AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ನೋವಿಗೆ ಸ್ಪಂದಿಸಿದ ಕಾಜಲ್​; ಅಬ್ಬಾ ಅವರು ಮಾಡಿದ ಸಹಾಯ ಮರೆಯಂಗಿಲ್ಲ!

ಶನಿವಾರ (ಏಪ್ರಿಲ್​ 3) ಹೈದರಾಬಾದಿನ ಎಂ ಫಾರ್ಮಸಿ ವಿದ್ಯಾರ್ಥಿನಿ ಸುಮಾ ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಈ ಕಷ್ಟಕ್ಕೆ ಕಾಜಲ್​ ಸ್ಪಂದಿಸಿದ್ದಾರೆ.

ಅಭಿಮಾನಿಯ ನೋವಿಗೆ ಸ್ಪಂದಿಸಿದ ಕಾಜಲ್​; ಅಬ್ಬಾ ಅವರು ಮಾಡಿದ ಸಹಾಯ ಮರೆಯಂಗಿಲ್ಲ!
ಕಾಜಲ್​ ಅಗರ್​ವಾಲ್​​
ರಾಜೇಶ್ ದುಗ್ಗುಮನೆ
| Edited By: |

Updated on: Apr 04, 2021 | 4:34 PM

Share

ಅನೇಕ ಸ್ಟಾರ್​ ನಟ-ನಟಿಯರು ಅಭಿಮಾನಿಗಳಿಗೆ ಸಹಾಯ ಮಾಡುತ್ತಾರೆ. ಅಭಿಮಾನಿಗಳು ಟ್ವಿಟರ್​ನಲ್ಲಿ ಇಡುವ ಬೇಡಿಕೆಗೆ ಸ್ಟಾರ್​ಗಳು ಸ್ಪಂದಿಸಿದ ಉದಾಹರಣೆ ಇದೆ. ಇದಕ್ಕೆ ಈಗ ತಾಜಾ ಉದಾಹರಣೆ ಕಾಜಲ್​ ಅಗರ್​ವಾಲ್​​. ಕಷ್ಟ ಎಂದು ಹೇಳಿಕೊಂಡ ಅಭಿಮಾನಿಗೆ ಹಿಂದು-ಮುಂದು ನೋಡದೇ ಕಾಜಲ್​ ಸಹಾಯ ಹಸ್ತ ಚಾಚಿದ್ದಾರೆ. ಸದ್ಯ ಈ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಶನಿವಾರ (ಏಪ್ರಿಲ್​ 3) ಹೈದರಾಬಾದಿನ ಎಂ ಫಾರ್ಮಸಿ ವಿದ್ಯಾರ್ಥಿನಿ ಸುಮಾ ಎಂಬುವವರು ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ ಅವರು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಸುಮಾ ಪಾರ್ಟ್​ ಟೈಮ್​ ಕೆಲಸ ಮಾಡುತ್ತಲೇ ಕಾಲೇಜಿಗೂ ಹೋಗುತ್ತಿದ್ದರು. ಆದರೆ, ಇತ್ತೀಚೆಗೆ ಅವರು ಕೆಲಸ ಕಳೆದುಕೊಂಡಿದ್ದಾರೆ. ಹೀಗಾಗಿ ಕಾಲೇಜ್​ನ ಫೀಸ್​ ತುಂಬಲು ಅವರ ಬಳಿ ಸಾಧ್ಯವಾಗಿಯೇ ಇಲ್ಲ.

ಕಾಲೇಜ್​ ಸೇರಬೇಕು ಎಂದರೆ 83,000 ಸಾವಿರ ರೂಪಾಯಿ ಹಣ ಪಾವತಿಸಬೇಕಿತ್ತು. ಇದಕ್ಕೆ ಸಹಾಯ ಮಾಡುವಂತೆ ಟ್ವಿಟರ್​ನಲ್ಲಿ ಕಾಜಲ್​ ಬಳಿ ಸುಮಾ ಮನವಿ ಮಾಡಿದ್ದಾರೆ. ಇದಕ್ಕೆ ಕಾಜಲ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಟ್ವೀಟ್​ ಮಾಡಿದ ಕೆಲವೇ ಗಂಟೆಗಳಲ್ಲಿ ಕಾಜಲ್​ ವಕ್ತಾರರು ಸುಮಾ ಅವರನ್ನು ಕಾಂಟ್ಯಾಕ್ಟ್ ಮಾಡಿದ್ದಾರೆ. ಅವರ ಬ್ಯಾಂಕ್​ ಖಾತೆ ಮಾಹಿತಿ ಪಡೆದು ಒಂದು ಲಕ್ಷ ರೂಪಾಯಿ ಹಣ ಪಾವತಿ ಮಾಡಿದ್ದಾರೆ.

ಈ ವಿಚಾರ ತಿಳಿದು ಹುಡುಗಿ ಕಡೆಯವರು ಸಖತ್​ ಖುಷಿ ಆಗಿದ್ದಾರೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲ, ಕಾಜಲ್​ ಮಾಡಿದ ಸಹಾಯಕ್ಕೆ ಎಲ್ಲರೂ ತಲೆ ಬಾಗಿದ್ದಾರೆ.

ಕಳೆದ ವರ್ಷ ಕಾಜಲ್​ ಅಗರ್​ವಾಲ್​ ಹಸಮಣೆ ಏರಿದ್ದರು. ಇದಾದ ನಂತರ ಅವರು ಹನಿಮೂನ್​ಗೂ ತೆರಳಿದ್ದರು. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: 30 ವರ್ಷಗಳಿಂದಲೂ ಶ್ವಾಸನಾಳದ ಅಸ್ತಮಾದಿಂದ ಬಳಲುತ್ತಿದ್ದಾರೆ ಖ್ಯಾತ ನಟಿ ಕಾಜಲ್​ ಅಗರ್​ವಾಲ್

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ