AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ರಿಲೀಸ್ ದಿನಾಂಕ ಘೋಷಿಸಿದ ‘ಕಲ್ಕಿ 2898 ಎಡಿ’ ತಂಡ; ಕಾಯಬೇಕು ಮತ್ತಷ್ಟು ಸಮಯ

Kalki 2898 AD Movie: ‘ಕಲ್ಕಿ 2898 ಎಡಿ’ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ ಎನ್ನುವ ಬಗ್ಗೆ ಮೊದಲಿನಿಂದಲೂ ಸುದ್ದಿ ಹರಿದಾಡುತ್ತಲೇ ಇತ್ತು. ಆದರೆ, ಇಷ್ಟು ದಿನಗಳ ಕಾಲ ತಂಡ ಈ ಬಗ್ಗೆ ಮೌನ ವಹಿಸಿತ್ತು. ಈಗ ಈ ಬಗ್ಗೆ ಘೋಷಣೆ ಆಗಿದೆ.

ಹೊಸ ರಿಲೀಸ್ ದಿನಾಂಕ ಘೋಷಿಸಿದ ‘ಕಲ್ಕಿ 2898 ಎಡಿ’ ತಂಡ; ಕಾಯಬೇಕು ಮತ್ತಷ್ಟು ಸಮಯ
ಕಲ್ಕಿ ತಂಡ
ರಾಜೇಶ್ ದುಗ್ಗುಮನೆ
|

Updated on:Apr 27, 2024 | 5:41 PM

Share

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಮೇ 9ರಂದು ರಿಲೀಸ್ ಆಗಲಿದೆ ಎಂದು ತಂಡ ಈ ಮೊದಲು ಹೇಳಿಕೊಂಡಿತ್ತು. ಆದರೆ, ಸಿನಿಮಾದ ಪ್ರಚಾರ ಕಾರ್ಯದಲ್ಲಿ ತಂಡ ಭಾಗಿ ಆಗಿಲ್ಲ. ಇದಕ್ಕೆ ಕಾರಣ ಆಗಿದ್ದು ಲೋಕಸಭೆ ಹಾಗೂ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ. ಇದರ ಅಬ್ಬರದ ಮಧ್ಯೆ ಸಿನಿಮಾ ರಿಲೀಸ್ ಮಾಡಿದರೆ ಕೈ ಸುಟ್ಟಿಕೊಳ್ಳಬೇಕು ಎಂಬುದು ತಂಡಕ್ಕೆ ಗೊತ್ತಾಗಿದೆ. ಈ ಕಾರಣಕ್ಕೆ ಹೊಸ ರಿಲೀಸ್ ದಿನಾಂಕವನ್ನು ತಂಡ ತಿಳಿಸಿದೆ. ಇಂದು (ಏಪ್ರಿಲ್ 27) ಸಂಜೆ ಈ ಬಗ್ಗೆ ಘೋಷಣೆ ಮಾಡಲಾಗಿದೆ.

‘ಕಲ್ಕಿ 2898 ಎಡಿ’ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ ಎನ್ನುವ ಬಗ್ಗೆ ಮೊದಲಿನಿಂದಲೂ ಸುದ್ದಿ ಹರಿದಾಡುತ್ತಲೇ ಇತ್ತು. ಆದರೆ, ಇಷ್ಟು ದಿನಗಳ ಕಾಲ ತಂಡ ಈ ಬಗ್ಗೆ ಮೌನ ವಹಿಸಿತ್ತು. ಈಗ ಈ ಬಗ್ಗೆ ಘೋಷಣೆ ಆಗಿದೆ. ಜೂನ್ 27 ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: ಸಂಭಾವನೆ ಕೊಟ್ಟೇ ಸುಸ್ತಾದ ‘ಕಲ್ಕಿ 2898 ಎಡಿ’ ನಿರ್ಮಾಪಕ; ನಟರು ಚಾರ್ಜ್ ಮಾಡಿದ್ದು ಅಷ್ಟಿಷ್ಟಲ್ಲ

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೊಡ್ಡ ಕಲಾವಿದರ ಬಳಗ ಇದೆ. ಹಿಂದಿಯ ದೀಪಿಕಾ ಪಡುಕೋಣೆ, ದಿಶಾ ಪಟಾಣಿ, ಅಮಿತಾಭ್​ ಬಚ್ಚನ್, ತಮಿಳಿನ ಕಮಲ್ ಹಾಸನ್ ನಟಿಸಿದ್ದಾರೆ. ಈ ಚಿತ್ರಕ್ಕೆ ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಜೆಟ್​ 500-600 ಕೋಟಿ ರೂಪಾಯಿ ಇದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಅಚ್ಚರಿ ಹೊರ ಹಾಕಿದ್ದಾರೆ.

ಸಿನಿಮಾ ಬಜೆಟ್ ಹೆಚ್ಚಲು ಕಲಾವಿದರ ಸಂಭಾವನೆಯೂ ಕಾರಣ ಎಂದು ಹೇಳಲಾಗುತ್ತಿದೆ. ಪ್ರಭಾಸ್ ಅವರು ಈ ಚಿತ್ರಕ್ಕಾಗಿ 150 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ. ದೀಪಿಕಾ, ಕಮಲ್ ಹಾಸನ್, ಅಮಿತಾಭ್ ತಲಾ 20 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗುತ್ತಿದೆ. ದಿಶಾ ಪಟಾಣಿ ಅವರು 10 ಕೋಟಿ ರೂಪಾಯಿ ಪಡೆದಿದ್ದಾರೆ. ಸುಮಾರು 200 ಕೋಟಿ ರೂಪಾಯಿ ಕಲಾವಿದರ ಸಂಭಾವನೆಗೆ ಖರ್ಚಾಗಿದೆ. ಸಿನಿಮಾಗಾಗಿ ದೊಡ್ಡ ದೊಡ್ಡ ಸೆಟ್​ಗಳನ್ನು ಹಾಕಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:41 pm, Sat, 27 April 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು