1100 ಕೋಟಿ ರೂ. ಕ್ಲಬ್ ಸೇರಿದ ‘ಕಲ್ಕಿ 2898 ಎಡಿ’; ಆದರೂ ನಿರ್ಮಾಪಕರಿಗಾದ ಲಾಭ ಕಡಿಮೆ?

‘ಪಠಾಣ್​’, ‘ಕೆಜಿಎಫ್​ 2’ ಮುಂತಾದ ಸಿನಿಮಾಗಳು ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡಿವೆ. ಇತ್ತೀಚೆಗೆ ಪ್ರಭಾಸ್​ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಕೂಡ ಸಾವಿರ ಕೋಟಿ ರೂಪಾಯಿ ಕ್ಲಬ್​ ಸೇರಿದೆ. ಈ ಬಗ್ಗೆ ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

1100 ಕೋಟಿ ರೂ. ಕ್ಲಬ್ ಸೇರಿದ ‘ಕಲ್ಕಿ 2898 ಎಡಿ’; ಆದರೂ ನಿರ್ಮಾಪಕರಿಗಾದ ಲಾಭ ಕಡಿಮೆ?
ಪ್ರಭಾಸ್-ದೀಪಿಕಾ
Follow us
|

Updated on: Jul 26, 2024 | 12:13 PM

‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಈ ಚಿತ್ರದಿಂದ ಅಮಿತಾಭ್ ಬಚ್ಚನ್, ಪ್ರಭಾಸ್ ದೊಡ್ಡ ಮಟ್ಟದ ಯಶಸ್ಸು ಪಡೆದಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಈ ಚಿತ್ರ 623 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಗುರುವಾರ (ಜುಲೈ 25) ಈ ಚಿತ್ರ ಒಂದೂವರೆ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಸಾವಿರ ಕೋಟಿ ಗಳಿಕೆ ಮಾಡಿದ ಸಿನಿಮಾಗಳ ಪೈಕಿ ಭಾರತದಲ್ಲಿ ಇರೋದು ಕೇವಲ ಆರು ಸಿನಿಮಾಗಳು. ಈಗ ಏಳನೇ ಚಿತ್ರವಾಗಿ ‘ಕಲ್ಕಿ 2898 ಎಡಿ’ ಸಿನಿಮಾ ಇದೆ. ಈ ಮೊದಲು ‘ಕೆಜಿಎಫ್ 2’, ‘ಜವಾನ್’, ‘ಪಠಾಣ್’, ‘ಬಾಹುಬಲಿ 2’ ಚಿತ್ರಗಳು ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ್ದವು. ಈ ಮೂಲಕ ಪ್ರಭಾಸ್ ವೃತ್ತಿಜೀವನಕ್ಕೆ ಸಿನಿಮಾದಿಂದ ಮೈಲೇಜ್ ಸಿಕ್ಕಿದೆ.

‘ಕಲ್ಕಿ 2898 ಎಡಿ’ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿಗೂ ಅಧಿಕವಾಗಿದೆ. ಇದರ ಜೊತೆಗೆ, ಬಂದ ಲಾಭದಲ್ಲಿ ಒಂದಷ್ಟು ಭಾಗ ತೆರಿಗೆ ರೂಪದಲ್ಲಿ ಕಟ್ಟಬೇಕಾಗುತ್ತದೆ. ಒಂದಷ್ಟು ಹಣ ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್​ನವರಿಗೆ ಹೋಗುತ್ತದೆ. ಈ ಎಲ್ಲಾ ಕಾರಣದಿಂದ ನಿರ್ಮಾಪಕ ನಾಗ್ ಅಶ್ವಿನ್ ಅವರಿಗೆ ದೊಡ್ಡ ಮಟ್ಟದಲ್ಲಿ ಲಾಭ ಆಗಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಸಿನಿಮಾದ ಕಲೆಕ್ಷನ್​ ಸುಳ್ಳು ಎಂದವರ ಮೇಲೆ ಕೇಸ್​ ಹಾಕಿದ ನಿರ್ಮಾಪಕರು

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್​, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಎರಡನೇ ಪಾರ್ಟ್ ಸಿದ್ಧಗೊಳ್ಳಲಿದೆ. ತಂಡ ಹೇಳಿಕೊಳ್ಳುವ ಪ್ರಕಾರ ಈಗಾಗಲೇ ಕೆಲವು ಭಾಗಗಳ ಶೂಟಿಂಗ್ ಪೂರ್ಣಗೊಂಡಿದೆಯಂತೆ. ಶೀಘ್ರವೇ ಮತ್ತೊಂದು ಹಂತದ ಶೂಟಿಂಗ್​ನ ತಂಡ ಪ್ರಾರಂಭಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು