AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರದ ಬೆಳೆ ತೆಗೆದ ‘ಕಲ್ಕಿ’; ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ಪ್ರಭಾಸ್ ಸಿನಿಮಾ

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಪ್ರಭಾಸ್, ಕಮಲ್ ಹಾಸನ್, ಅಮಿತಾಭ್ ಬಚ್ಚನ್  ಮೊದಲಾದವರು ಅಭಿನಯಿಸಿದ್ದಾರೆ. ಈ ಸಿನಿಮಾ 5 ಭಾಷೆಗಳಲ್ಲಿ ಬಿಡುಗಡೆ ಕಂಡಿದೆ. ಎಲ್ಲಾ ಭಾಷೆಗಳಿಂದ ಚಿತ್ರ ಭಾರತದಲ್ಲಿ 300 ಕೋಟಿ ಬಾಚಿದೆ. ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.  

ಬಂಗಾರದ ಬೆಳೆ ತೆಗೆದ ‘ಕಲ್ಕಿ’; ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ಪ್ರಭಾಸ್ ಸಿನಿಮಾ
ಕಲ್ಕಿ 2898 ಎಡಿ
ರಾಜೇಶ್ ದುಗ್ಗುಮನೆ
|

Updated on:Jul 01, 2024 | 6:56 AM

Share

‘ಕಲ್ಕಿ 2898 ಎಡಿ’  ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಜೂನ್ 27ರಂದು ಬಿಡುಗಡೆ ಆಗಿದೆ. ಸದ್ಯ ಸಿನಿಮಾ ರಿಲೀಸ್ ಆಗಿ ನಾಲ್ಕು ದಿನ ಕಳೆದಿದ್ದು ಭಾರತದ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಸುವತ್ತ ಹೆಜ್ಜೆ ಇಟ್ಟಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಸಿನಿಮಾದ ಕಲೆಕ್ಷನ್ ಭರ್ಜರಿ ಆಗುತ್ತಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹಾಕಿದ ಹಣ ಬಂದ ಖುಷಿಯಲ್ಲಿ ಚಿತ್ರತಂಡ ಇದೆ.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆ ಕಂಡಿದೆ. ಎಲ್ಲಾ ಭಾಷೆಗಳಿಂದ ಚಿತ್ರ ಭಾರತದಲ್ಲಿ 300 ಕೋಟಿ ಬಾಚಿದೆ. ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.

‘ಕಲ್ಕಿ 2898 ಎಡಿ’ ಚಿತ್ರ ಮೂರು ದಿನಕ್ಕೆ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 415 ಕೋಟಿ ರೂಪಾಯಿ ಬಾಚಿಕೊಂಡಿತ್ತು. ನಾಲ್ಕನೇ ದಿನದ ವಿಶ್ವ ಮಾರುಕಟ್ಟೆ ಲೆಕ್ಕಾಚಾರ ಇನ್ನಷ್ಟೇ ಹೊರಬೀಳಬೇಕಿದೆ. ಅದನ್ನೂ ಸೇರಿದರೆ ಸಿನಿಮಾದ ಗಳಿಕೆ ವಿಶ್ವಮಟ್ಟದಲ್ಲಿ 500 ಕೋಟಿ ರೂಪಾಯಿ ದಾಟಲಿದೆ.

ಇದನ್ನೂ ಓದಿ: ಒಟಿಟಿಯಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ನೋಡಬೇಕು ಎಂದುಕೊಂಡವರಿಗೆ ಬ್ಯಾಡ್ ನ್ಯೂಸ್

ಸದ್ಯ ಬಂದಿರೋದು ಮೊದಲನೆಯ ಭಾಗ ಮಾತ್ರ. ಎರಡನೇ ಭಾಗ ಕೂಡ ಬರಬೇಕಿದೆ. ಈ ಚಿತ್ರದ ಎರಡನೇ ಭಾಗದ ಶೂಟಿಂಗ್ ಶೇ. 60 ಪೂರ್ಣಗೊಂಡಿದೆ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರವನ್ನು ಹಿಂದಿ ಮಂದಿ ಕೂಡ ಸಖತ್ ಇಷ್ಟಪಟ್ಟಿದ್ದಾರೆ. ಅಲ್ಲಿಯೂ ಚಿತ್ರ ಭರ್ಜರಿ ಗಳಿಕೆ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:53 am, Mon, 1 July 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ