Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ನೋವಿಗೆ ಸ್ಪಂದಿಸಿದ ಕಾಜಲ್​; ಅಬ್ಬಾ ಅವರು ಮಾಡಿದ ಸಹಾಯ ಮರೆಯಂಗಿಲ್ಲ!

ಶನಿವಾರ (ಏಪ್ರಿಲ್​ 3) ಹೈದರಾಬಾದಿನ ಎಂ ಫಾರ್ಮಸಿ ವಿದ್ಯಾರ್ಥಿನಿ ಸುಮಾ ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಈ ಕಷ್ಟಕ್ಕೆ ಕಾಜಲ್​ ಸ್ಪಂದಿಸಿದ್ದಾರೆ.

ಅಭಿಮಾನಿಯ ನೋವಿಗೆ ಸ್ಪಂದಿಸಿದ ಕಾಜಲ್​; ಅಬ್ಬಾ ಅವರು ಮಾಡಿದ ಸಹಾಯ ಮರೆಯಂಗಿಲ್ಲ!
ಕಾಜಲ್​ ಅಗರ್​ವಾಲ್​​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 04, 2021 | 4:34 PM

ಅನೇಕ ಸ್ಟಾರ್​ ನಟ-ನಟಿಯರು ಅಭಿಮಾನಿಗಳಿಗೆ ಸಹಾಯ ಮಾಡುತ್ತಾರೆ. ಅಭಿಮಾನಿಗಳು ಟ್ವಿಟರ್​ನಲ್ಲಿ ಇಡುವ ಬೇಡಿಕೆಗೆ ಸ್ಟಾರ್​ಗಳು ಸ್ಪಂದಿಸಿದ ಉದಾಹರಣೆ ಇದೆ. ಇದಕ್ಕೆ ಈಗ ತಾಜಾ ಉದಾಹರಣೆ ಕಾಜಲ್​ ಅಗರ್​ವಾಲ್​​. ಕಷ್ಟ ಎಂದು ಹೇಳಿಕೊಂಡ ಅಭಿಮಾನಿಗೆ ಹಿಂದು-ಮುಂದು ನೋಡದೇ ಕಾಜಲ್​ ಸಹಾಯ ಹಸ್ತ ಚಾಚಿದ್ದಾರೆ. ಸದ್ಯ ಈ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಶನಿವಾರ (ಏಪ್ರಿಲ್​ 3) ಹೈದರಾಬಾದಿನ ಎಂ ಫಾರ್ಮಸಿ ವಿದ್ಯಾರ್ಥಿನಿ ಸುಮಾ ಎಂಬುವವರು ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ ಅವರು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಸುಮಾ ಪಾರ್ಟ್​ ಟೈಮ್​ ಕೆಲಸ ಮಾಡುತ್ತಲೇ ಕಾಲೇಜಿಗೂ ಹೋಗುತ್ತಿದ್ದರು. ಆದರೆ, ಇತ್ತೀಚೆಗೆ ಅವರು ಕೆಲಸ ಕಳೆದುಕೊಂಡಿದ್ದಾರೆ. ಹೀಗಾಗಿ ಕಾಲೇಜ್​ನ ಫೀಸ್​ ತುಂಬಲು ಅವರ ಬಳಿ ಸಾಧ್ಯವಾಗಿಯೇ ಇಲ್ಲ.

ಕಾಲೇಜ್​ ಸೇರಬೇಕು ಎಂದರೆ 83,000 ಸಾವಿರ ರೂಪಾಯಿ ಹಣ ಪಾವತಿಸಬೇಕಿತ್ತು. ಇದಕ್ಕೆ ಸಹಾಯ ಮಾಡುವಂತೆ ಟ್ವಿಟರ್​ನಲ್ಲಿ ಕಾಜಲ್​ ಬಳಿ ಸುಮಾ ಮನವಿ ಮಾಡಿದ್ದಾರೆ. ಇದಕ್ಕೆ ಕಾಜಲ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಟ್ವೀಟ್​ ಮಾಡಿದ ಕೆಲವೇ ಗಂಟೆಗಳಲ್ಲಿ ಕಾಜಲ್​ ವಕ್ತಾರರು ಸುಮಾ ಅವರನ್ನು ಕಾಂಟ್ಯಾಕ್ಟ್ ಮಾಡಿದ್ದಾರೆ. ಅವರ ಬ್ಯಾಂಕ್​ ಖಾತೆ ಮಾಹಿತಿ ಪಡೆದು ಒಂದು ಲಕ್ಷ ರೂಪಾಯಿ ಹಣ ಪಾವತಿ ಮಾಡಿದ್ದಾರೆ.

ಈ ವಿಚಾರ ತಿಳಿದು ಹುಡುಗಿ ಕಡೆಯವರು ಸಖತ್​ ಖುಷಿ ಆಗಿದ್ದಾರೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲ, ಕಾಜಲ್​ ಮಾಡಿದ ಸಹಾಯಕ್ಕೆ ಎಲ್ಲರೂ ತಲೆ ಬಾಗಿದ್ದಾರೆ.

ಕಳೆದ ವರ್ಷ ಕಾಜಲ್​ ಅಗರ್​ವಾಲ್​ ಹಸಮಣೆ ಏರಿದ್ದರು. ಇದಾದ ನಂತರ ಅವರು ಹನಿಮೂನ್​ಗೂ ತೆರಳಿದ್ದರು. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: 30 ವರ್ಷಗಳಿಂದಲೂ ಶ್ವಾಸನಾಳದ ಅಸ್ತಮಾದಿಂದ ಬಳಲುತ್ತಿದ್ದಾರೆ ಖ್ಯಾತ ನಟಿ ಕಾಜಲ್​ ಅಗರ್​ವಾಲ್

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ