AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲತೆ, ರಕ್ತಪಾತ ಇಲ್ಲದೇ ಸಾವಿರ ಕೋಟಿ ರೂ. ಗಳಿಕೆ: ‘ಅನಿಮಲ್​’ ಚಿತ್ರಕ್ಕೆ ತಿವಿದ ‘ಕಲ್ಕಿ 2898 ಎಡಿ’ ನಿರ್ದೇಶಕ

‘ಅನಿಮಲ್​’ ಸಿನಿಮಾದಲ್ಲಿ ಅಶ್ಲೀಲತೆ, ರಕ್ತಪಾತ ಮುಂತಾದ ಅಂಶಗಳು ಇವೆ ಎಂದು ವಿಮರ್ಶಕರು ಟೀಕಿಸಿದ್ದರು. ಆದರೆ ಆ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 900 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತ್ತು. ಈಗ ‘ಕಲ್ಕಿ 2898 ಎಡಿ’ ಸಿನಿಮಾ ಯಾವುದೇ ಆಕ್ಷೇಪಾರ್ಹ ದೃಶ್ಯಗಳಿಲ್ಲದೇ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂಬುದು ವಿಶೇಷ.

ಅಶ್ಲೀಲತೆ, ರಕ್ತಪಾತ ಇಲ್ಲದೇ ಸಾವಿರ ಕೋಟಿ ರೂ. ಗಳಿಕೆ: ‘ಅನಿಮಲ್​’ ಚಿತ್ರಕ್ಕೆ ತಿವಿದ ‘ಕಲ್ಕಿ 2898 ಎಡಿ’ ನಿರ್ದೇಶಕ
ನಾಗ್ ಅಶ್ವಿನ್​, ಸಂದೀಪ್​ ರೆಡ್ಡಿ ವಂಗ
ಮದನ್​ ಕುಮಾರ್​
|

Updated on: Jul 15, 2024 | 4:38 PM

Share

ಪ್ರಭಾಸ್​ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾಗೆ ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್​ ಆಗಿದೆ. ಜಾಗತಿಕ ಮಟ್ಟದಲ್ಲಿ ಅಬ್ಬರಿಸಿದ ಈ ಸಿನಿಮಾ 1000 ಕೋಟಿ ರೂಪಾಯಿಗೂ ಅಧಿಕ ಕಮಾಯಿ ಮಾಡಿದೆ. ಈ ಮಾಹಿತಿಯನ್ನು ಸ್ವತಃ ನಿರ್ಮಾಪಕರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ನಿರ್ದೇಶಕ ನಾಗ್​ ಅಶ್ವಿನ್​ ಅವರು ಹಂಚಿಕೊಂಡ ಒಂದು ಪೋಸ್ಟ್​ ವೈರಲ್​ ಆಗುತ್ತಿದೆ. ‘ಅನಿಮಲ್​’ ಚಿತ್ರಕ್ಕೆ ನಾಗ್​ ಅಶ್ವಿನ್​ ತಿವಿದಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ಅಷ್ಟಕ್ಕೂ ನಾಗ್​ ಅಶ್ವಿನ್​ ಪೋಸ್ಟ್​ನಲ್ಲಿ ಇರುವುದು ಏನು ಎಂಬ ಬಗ್ಗೆ ಇಲ್ಲಿದೆ ವಿವರ..

ನಾಗ್​ ಅಶ್ವಿನ್​ ಅವರ 5 ವರ್ಷಗಳ ಪರಿಶ್ರಮದ ಫಲವಾಗಿ ‘ಕಲ್ಕಿ 2898 ಎಡಿ’ ಸೂಪರ್​ ಹಿಟ್​ ಆಗಿದೆ. ‘ವೈಜಯಂತಿ ಮೂವೀಸ್​’ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ. ಪ್ರಭಾಸ್​, ದೀಪಿಕಾ ಪಡುಕೋಣೆ, ಕಮಲ್​ ಹಾಸನ್​, ಅಮಿತಾಭ್​ ಬಚ್ಚನ್​ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಗೆಲುವಿನ ಬಳಿಕ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ನಾಗ್​ ಅಶ್ವಿನ್​ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದರು.

‘ಈ ಮೈಲಿಗಲ್ಲು ಮತ್ತು ಈ ಸಂಖ್ಯೆಯು ನಮ್ಮಂತಹ ತಂಡಕ್ಕೆ ನಿಜಕ್ಕೂ ದೊಡ್ಡದು. ಯಾವುದೇ ಅಶ್ಲೀಲತೆ, ರಕ್ತಪಾತ ಹಾಗೂ ಪ್ರಚೋದನಕಾರಿಯಾದ ದೃಶ್ಯಗಳು ಇಲ್ಲದೆಯೇ ಈ ಸಾಧನೆ ಮಾಡಿದ್ದೇವೆ ಎಂಬುದು ಗಮನಾರ್ಹ. ನಮ್ಮ ಬೆನ್ನ ಹಿಂದೆ ನಿಂತ ಪ್ರೇಕ್ಷಕರಿಗೆ ಮತ್ತು ಕಲಾವಿದರಿಗೆ ಧನ್ಯವಾದಗಳು’ ಎಂದು ನಾಗ್​ ಅಶ್ವಿನ್​ ಅವರು ಪೋಸ್ಟ್​ ಮಾಡಿದ್ದರು. ಆದರೆ ನಂತರ ಅವರು ಈ ಪೋಸ್ಟ್​ ಡಿಲೀಟ್​ ಮಾಡಿದರು.

ಇದನ್ನೂ ಓದಿ: ನೀವಿಲ್ಲದೇ ನಾನು ಜೀರೋ: ‘ಕಲ್ಕಿ 2898 ಎಡಿ’ ಯಶಸ್ಸಿನ ಹಿಂದಿರುವ ವ್ಯಕ್ತಿಗಳಿಗೆ ಪ್ರಭಾಸ್​ ಧನ್ಯವಾದ

ತೆಲುಗಿನ ಖ್ಯಾತ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ ಅವರು ಬಾಲಿವುಡ್​ನಲ್ಲಿ ‘ಅನಿಮಲ್​’ ಸಿನಿಮಾ ಮಾಡಿ ದೊಡ್ಡ ಯಶಸ್ಸು ಪಡೆದರು. ಆ ಚಿತ್ರದ ಕಲೆಕ್ಷನ್​ ಕೂಡ 1000 ಕೋಟಿ ರೂಪಾಯಿ ಸನಿಹದಲ್ಲಿ ಇತ್ತು. ಆದರೆ ಆ ಸಿನಿಮಾದಲ್ಲಿ ಅಶ್ಲೀಲತೆ, ಅತಿಯಾದ ರಕ್ತಪಾತ, ಮಹಿಳೆಯರ ಅವಹೇಳನ ಹಾಗೂ ಪ್ರಚೋದನಕಾರಿ ದೃಶ್ಯಗಳು ಇದ್ದವು ಎಂಬ ಟೀಕೆ ವ್ಯಕ್ತವಾಗಿತ್ತು. ‘ಅನಿಮಲ್​’ ಸಿನಿಮಾವನ್ನು ಉದ್ದೇಶಿಸಿಯೇ ನಾಗ್ ಅಶ್ವಿನ್​ ಅವರು ಈ ಪೋಸ್ಟ್​ ಮಾಡಿದ್ದರು ಎಂಬುದು ನೆಟ್ಟಿಗರ ಅಭಿಪ್ರಾಯ. ಸದ್ಯಕ್ಕೆ ಅವರ ಪೋಸ್ಟ್​ ಡಿಲೀಟ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ