.

ದಕ್ಷಿಣ ಭಾರತದಲ್ಲಿ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಕಾಜಲ್​ಗೆ ಇದೆ. ಪ್ಯಾರಿಸ್​ ಪ್ಯಾರಿಸ್​ ಸೇರಿ ಐದಾರು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಈ ಪೈಕಿ ಕೆಲ ಚಿತ್ರಗಳು ರಿಲೀಸ್​ಗೆ ರೆಡಿ ಇದ್ದು, ಕೊರೊನಾದಿಂದ ವಿಳಂಬವಾಗಿದೆ. ಹೀಗಿರುವಾಗಲೇ ಅವರ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​ ಒಂದು ಸಿಕ್ಕಿದೆ. ಕಾಜಲ್​ ಚಿತ್ರರಂಗದಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಅವರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಸಿನಿಮಾ ರಂಗದಿಂದ ದೂರ ಸರಿಯುವ ಆಲೋಚನೆ ಇದೆಯೇ ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿರುವ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ. ನಾನು ಇಂದು ಈ ಸ್ಥಾನದಲ್ಲಿ ಇರುವುದಕ್ಕೆ ಕಾರಣ ನನ್ನ ಪತಿ ಹಾಗೂ ನನ್ನ ಕುಟುಂಬ. ನಾನು ನನ್ನ ಪತಿಯ ಅನುಮತಿ ಪಡೆದೇ ನಟನೆ ಮುಂದುವರಿಸುತ್ತಿದ್ದೇನೆ’ ಎಂದಿದ್ದಾರೆ​.

ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಮದುವೆ ನಂತರವೂ ಅವರು ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಒಂದೊಮ್ಮೆ ಗೌತಮ್​ ನಟನೆಯಿಂದ ದೂರ ಉಳಿಯುವಂತೆ ಸೂಚಿಸಿದರೆ ಕಾಜಲ್ ಸಿನಿ ಬದುಕು ಅಂತ್ಯವಾಗಲಿದೆ. ಈ ನಿರ್ಧಾರವನ್ನು ಕಾಜಲ್​ ತೆಗೆದುಕೊಂಡರೆ ಅವರ ಅಭಿಮಾನಿಗಳಿಗೆ ಬೇಸರ ಆಗೋದು ಖಚಿತ.

ನಟಿ ಶಿಲ್ಪಾ ಶೆಟ್ಟಿ ಮದುವೆ ಆದ ನಂತರ ಚಿತ್ರರಂಗದಿಂದ ಸಂಪೂರ್ಣವಾಗಿ ದೂರವೇ ಉಳಿದುಕೊಂಡರು. ಸೋನಮ್ ಕಪೂರ್​ ಕೂಡ ಮದುವೆ ನಂತರ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟಿವ್​ ಇಲ್ಲ. ಈ ಸಾಲಿಗೆ ಈಗ ಕಾಜಲ್​ ಕೂಡ ಸೇರಿಕೊಂಡರೂ ಅಚ್ಚರಿ ಇಲ್ಲ.

ಇದನ್ನೂ ಓದಿ: ದರ್ಶನ್​-ವಿಜಯಲಕ್ಷ್ಮಿ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ; ವೈರಲ್​ ಆಯ್ತು ಮದುವೆ ಆಮಂತ್ರಣ ಪತ್ರ  

ಅಭಿಮಾನಿಯ ನೋವಿಗೆ ಸ್ಪಂದಿಸಿದ ಕಾಜಲ್​; ಅಬ್ಬಾ ಅವರು ಮಾಡಿದ ಸಹಾಯ ಮರೆಯಂಗಿಲ್ಲ!

Published On - 7:23 pm, Wed, 19 May 21

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ