AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ನೋವಿಗೆ ಸ್ಪಂದಿಸಿದ ಕಾಜಲ್​; ಅಬ್ಬಾ ಅವರು ಮಾಡಿದ ಸಹಾಯ ಮರೆಯಂಗಿಲ್ಲ!

ಶನಿವಾರ (ಏಪ್ರಿಲ್​ 3) ಹೈದರಾಬಾದಿನ ಎಂ ಫಾರ್ಮಸಿ ವಿದ್ಯಾರ್ಥಿನಿ ಸುಮಾ ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಈ ಕಷ್ಟಕ್ಕೆ ಕಾಜಲ್​ ಸ್ಪಂದಿಸಿದ್ದಾರೆ.

ಅಭಿಮಾನಿಯ ನೋವಿಗೆ ಸ್ಪಂದಿಸಿದ ಕಾಜಲ್​; ಅಬ್ಬಾ ಅವರು ಮಾಡಿದ ಸಹಾಯ ಮರೆಯಂಗಿಲ್ಲ!
ಕಾಜಲ್​ ಅಗರ್​ವಾಲ್​​
ರಾಜೇಶ್ ದುಗ್ಗುಮನೆ
| Edited By: |

Updated on: Apr 04, 2021 | 4:34 PM

Share

ಅನೇಕ ಸ್ಟಾರ್​ ನಟ-ನಟಿಯರು ಅಭಿಮಾನಿಗಳಿಗೆ ಸಹಾಯ ಮಾಡುತ್ತಾರೆ. ಅಭಿಮಾನಿಗಳು ಟ್ವಿಟರ್​ನಲ್ಲಿ ಇಡುವ ಬೇಡಿಕೆಗೆ ಸ್ಟಾರ್​ಗಳು ಸ್ಪಂದಿಸಿದ ಉದಾಹರಣೆ ಇದೆ. ಇದಕ್ಕೆ ಈಗ ತಾಜಾ ಉದಾಹರಣೆ ಕಾಜಲ್​ ಅಗರ್​ವಾಲ್​​. ಕಷ್ಟ ಎಂದು ಹೇಳಿಕೊಂಡ ಅಭಿಮಾನಿಗೆ ಹಿಂದು-ಮುಂದು ನೋಡದೇ ಕಾಜಲ್​ ಸಹಾಯ ಹಸ್ತ ಚಾಚಿದ್ದಾರೆ. ಸದ್ಯ ಈ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಶನಿವಾರ (ಏಪ್ರಿಲ್​ 3) ಹೈದರಾಬಾದಿನ ಎಂ ಫಾರ್ಮಸಿ ವಿದ್ಯಾರ್ಥಿನಿ ಸುಮಾ ಎಂಬುವವರು ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ ಅವರು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಸುಮಾ ಪಾರ್ಟ್​ ಟೈಮ್​ ಕೆಲಸ ಮಾಡುತ್ತಲೇ ಕಾಲೇಜಿಗೂ ಹೋಗುತ್ತಿದ್ದರು. ಆದರೆ, ಇತ್ತೀಚೆಗೆ ಅವರು ಕೆಲಸ ಕಳೆದುಕೊಂಡಿದ್ದಾರೆ. ಹೀಗಾಗಿ ಕಾಲೇಜ್​ನ ಫೀಸ್​ ತುಂಬಲು ಅವರ ಬಳಿ ಸಾಧ್ಯವಾಗಿಯೇ ಇಲ್ಲ.

ಕಾಲೇಜ್​ ಸೇರಬೇಕು ಎಂದರೆ 83,000 ಸಾವಿರ ರೂಪಾಯಿ ಹಣ ಪಾವತಿಸಬೇಕಿತ್ತು. ಇದಕ್ಕೆ ಸಹಾಯ ಮಾಡುವಂತೆ ಟ್ವಿಟರ್​ನಲ್ಲಿ ಕಾಜಲ್​ ಬಳಿ ಸುಮಾ ಮನವಿ ಮಾಡಿದ್ದಾರೆ. ಇದಕ್ಕೆ ಕಾಜಲ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಟ್ವೀಟ್​ ಮಾಡಿದ ಕೆಲವೇ ಗಂಟೆಗಳಲ್ಲಿ ಕಾಜಲ್​ ವಕ್ತಾರರು ಸುಮಾ ಅವರನ್ನು ಕಾಂಟ್ಯಾಕ್ಟ್ ಮಾಡಿದ್ದಾರೆ. ಅವರ ಬ್ಯಾಂಕ್​ ಖಾತೆ ಮಾಹಿತಿ ಪಡೆದು ಒಂದು ಲಕ್ಷ ರೂಪಾಯಿ ಹಣ ಪಾವತಿ ಮಾಡಿದ್ದಾರೆ.

ಈ ವಿಚಾರ ತಿಳಿದು ಹುಡುಗಿ ಕಡೆಯವರು ಸಖತ್​ ಖುಷಿ ಆಗಿದ್ದಾರೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲ, ಕಾಜಲ್​ ಮಾಡಿದ ಸಹಾಯಕ್ಕೆ ಎಲ್ಲರೂ ತಲೆ ಬಾಗಿದ್ದಾರೆ.

ಕಳೆದ ವರ್ಷ ಕಾಜಲ್​ ಅಗರ್​ವಾಲ್​ ಹಸಮಣೆ ಏರಿದ್ದರು. ಇದಾದ ನಂತರ ಅವರು ಹನಿಮೂನ್​ಗೂ ತೆರಳಿದ್ದರು. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: 30 ವರ್ಷಗಳಿಂದಲೂ ಶ್ವಾಸನಾಳದ ಅಸ್ತಮಾದಿಂದ ಬಳಲುತ್ತಿದ್ದಾರೆ ಖ್ಯಾತ ನಟಿ ಕಾಜಲ್​ ಅಗರ್​ವಾಲ್

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ