AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರದ ಬೆಳೆ ತೆಗೆದ ‘ಕಲ್ಕಿ’; ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ಪ್ರಭಾಸ್ ಸಿನಿಮಾ

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಪ್ರಭಾಸ್, ಕಮಲ್ ಹಾಸನ್, ಅಮಿತಾಭ್ ಬಚ್ಚನ್  ಮೊದಲಾದವರು ಅಭಿನಯಿಸಿದ್ದಾರೆ. ಈ ಸಿನಿಮಾ 5 ಭಾಷೆಗಳಲ್ಲಿ ಬಿಡುಗಡೆ ಕಂಡಿದೆ. ಎಲ್ಲಾ ಭಾಷೆಗಳಿಂದ ಚಿತ್ರ ಭಾರತದಲ್ಲಿ 300 ಕೋಟಿ ಬಾಚಿದೆ. ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.  

ಬಂಗಾರದ ಬೆಳೆ ತೆಗೆದ ‘ಕಲ್ಕಿ’; ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ಪ್ರಭಾಸ್ ಸಿನಿಮಾ
ಕಲ್ಕಿ 2898 ಎಡಿ
ರಾಜೇಶ್ ದುಗ್ಗುಮನೆ
|

Updated on:Jul 01, 2024 | 6:56 AM

Share

‘ಕಲ್ಕಿ 2898 ಎಡಿ’  ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಜೂನ್ 27ರಂದು ಬಿಡುಗಡೆ ಆಗಿದೆ. ಸದ್ಯ ಸಿನಿಮಾ ರಿಲೀಸ್ ಆಗಿ ನಾಲ್ಕು ದಿನ ಕಳೆದಿದ್ದು ಭಾರತದ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಸುವತ್ತ ಹೆಜ್ಜೆ ಇಟ್ಟಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಸಿನಿಮಾದ ಕಲೆಕ್ಷನ್ ಭರ್ಜರಿ ಆಗುತ್ತಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹಾಕಿದ ಹಣ ಬಂದ ಖುಷಿಯಲ್ಲಿ ಚಿತ್ರತಂಡ ಇದೆ.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆ ಕಂಡಿದೆ. ಎಲ್ಲಾ ಭಾಷೆಗಳಿಂದ ಚಿತ್ರ ಭಾರತದಲ್ಲಿ 300 ಕೋಟಿ ಬಾಚಿದೆ. ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.

‘ಕಲ್ಕಿ 2898 ಎಡಿ’ ಚಿತ್ರ ಮೂರು ದಿನಕ್ಕೆ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 415 ಕೋಟಿ ರೂಪಾಯಿ ಬಾಚಿಕೊಂಡಿತ್ತು. ನಾಲ್ಕನೇ ದಿನದ ವಿಶ್ವ ಮಾರುಕಟ್ಟೆ ಲೆಕ್ಕಾಚಾರ ಇನ್ನಷ್ಟೇ ಹೊರಬೀಳಬೇಕಿದೆ. ಅದನ್ನೂ ಸೇರಿದರೆ ಸಿನಿಮಾದ ಗಳಿಕೆ ವಿಶ್ವಮಟ್ಟದಲ್ಲಿ 500 ಕೋಟಿ ರೂಪಾಯಿ ದಾಟಲಿದೆ.

ಇದನ್ನೂ ಓದಿ: ಒಟಿಟಿಯಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ನೋಡಬೇಕು ಎಂದುಕೊಂಡವರಿಗೆ ಬ್ಯಾಡ್ ನ್ಯೂಸ್

ಸದ್ಯ ಬಂದಿರೋದು ಮೊದಲನೆಯ ಭಾಗ ಮಾತ್ರ. ಎರಡನೇ ಭಾಗ ಕೂಡ ಬರಬೇಕಿದೆ. ಈ ಚಿತ್ರದ ಎರಡನೇ ಭಾಗದ ಶೂಟಿಂಗ್ ಶೇ. 60 ಪೂರ್ಣಗೊಂಡಿದೆ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರವನ್ನು ಹಿಂದಿ ಮಂದಿ ಕೂಡ ಸಖತ್ ಇಷ್ಟಪಟ್ಟಿದ್ದಾರೆ. ಅಲ್ಲಿಯೂ ಚಿತ್ರ ಭರ್ಜರಿ ಗಳಿಕೆ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:53 am, Mon, 1 July 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ