AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalki 2898 AD: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಈವೆಂಟ್; ಪ್ರಭಾಸ್ ಬರ್ತಾರಾ?

ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ನಿರ್ಮಾಣ ಆಗಿದೆ. ಕರ್ನಾಟಕದಲ್ಲಿ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಂಚಿಕೆ ಮಾಡುತ್ತಿದೆ. ಭೈರವ ಹಾಗೂ ಬುಜ್ಜಿಯ ಅನಿಮೇಷನ್ ಝಲಕ್​ನ ತಂಡ ಇಂದು ರಿಲೀಸ್ ಮಾಡಲಿದೆ.

Kalki 2898 AD: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಈವೆಂಟ್; ಪ್ರಭಾಸ್ ಬರ್ತಾರಾ?
ಕಲ್ಕಿ
ರಾಜೇಶ್ ದುಗ್ಗುಮನೆ
|

Updated on: May 30, 2024 | 12:15 PM

Share

‘ಕಲ್ಕಿ 2898 ಎಡಿ’ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಈ ಚಿತ್ರಕ್ಕೆ ಈವೆಂಟ್​​ಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಪ್ರಭಾಸ್ (Prabhas), ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಇಂದು (ಮೇ 30) ತಂಡ ಬೆಂಗಳೂರಿನಲ್ಲಿ ಈವೆಂಟ್ ಆಯೋಜನೆ ಮಾಡಿದೆ. ಆದರೆ, ಈ ಕಾರ್ಯಕ್ರಮಕ್ಕೆ ಪ್ರಭಾಸ್ ಬರೋದು ಅನುಮಾನ ಎನ್ನಲಾಗುತ್ತಿದೆ. ಅದಕ್ಕೆ ಒಂದು ಕಾರಣವೂ ಇದೆ.

ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ನಿರ್ಮಾಣ ಆಗಿದೆ. ಕರ್ನಾಟಕದಲ್ಲಿ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಂಚಿಕೆ ಮಾಡುತ್ತಿದೆ. ಭೈರವ ಹಾಗೂ ಬುಜ್ಜಿಯ ಅನಿಮೇಷನ್ ಝಲಕ್​ನ ತಂಡ ಇಂದು ರಿಲೀಸ್ ಮಾಡಲಿದೆ. ಬೇರೆ ಬೇರೆ ನಗರಗಳಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ಇಂದು ರಿಲೀಸ್ ಆಗೋ ಸಾಧ್ಯತೆ ಇದೆ. ಹೀಗಾಗಿ, ಇಂದು ಬೆಂಗಳೂರಿಗೆ ಪ್ರಭಾಸ್ ಹಾಗೂ ಚಿತ್ರತಂಡ ಬರೋದು ಅನುಮಾನ ಎನ್ನಲಾಗಿದೆ.

ಬೆಂಗಳೂರಿನ ಓರಾಯನ್ ಮಾಲ್​ನಲ್ಲಿ ಈ ಚಿತ್ರದ ಈವೆಂಟ್ ನಡೆಯುತ್ತಿದೆ. ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಈ ಟೀಸರ್ ನೋಡಲು ಫ್ಯಾನ್ಸ್ ಕಾದಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಭಾಸ್ ಹಾಗೂ ಬುಜ್ಜಿ ವಾಹನ ಬೆಂಗಳೂರಿಗೆ ಬರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.

ಟಾಲಿವುಡ್​ ಭಾಷೆಯ ಸಿನಿಮಾಗಳಿಗೆ ಕರ್ನಾಟಕ ದೊಡ್ಡ ಮಾರುಕಟ್ಟೆ ಆಗಿದೆ. ಜನರು ಟಾಲಿವುಡ್ ಸ್ಟಾರ್ ನಟರ ಸಿನಿಮಾಗಳನ್ನು ಮುಗಿಬಿದ್ದು ವೀಕ್ಷಿಸುತ್ತಾರೆ. ಹೀಗಾಗಿ, ಈ ಭಾಗದಲ್ಲಿ ಸಿನಿಮಾ ಪ್ರಚಾರ ಮಾಡಲು ತೆಲುಗು ಸಿನಿಮಾಗಳು ಆದ್ಯತೆ ನೀಡುತ್ತವೆ. ಅದೇ ರೀತಿ ‘ಕಲ್ಕಿ 2898 ಎಡಿ’ ಸಿನಿಮಾ ತಂಡ ಮುಂದೊಂದು ದಿನ ಸಿನಿಮಾ ಮಾಡಲು ಬೆಂಗಳೂರಿಗೆ ಬರೋ ಸಾಧ್ಯತೆ ಇದೆ.

ಇದನ್ನೂ ಓದಿ: ಏಕಕಾಲಕ್ಕೆ ಮೂರು ಒಟಿಟಿಗಳಿಗೆ ಮಾರಾಟವಾದ ‘ಕಲ್ಕಿ 2898 ಎಡಿ’

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಸೇರಿ ದೊಡ್ಡ ಪಾತ್ರವರ್ಗ ಇದೆ. ಈ ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ವೈಜಯಂತಿ ಬ್ಯಾನರ್ ಈ ಚಿತ್ರಕ್ಕಾಗಿ 600 ಕೋಟಿ ರೂಪಾಯಿ ಖರ್ಚು ಮಾಡಿದೆ. 6000 ಸಾವಿರ ವರ್ಷಗಳ ಕಥೆಯನ್ನು ಸಿನಿಮಾ ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ