AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1100 ಕೋಟಿ ರೂ. ಕ್ಲಬ್ ಸೇರಿದ ‘ಕಲ್ಕಿ 2898 ಎಡಿ’; ಆದರೂ ನಿರ್ಮಾಪಕರಿಗಾದ ಲಾಭ ಕಡಿಮೆ?

‘ಪಠಾಣ್​’, ‘ಕೆಜಿಎಫ್​ 2’ ಮುಂತಾದ ಸಿನಿಮಾಗಳು ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡಿವೆ. ಇತ್ತೀಚೆಗೆ ಪ್ರಭಾಸ್​ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಕೂಡ ಸಾವಿರ ಕೋಟಿ ರೂಪಾಯಿ ಕ್ಲಬ್​ ಸೇರಿದೆ. ಈ ಬಗ್ಗೆ ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

1100 ಕೋಟಿ ರೂ. ಕ್ಲಬ್ ಸೇರಿದ ‘ಕಲ್ಕಿ 2898 ಎಡಿ’; ಆದರೂ ನಿರ್ಮಾಪಕರಿಗಾದ ಲಾಭ ಕಡಿಮೆ?
ಪ್ರಭಾಸ್-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Jul 26, 2024 | 12:13 PM

Share

‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಈ ಚಿತ್ರದಿಂದ ಅಮಿತಾಭ್ ಬಚ್ಚನ್, ಪ್ರಭಾಸ್ ದೊಡ್ಡ ಮಟ್ಟದ ಯಶಸ್ಸು ಪಡೆದಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಈ ಚಿತ್ರ 623 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಗುರುವಾರ (ಜುಲೈ 25) ಈ ಚಿತ್ರ ಒಂದೂವರೆ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಸಾವಿರ ಕೋಟಿ ಗಳಿಕೆ ಮಾಡಿದ ಸಿನಿಮಾಗಳ ಪೈಕಿ ಭಾರತದಲ್ಲಿ ಇರೋದು ಕೇವಲ ಆರು ಸಿನಿಮಾಗಳು. ಈಗ ಏಳನೇ ಚಿತ್ರವಾಗಿ ‘ಕಲ್ಕಿ 2898 ಎಡಿ’ ಸಿನಿಮಾ ಇದೆ. ಈ ಮೊದಲು ‘ಕೆಜಿಎಫ್ 2’, ‘ಜವಾನ್’, ‘ಪಠಾಣ್’, ‘ಬಾಹುಬಲಿ 2’ ಚಿತ್ರಗಳು ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ್ದವು. ಈ ಮೂಲಕ ಪ್ರಭಾಸ್ ವೃತ್ತಿಜೀವನಕ್ಕೆ ಸಿನಿಮಾದಿಂದ ಮೈಲೇಜ್ ಸಿಕ್ಕಿದೆ.

‘ಕಲ್ಕಿ 2898 ಎಡಿ’ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿಗೂ ಅಧಿಕವಾಗಿದೆ. ಇದರ ಜೊತೆಗೆ, ಬಂದ ಲಾಭದಲ್ಲಿ ಒಂದಷ್ಟು ಭಾಗ ತೆರಿಗೆ ರೂಪದಲ್ಲಿ ಕಟ್ಟಬೇಕಾಗುತ್ತದೆ. ಒಂದಷ್ಟು ಹಣ ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್​ನವರಿಗೆ ಹೋಗುತ್ತದೆ. ಈ ಎಲ್ಲಾ ಕಾರಣದಿಂದ ನಿರ್ಮಾಪಕ ನಾಗ್ ಅಶ್ವಿನ್ ಅವರಿಗೆ ದೊಡ್ಡ ಮಟ್ಟದಲ್ಲಿ ಲಾಭ ಆಗಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಸಿನಿಮಾದ ಕಲೆಕ್ಷನ್​ ಸುಳ್ಳು ಎಂದವರ ಮೇಲೆ ಕೇಸ್​ ಹಾಕಿದ ನಿರ್ಮಾಪಕರು

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್​, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಎರಡನೇ ಪಾರ್ಟ್ ಸಿದ್ಧಗೊಳ್ಳಲಿದೆ. ತಂಡ ಹೇಳಿಕೊಳ್ಳುವ ಪ್ರಕಾರ ಈಗಾಗಲೇ ಕೆಲವು ಭಾಗಗಳ ಶೂಟಿಂಗ್ ಪೂರ್ಣಗೊಂಡಿದೆಯಂತೆ. ಶೀಘ್ರವೇ ಮತ್ತೊಂದು ಹಂತದ ಶೂಟಿಂಗ್​ನ ತಂಡ ಪ್ರಾರಂಭಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ