AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರವೂ ಸುಮಾರು 100 ಕೋಟಿ ರೂ. ಬಾಚಿದ ‘ಕಲ್ಕಿ 2898 ಎಡಿ’; ಒಟ್ಟೂ ಗಳಿಕೆ ಎಷ್ಟು?

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಚಿತ್ರ ಹಿಟ್ ಆಗಿದೆ. ಈ ಚಿತ್ರವನ್ನು ಜನರು ಇಷ್ಟಪಟ್ಟಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ದೊಡ್ಡ ಪಾತ್ರವರ್ಗ ಇದೆ. ಈ ಸಿನಿಮಾ ವಿಶ್ವಾದ್ಯಂತ ಭರ್ಜರಿ ಗಳಿಕೆ ಮಾಡಿದೆ.

ಸೋಮವಾರವೂ ಸುಮಾರು 100 ಕೋಟಿ ರೂ. ಬಾಚಿದ ‘ಕಲ್ಕಿ 2898 ಎಡಿ’; ಒಟ್ಟೂ ಗಳಿಕೆ ಎಷ್ಟು?
ಸೋಮವಾರವೂ ಸುಮಾರು 100 ಕೋಟಿ ರೂ. ಬಾಚಿದ ‘ಕಲ್ಕಿ 2898 ಎಡಿ’; ಒಟ್ಟೂ ಗಳಿಕೆ ಎಷ್ಟು?
ರಾಜೇಶ್ ದುಗ್ಗುಮನೆ
|

Updated on: Jul 02, 2024 | 7:43 AM

Share

‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ವಾರಾಂತ್ಯದಲ್ಲಿ ಈ ಚಿತ್ರ ಒಳ್ಳೆಯ ಗಳಿಕೆ ಮಾಡಿತ್ತು. ಮೊದಲ ಸೋಮವಾರ (ಜುಲೈ 1) ಈ ಚಿತ್ರದ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಕಾಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಈ ಚಿತ್ರ ಸೋಮವಾರ ವಿಶ್ವಾದ್ಯಂತ 84 ಕೋಟಿ ರೂಪಾಯಿ ಬಾಚಿಕೊಂಡಿದೆ. ವಾರದ ದಿನ ಇಷ್ಟೊಂದು ಗಳಿಕೆ ಮಾಡಿದ್ದು ಅನೇಕರಿಗೆ ಅಚ್ಚರಿ ಎನಿಸಿದೆ. ಸಿನಿಮಾದ ಒಟ್ಟೂ ಗಳಿಕೆ 635 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಚಿತ್ರ ಅನಾಯಾಸವಾಗಿ 1000 ಕೋಟಿ ರೂಪಾಯಿ ತಲುಪಲಿದೆ.

ಸೋಮವಾರ ‘ಕಲ್ಕಿ 2898 ಎಡಿ’ ಸಿನಿಮಾ ಭಾರತದಲ್ಲಿ 34.6 ಕೋಟಿ ರೂಪಾಯಿ ಬಾಚಿಕೊಂಡಿದೆ. ವಿಶ್ವ ಮಟ್ಟದಲ್ಲಿ 45-50 ಕೋಟಿ ರೂಪಾಯಿ ಬಾಚಿದೆ. ಈ ಮೂಲಕ ಒಟ್ಟೂ ಗಳಿಕೆ 635 ಕೋಟಿ ರೂಪಾಯಿ ಆಗಿದೆ. ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ಬಿಡುಗಡೆ ಕಂಡಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ವಿಚಾರದಲ್ಲಿ ಕನ್ನಡಿಗರಿಗೆ ಮೋಸ; KVN ಸಂಸ್ಥೆಗೆ ಛೀಮಾರಿ

‘ಕಲ್ಕಿ 2898 ಎಡಿ’ ಚಿತ್ರ ಮೊದಲ ದಿನವೇ ವಿಶ್ವಾದ್ಯಂತ 191 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಮೂಲಕ ಮೊದಲ ದಿನದ ಕಲೆಕ್ಷನ್ ವಿಚಾರದಲ್ಲಿ ‘ಕೆಜಿಎಫ್ 2’, ‘ಸಲಾರ್’, ‘ಲಿಯೋ’ ಮೊದಲಾದ ಚಿತ್ರಗಳನ್ನು ಹಿಂದಿಕ್ಕಿದೆ. ಈ ಮೂಲಕ ದಾಖಲೆ ಬರೆದಿದೆ.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಆರ್​ಜಿವಿ, ದುಲ್ಕರ್ ಸಲ್ಮಾನ್ ಸೇರಿ ಅನೇಕರು ಅತಿಥಿ ಪಾತ್ರ ಮಾಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?