AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1100 ಕೋಟಿ ರೂ. ಕ್ಲಬ್ ಸೇರಿದ ‘ಕಲ್ಕಿ 2898 ಎಡಿ’; ಆದರೂ ನಿರ್ಮಾಪಕರಿಗಾದ ಲಾಭ ಕಡಿಮೆ?

‘ಪಠಾಣ್​’, ‘ಕೆಜಿಎಫ್​ 2’ ಮುಂತಾದ ಸಿನಿಮಾಗಳು ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡಿವೆ. ಇತ್ತೀಚೆಗೆ ಪ್ರಭಾಸ್​ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಕೂಡ ಸಾವಿರ ಕೋಟಿ ರೂಪಾಯಿ ಕ್ಲಬ್​ ಸೇರಿದೆ. ಈ ಬಗ್ಗೆ ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

1100 ಕೋಟಿ ರೂ. ಕ್ಲಬ್ ಸೇರಿದ ‘ಕಲ್ಕಿ 2898 ಎಡಿ’; ಆದರೂ ನಿರ್ಮಾಪಕರಿಗಾದ ಲಾಭ ಕಡಿಮೆ?
ಪ್ರಭಾಸ್-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Jul 26, 2024 | 12:13 PM

Share

‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಈ ಚಿತ್ರದಿಂದ ಅಮಿತಾಭ್ ಬಚ್ಚನ್, ಪ್ರಭಾಸ್ ದೊಡ್ಡ ಮಟ್ಟದ ಯಶಸ್ಸು ಪಡೆದಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಈ ಚಿತ್ರ 623 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಗುರುವಾರ (ಜುಲೈ 25) ಈ ಚಿತ್ರ ಒಂದೂವರೆ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಸಾವಿರ ಕೋಟಿ ಗಳಿಕೆ ಮಾಡಿದ ಸಿನಿಮಾಗಳ ಪೈಕಿ ಭಾರತದಲ್ಲಿ ಇರೋದು ಕೇವಲ ಆರು ಸಿನಿಮಾಗಳು. ಈಗ ಏಳನೇ ಚಿತ್ರವಾಗಿ ‘ಕಲ್ಕಿ 2898 ಎಡಿ’ ಸಿನಿಮಾ ಇದೆ. ಈ ಮೊದಲು ‘ಕೆಜಿಎಫ್ 2’, ‘ಜವಾನ್’, ‘ಪಠಾಣ್’, ‘ಬಾಹುಬಲಿ 2’ ಚಿತ್ರಗಳು ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ್ದವು. ಈ ಮೂಲಕ ಪ್ರಭಾಸ್ ವೃತ್ತಿಜೀವನಕ್ಕೆ ಸಿನಿಮಾದಿಂದ ಮೈಲೇಜ್ ಸಿಕ್ಕಿದೆ.

‘ಕಲ್ಕಿ 2898 ಎಡಿ’ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿಗೂ ಅಧಿಕವಾಗಿದೆ. ಇದರ ಜೊತೆಗೆ, ಬಂದ ಲಾಭದಲ್ಲಿ ಒಂದಷ್ಟು ಭಾಗ ತೆರಿಗೆ ರೂಪದಲ್ಲಿ ಕಟ್ಟಬೇಕಾಗುತ್ತದೆ. ಒಂದಷ್ಟು ಹಣ ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್​ನವರಿಗೆ ಹೋಗುತ್ತದೆ. ಈ ಎಲ್ಲಾ ಕಾರಣದಿಂದ ನಿರ್ಮಾಪಕ ನಾಗ್ ಅಶ್ವಿನ್ ಅವರಿಗೆ ದೊಡ್ಡ ಮಟ್ಟದಲ್ಲಿ ಲಾಭ ಆಗಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಸಿನಿಮಾದ ಕಲೆಕ್ಷನ್​ ಸುಳ್ಳು ಎಂದವರ ಮೇಲೆ ಕೇಸ್​ ಹಾಕಿದ ನಿರ್ಮಾಪಕರು

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್​, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಎರಡನೇ ಪಾರ್ಟ್ ಸಿದ್ಧಗೊಳ್ಳಲಿದೆ. ತಂಡ ಹೇಳಿಕೊಳ್ಳುವ ಪ್ರಕಾರ ಈಗಾಗಲೇ ಕೆಲವು ಭಾಗಗಳ ಶೂಟಿಂಗ್ ಪೂರ್ಣಗೊಂಡಿದೆಯಂತೆ. ಶೀಘ್ರವೇ ಮತ್ತೊಂದು ಹಂತದ ಶೂಟಿಂಗ್​ನ ತಂಡ ಪ್ರಾರಂಭಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ