AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಜಲ್​ ಅಗರ್​ವಾಲ್​ ನಟನೆಯ ‘ಸತ್ಯಭಾಮಾ’ ಸಿನಿಮಾ ಮೇ 17ಕ್ಕೆ ಬಿಡುಗಡೆ

ಹೊಸದೊಂದು ಟೀಸರ್ ಅನಾವರಣ ಮಾಡುವ​ ಮೂಲಕ ‘ಸತ್ಯಭಾಮಾ’ ಸಿನಿಮಾದ ರಿಲೀಸ್​ ದಿನಾಂಕ ತಿಳಿಸಲಾಗಿದೆ. ಈ ಚಿತ್ರ ಮೇ 17ರಂದು ತೆರೆಕಾಣಲಿದೆ. ವಿದೇಶದಲ್ಲೂ ಏಕಕಾಲಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಎಸಿಪಿ ಸತ್ಯಭಾಮಾ ಎಂಬ ಪಾತ್ರವನ್ನು ಕಾಜಲ್​​ ಅಗರ್​ವಾಲ್​ ನಿಭಾಯಿಸಿದ್ದಾರೆ. ಟೀಸರ್​ನಲ್ಲಿ ಅವರ ಲುಕ್​ ಗಮನ ಸೆಳೆದಿದೆ.

ಕಾಜಲ್​ ಅಗರ್​ವಾಲ್​ ನಟನೆಯ ‘ಸತ್ಯಭಾಮಾ’ ಸಿನಿಮಾ ಮೇ 17ಕ್ಕೆ ಬಿಡುಗಡೆ
ಕಾಜಲ್​ ಅಗರ್​ವಾಲ್​
ಮದನ್​ ಕುಮಾರ್​
|

Updated on: Apr 22, 2024 | 8:54 PM

Share

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಕಾಜಲ್​ ಅಗರ್​ವಾಲ್​ (Kajal Aggarwal) ಅವರು ಈಗಲೂ ಅಷ್ಟೇ ಡಿಮ್ಯಾಂಡ್​ ಉಳಿಸಿಕೊಂಡಿದ್ದಾರೆ. ಮದುವೆ ಬಳಿಕ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುವುದು ನಿಲ್ಲಿಸಬಹುದು ಎಂದು ಕೆಲವರು ಊಹಿಸಿದ್ದರು. ಆದರೆ ಹಾಗೆ ಆಗಲಿಲ್ಲ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಕಾಜಲ್​ ನಟಿಸುತ್ತಿದ್ದಾರೆ. ಈಗ ಅವರು ನಟಿಸಿರುವ ‘ಸತ್ಯಭಾಮಾ’ ಸಿನಿಮಾ (Sathyabhama Movie) ತಂಡದಿಂದ ಒಂದು ಅಪ್​ಡೇಟ್​ ಸಿಕ್ಕಿದೆ. ಈ ಚಿತ್ರದ ರಿಲೀಸ್​ ಡೇಟ್​ ಅನೌನ್ಸ್​ ಮಾಡಲಾಗಿದೆ. ಅದರ ಜೊತೆಗೆ ಒಂದು ಮಾಸ್​ ಟೀಸರ್​ (Sathyabhama Teaser) ಕೂಡ ಬಿಡುಗಡೆ ಆಗಿದೆ.

‘ಸತ್ಯಭಾಮಾ’ ಸಿನಿಮಾದಲ್ಲಿ ಕಾಜಲ್​ ಅಗರ್​ವಾಲ್​ ಅವರು ಹಿಂದೆಂದಿಗಿಂತಲೂ ಡಿಫರೆಂಟ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರಿಗೆ ಪೊಲೀಸ್​ ಅಧಿಕಾರಿಯ ಪಾತ್ರ ಇದೆ. ಈಗ ಬಿಡುಗಡೆ ಆಗಿರುವ ಟೀಸರ್​ನಲ್ಲಿ ಅವರು ಗನ್​ ಹಿಡಿದು ಅಬ್ಬರಿಸಿದ್ದಾರೆ. ಅವರ ಗತ್ತು ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಈ ಸಿನಿಮಾಗಾಗಿ ಅವರ ಅಭಿಮಾನಿಗಳು ಕಾದಿದ್ದಾರೆ.

ಟೀಸರ್​ ಮೂಲಕ ‘ಸತ್ಯಭಾಮಾ’ ಚಿತ್ರದ ಬಿಡುಗಡೆ ದಿನಾಂಕವನ್ನು ತಿಳಿಸಲಾಗಿದೆ. ಈ ಸಿನಿಮಾ ಮೇ 17ರಂದು ಬಿಡುಗಡೆ ಆಗಲಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿಯೂ ಈ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಈ ಸಿನಿಮಾದಲ್ಲಿ ಎಸಿಪಿ ಸತ್ಯಭಾಮಾ ಎಂಬ ಪಾತ್ರಕ್ಕೆ ಕಾಜಲ್​ ಅಗರ್​ವಾಲ್​ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: ರಜನಿಕಾಂತ್​ ನಟನೆಯ 171ನೇ ಚಿತ್ರದ ಹೆಸರು ‘ಕೂಲಿ’; ಬಂತು ಭರ್ಜರಿ ಟೀಸರ್​

ವಿಶೇಷ ಏನೆಂದರೆ, ಈ ಟೀಸರ್ ಹಂಚಿಕೊಂಡಿರುವ ನಿರ್ಮಾಪಕರು ಕಾಜಲ್​ಗೆ ಒಂದು ಬಿರುದು ನೀಡಿದ್ದಾರೆ. ಕಾಜಲ್​ ಅವರನ್ನು ‘ಕ್ವೀನ್​ ಆಫ್​ ಮಾಸಸ್​’ ಎಂದು ಕರೆಯಲಾಗಿದೆ. ಈ ಬಿರುದು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಇದಲ್ಲದೇ ಕಾಜಲ್​ ಅಗರ್​ವಾಲ್​ ಅವರು ‘ಇಂಡಿಯನ್​ 2’ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಚಿತ್ರ ಕೂಡ ಬಿಡುಗಡೆಗೆ ಸಜ್ಜಾಗಿದೆ. ಒಟ್ಟಿನಲ್ಲಿ, ‘ಸತ್ಯಭಾಮಾ’, ‘ಇಂಡಿಯನ್​ 2’ ಸಿನಿಮಾಗಳ ಮೂಲಕ ಅವರ ಅಭಿಮಾನಿಗಳಿಗೆ ಬ್ಯಾಕ್​ ಟು ಬ್ಯಾಕ್​ ಮನರಂಜನೆ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!