AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಕಲ್ಕಿ 2898 ಎಡಿ’ ಕಮಾಲ್; ಚಿತ್ರ ಗಳಿಸಿದ್ದೆಷ್ಟು?

Kalki 2898 AD Box Office Collection Day 2: ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ಬಿಡುಗಡೆ ಕಂಡಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಇದರಿಂದ ನಿರ್ಮಾಪಕರ ಮೊಗದಲ್ಲಿ ನಗು ಮೂಡಿದೆ. ಶನಿವಾರ ಹಾಗೂ ಭಾನುವಾರ ಸಿನಿಮಾ ಮತ್ತಷ್ಟು ಗಳಿಕೆ ಮಾಡೋ ಸಾಧ್ಯತೆ ಇದೆ.

ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಕಲ್ಕಿ 2898 ಎಡಿ’ ಕಮಾಲ್; ಚಿತ್ರ ಗಳಿಸಿದ್ದೆಷ್ಟು?
ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಕಲ್ಕಿ 2898 ಎಡಿ’ ಕಮಾಲ್; ಚಿತ್ರ ಗಳಿಸಿದ್ದೆಷ್ಟು?
ರಾಜೇಶ್ ದುಗ್ಗುಮನೆ
|

Updated on: Jun 29, 2024 | 6:30 AM

Share

ಪ್ರಭಾಸ್ ನಟನೆಯ, ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಚಿತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಸಿನಿಮಾದಲ್ಲಿ ಬಳಕೆಯಾದ ಗ್ರಾಫಿಕ್ಸ್​ಗೆ ಸಾಕಷ್ಟು ಮೆಚ್ಚುಗೆ ಸಿಕ್ಕಿದೆ. ಹೊಸ ಲೋಕವನ್ನೇ ಸೃಷ್ಟಿಸಿದ ನಿರ್ದೇಶಕ ನಾಗ್ ಅಶ್ವಿನ್ ಅವರನ್ನು ಎಲ್ಲರೂ ಹೊಗಳುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಎರಡನೇ ದಿನವೂ (ಜೂನ್ 28) ಭರ್ಜರಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ.

ಮೊದಲ ದಿನ ‘ಕಲ್ಕಿ 2898 ಎಡಿ’ ಚಿತ್ರ ವಿಶ್ವಾದ್ಯಂತ 191 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಈ ಚಿತ್ರ ಭಾರತದಲ್ಲಿ 54 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ವಿಶ್ವ ಬಾಕ್ಸ್ ಆಫೀಸ್ ಲೆಕ್ಕಾಚಾರವೂ ಸೇರಿದರೆ ಸಿನಿಮಾದ ಒಟ್ಟಾರೆ ಗಳಿಕೆ 300 ಕೋಟಿ ರೂಪಾಯಿ ಸಮೀಪಿಸಿದೆ.

ವಿಷ್ಣುವಿನ ಈಗಿನ ಅವತಾರ ಕಲ್ಕಿ ಎಂಬರ್ಥದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಸಾಗುತ್ತದೆ. ದುಷ್ಟ ಶಕ್ತಿಗಳಿಂದ ಆತ ನಮ್ಮನ್ನು ಕಾಪಾಡುತ್ತಾನೆ ಎಂಬ ಕಲ್ಪನೆಯಲ್ಲಿ ಸಿನಿಮಾ ಮೂಡಿ ಬಂದಿದೆ. ಮಹಭಾರತದಿಂದ ಶುರುವಾಗೋ ಕಥೆ 2898 ಎಡಿವರೆಗೆ ಸಾಗುತ್ತದೆ. ಕಾಶಿ ಹೆಸರಿನ ಮಾಯಾ ಲೋಕ ಸಾಕಷ್ಟು ಗಮನ ಸೆಳೆದಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಮುರಿದ ದಾಖಲೆಗಳೆಷ್ಟು? ನಿರ್ಮಾಪಕರು ಕೊಟ್ಟರು ಉತ್ತರ

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜೊತೆ ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಭ್ ಬಚ್ಚನ್ ಮೊದಲಾದವರು ನಟಿಸಿದ್ದಾರೆ. ಇದರ ಜೊತೆಗೆ ಅನೇಕ ಪ್ರಮುಖ ಕಲಾವಿದರು ಅತಿಥಿ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಶನಿವಾರ (ಜೂನ್ 29) ಹಾಗೂ ನಾಳೆ (ಜೂನ್ 30) ಚಿತ್ರದ ಗಳಿಕೆ ಹೆಚ್ಚೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!