‘ಕಲ್ಕಿ 2898 ಎಡಿ’ ಚಿತ್ರದ ಎರಡನೇ ಪಾರ್ಟ್ ರಿಲೀಸ್​ಗೆ ಫಿಕ್ಸ್ ಆಯ್ತು ಮುಹೂರ್ತ; ಇಲ್ಲಿದೆ ವಿವರ

ಪ್ರಭಾಸ್ ‘ಸಲಾರ್ 2’ ಚಿತ್ರದಲ್ಲಿ ಬ್ಯುಸಿ ಆಗಬೇಕಿದೆ. ಈ ಕಾರಣಕ್ಕೆ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆದ ಬಳಿಕ ಅವರು 10 ದಿನ ವಿಶ್ರಾಂತಿ ಪಡೆಯಲಿದ್ದಾರೆ. ಆ ನಂತರ ಚಿತ್ರದ ಎರಡನೇ ಪಾರ್ಟ್​ ಶೂಟ್​ನ ಪ್ರಭಾಸ್ ಆರಂಭಿಸಲಿದ್ದಾರೆ ಎಂದು ಕೂಡ ವರದಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

‘ಕಲ್ಕಿ 2898 ಎಡಿ’ ಚಿತ್ರದ ಎರಡನೇ ಪಾರ್ಟ್ ರಿಲೀಸ್​ಗೆ ಫಿಕ್ಸ್ ಆಯ್ತು ಮುಹೂರ್ತ; ಇಲ್ಲಿದೆ ವಿವರ
ಕಲ್ಕಿ 2898 ಎಡಿ ಸಿನಿಮಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 04, 2024 | 8:47 AM

‘ಕಲ್ಕಿ 2898 ಎಡಿ’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದಿಂದ ಪ್ರಭಾಸ್ ಮತ್ತೊಂದು ಗೆಲುವು ಕಂಡಿದ್ದಾರೆ. ಈಗಾಗಲೇ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಚಿತ್ರದ ಗಳಿಕೆ 700 ಕೋಟಿ ರೂಪಾಯಿ ಸಮೀಪಿಸಿದೆ. ಸದ್ಯ ರಿಲೀಸ್ ಆಗಿರೋದು ಮೊದಲ ಭಾಗ ಮಾತ್ರ. ಈ ಚಿತ್ರಕ್ಕೆ ಎರಡನೇ ಭಾಗ ಇನ್ನಷ್ಟೇ ಬರಬೇಕಿದೆ. ನಿರ್ಮಾಪಕರ ಪ್ರಕಾರ ಈಗಾಗಲೇ ಎರಡನೇ ಪಾರ್ಟ್​ ಶೂಟಿಂಗ್ ಶೇ. 60ರಷ್ಟು ಪೂರ್ಣಗೊಂಡಿದೆ. ಹಾಗಾದರೆ ಸಿನಿಮಾ ರಿಲೀಸ್ ಯಾವಾಗ? ಈ ವರ್ಷವೇ ಚಿತ್ರ ಬಿಡುಗಡೆ ಆಗಲಿದೆಯೇ ಎಂಬಿತ್ಯಾದಿ ಪ್ರಶ್ನೆಗಳು ಅಭಿಮಾನಿಗಳಲ್ಲಿ ಇದ್ದವು. ಇದಕ್ಕೆ ಉತ್ತರ ಸಿಕ್ಕಿದೆ. ಮೂಲಗಳ ಪ್ರಕಾರ ಮುಂದಿನ ವರ್ಷ ಮೇ-ಜೂನ್ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಪ್ರಭಾಸ್ ಅವರು ಬ್ಯಾಕ್​ ಟು ಬ್ಯಾಕ್ ಸಿನಿಮಾಗಳನ್ನು ರಿಲೀಸ್ ಮಾಡುತ್ತಿದ್ದಾರೆ. ಕಳೆದ ವರ್ಷ ಡಿಸೆಂಬರ್ ಅಂತ್ಯಕ್ಕೆ ‘ಸಲಾರ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಈಗ ‘ಕಲ್ಕಿ 2898 ಎಡಿ’ ಚಿತ್ರದ ಮೂಲಕ ಅವರು ಗೆದ್ದು ಬೀಗಿದ್ದಾರೆ. ಈ ಚಿತ್ರದ ಎರಡನೇ ಭಾಗದ ಬಗ್ಗೆ ಮಾಹಿತಿ ಸಿಕ್ಕಿದೆ. ನಿರ್ಮಾಪಕರ ಪ್ರಕಾರ ಮೇ ಅಥವಾ ಜೂನ್ ತಿಂಗಳಲ್ಲಿ ಈ ಚಿತ್ರ ರಿಲೀಸ್ ಆಗಲಿದೆಯಂತೆ. ಅಂದರೆ ಸರಿಯಾಗಿ ಒಂದು ವರ್ಷಕ್ಕೆ ಚಿತ್ರ ಥಿಯೇಟರ್​ನಲ್ಲಿ ಬಿಡುಗಡೆ ಆಗಲಿದೆ.

ಈಗಾಗಲೇ ಸಿನಿಮಾದ ಶೂಟಿಂಗ್ ಶೇ. 60ರಷ್ಟು ಪೂರ್ಣಗೊಂಡಿದೆ. ಅಂದರೆ, ಇನ್ನು ಶೇ. 40ರಷ್ಟು ಶೂಟಿಂಗ್ ಮಾಡಿದರೆ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಂತೆ ಆಗುತ್ತದೆ. ಹೀಗಾಗಿ ಈ ವರ್ಷದ ಕೊನೆಯಲ್ಲಿ ಸಿನಿಮಾ ಶೂಟಿಂಗ್ ಆರಂಭ ಆಗಬಹುದು ಎನ್ನಲಾಗುತ್ತಿದೆ.

ಪ್ರಭಾಸ್ ಅವರು ‘ಸಲಾರ್ 2’ ಚಿತ್ರದಲ್ಲಿ ಬ್ಯುಸಿ ಆಗಬೇಕಿದೆ. ಈ ಕಾರಣಕ್ಕೆ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆದ 10 ದಿನ ವಿಶ್ರಾಂತಿ ಪಡೆದು ಆ ಬಳಿಕ ಚಿತ್ರದ ಎರಡನೇ ಪಾರ್ಟ್​ ಶೂಟ್​ನ ಪ್ರಭಾಸ್ ಆರಂಭಿಸಲಿದ್ದಾರೆ ಎಂದು ಕೂಡ ವರದಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ: ಪ್ರಭಾಸ್​ ಮೇಲೆ ದಿಶಾ ಪಟಾನಿಗೆ ಪ್ರೀತಿ? ನಟಿಯ ಹೊಸ ಟ್ಯಾಟೂ ನೋಡಿ ಜನರಿಗೆ ಅಚ್ಚರಿ

ಪ್ರಭಾಸ್ ಅವರು ‘ರಾಜಾ ಸಾಬ್’ ಸಿನಿಮಾದಲ್ಲೂ ಬ್ಯುಸಿ ಇದ್ದಾರೆ. ಇದಲ್ಲದೆ ಅವರು ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಸ್ಪಿರಿಟ್’ ಚಿತ್ರದ ಕೆಲಸದಲ್ಲೂ ಬ್ಯುಸಿ ಆಗಬೇಕಿದೆ. ಮುಂದಿನ ಎರಡು ವರ್ಷಗಳಲ್ಲಿ ಅವರ ನಟನೆಯ ಮೂರು ಸಿನಿಮಾಗಳು ರಿಲೀಸ್ ಆಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್