ಬಂಗಾರದ ಬೆಳೆ ತೆಗೆದ ‘ಕಲ್ಕಿ’; ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ಪ್ರಭಾಸ್ ಸಿನಿಮಾ

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಪ್ರಭಾಸ್, ಕಮಲ್ ಹಾಸನ್, ಅಮಿತಾಭ್ ಬಚ್ಚನ್  ಮೊದಲಾದವರು ಅಭಿನಯಿಸಿದ್ದಾರೆ. ಈ ಸಿನಿಮಾ 5 ಭಾಷೆಗಳಲ್ಲಿ ಬಿಡುಗಡೆ ಕಂಡಿದೆ. ಎಲ್ಲಾ ಭಾಷೆಗಳಿಂದ ಚಿತ್ರ ಭಾರತದಲ್ಲಿ 300 ಕೋಟಿ ಬಾಚಿದೆ. ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.  

ಬಂಗಾರದ ಬೆಳೆ ತೆಗೆದ ‘ಕಲ್ಕಿ’; ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ಪ್ರಭಾಸ್ ಸಿನಿಮಾ
ಕಲ್ಕಿ 2898 ಎಡಿ
Follow us
|

Updated on:Jul 01, 2024 | 6:56 AM

‘ಕಲ್ಕಿ 2898 ಎಡಿ’  ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಜೂನ್ 27ರಂದು ಬಿಡುಗಡೆ ಆಗಿದೆ. ಸದ್ಯ ಸಿನಿಮಾ ರಿಲೀಸ್ ಆಗಿ ನಾಲ್ಕು ದಿನ ಕಳೆದಿದ್ದು ಭಾರತದ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಸುವತ್ತ ಹೆಜ್ಜೆ ಇಟ್ಟಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಸಿನಿಮಾದ ಕಲೆಕ್ಷನ್ ಭರ್ಜರಿ ಆಗುತ್ತಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹಾಕಿದ ಹಣ ಬಂದ ಖುಷಿಯಲ್ಲಿ ಚಿತ್ರತಂಡ ಇದೆ.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆ ಕಂಡಿದೆ. ಎಲ್ಲಾ ಭಾಷೆಗಳಿಂದ ಚಿತ್ರ ಭಾರತದಲ್ಲಿ 300 ಕೋಟಿ ಬಾಚಿದೆ. ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.

‘ಕಲ್ಕಿ 2898 ಎಡಿ’ ಚಿತ್ರ ಮೂರು ದಿನಕ್ಕೆ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 415 ಕೋಟಿ ರೂಪಾಯಿ ಬಾಚಿಕೊಂಡಿತ್ತು. ನಾಲ್ಕನೇ ದಿನದ ವಿಶ್ವ ಮಾರುಕಟ್ಟೆ ಲೆಕ್ಕಾಚಾರ ಇನ್ನಷ್ಟೇ ಹೊರಬೀಳಬೇಕಿದೆ. ಅದನ್ನೂ ಸೇರಿದರೆ ಸಿನಿಮಾದ ಗಳಿಕೆ ವಿಶ್ವಮಟ್ಟದಲ್ಲಿ 500 ಕೋಟಿ ರೂಪಾಯಿ ದಾಟಲಿದೆ.

ಇದನ್ನೂ ಓದಿ: ಒಟಿಟಿಯಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ನೋಡಬೇಕು ಎಂದುಕೊಂಡವರಿಗೆ ಬ್ಯಾಡ್ ನ್ಯೂಸ್

ಸದ್ಯ ಬಂದಿರೋದು ಮೊದಲನೆಯ ಭಾಗ ಮಾತ್ರ. ಎರಡನೇ ಭಾಗ ಕೂಡ ಬರಬೇಕಿದೆ. ಈ ಚಿತ್ರದ ಎರಡನೇ ಭಾಗದ ಶೂಟಿಂಗ್ ಶೇ. 60 ಪೂರ್ಣಗೊಂಡಿದೆ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರವನ್ನು ಹಿಂದಿ ಮಂದಿ ಕೂಡ ಸಖತ್ ಇಷ್ಟಪಟ್ಟಿದ್ದಾರೆ. ಅಲ್ಲಿಯೂ ಚಿತ್ರ ಭರ್ಜರಿ ಗಳಿಕೆ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:53 am, Mon, 1 July 24

ತಾಜಾ ಸುದ್ದಿ
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ