AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೈರವನಾಗಿ ಎಂಟ್ರಿಕೊಟ್ಟ ಪ್ರಭಾಸ್; ವೈರಲ್ ಆಯ್ತು ‘ಕಲ್ಕಿ 2898 ಎಡಿ’ ಚಿತ್ರದ ಹೊಸ ಪೋಸ್ಟರ್

ಮಾರ್ಚ್ 8 ಮಹಾಶಿವರಾತ್ರಿ. ಈ ವಿಶೇಷ ದಿನಕ್ಕೆ ಹಲವು ಸಿನಿಮಾಗಳ ಪೋಸ್ಟರ್ ರಿವೀಲ್ ಮಾಡಲಾಗಿದೆ. ಅದೇ ರೀತಿ ಪ್ರಭಾಸ್ ಅವರ ‘ಕಲ್ಕಿ 2898 ಎಡಿ’ ಚಿತ್ರದ ಲುಕ್ ರಿವೀಲ್ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಪ್ರಭಾಸ್ ಅವರ ಮುಖ ರಿವೀಲ್ ಆಗಿಲ್ಲ. ಈ ಪೋಸ್ಟರ್​ಗೆ ‘ಅವನ ಹೆಸರು ಭೈರವ’ ಎಂದು ಬರೆದುಕೊಂಡಿದ್ದಾರೆ.

ಭೈರವನಾಗಿ ಎಂಟ್ರಿಕೊಟ್ಟ ಪ್ರಭಾಸ್; ವೈರಲ್ ಆಯ್ತು ‘ಕಲ್ಕಿ 2898 ಎಡಿ’ ಚಿತ್ರದ ಹೊಸ ಪೋಸ್ಟರ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Mar 09, 2024 | 6:57 AM

Share

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಈ ಚಿತ್ರದ ಮೇಲೆ ಇರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯ ಪೋಸ್ಟರ್ ಒಂದನ್ನು ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಪ್ರಭಾಸ್ ಲುಕ್ ಗಮನ ಸೆಳೆದಿದೆ. ಅಷ್ಟೇ ಅಲ್ಲ ಪ್ರಭಾಸ್ ಅವರ ಪಾತ್ರದ ಹೆಸರು ಕೂಡ ರಿವೀಲ್ ಆಗಿದೆ. ಪ್ರಭಾಸ್ ಅವರು ಭೈರವನಾಗಿ ಮಿಂಚಲಿದ್ದಾರೆ. ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಮಾರ್ಚ್ 8 ಮಹಾಶಿವರಾತ್ರಿ. ಎಲ್ಲರೂ ಶಿವನ ಆರಾಧನೆ ಮಾಡಿದ್ದಾರೆ. ಈ ವಿಶೇಷ ದಿನದಂದು ಹಲವು ಸಿನಿಮಾಗಳ ಪೋಸ್ಟರ್ ರಿವೀಲ್ ಆಗಿದೆ. ಅದೇ ರೀತಿ ಪ್ರಭಾಸ್ ಅವರ ಲುಕ್ ರಿವೀಲ್ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಪ್ರಭಾಸ್ ಅವರ ಮುಖ ರಿವೀಲ್ ಆಗಿಲ್ಲ. ಈ ಪೋಸ್ಟರ್​ಗೆ ‘ಅವನ ಹೆಸರು ಭೈರವ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋಗೆ 10 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ.

ಇದನ್ನೂ ಓದಿ: ರಿವೀಲ್ ಆಯ್ತು ಅಮಿತಾಭ್ ಬಚ್ಚನ್ ಬ್ಯಾಂಕ್ ಬ್ಯಾಲೆನ್ಸ್; ಲೆಕ್ಕ ಮಾಡೋಕೆ ಎರಡು ಕೈ ಬೇಕು

ಈಗಾಗಲೇ ‘ಕಲ್ಕಿ 2898 ಎಡಿ’ ಸಿನಿಮಾ ಕಥೆಯ ಬಗ್ಗೆ ನಾಗ್ ಅಶ್ವಿನ್ ಅವರು ಹಿಂಟ್ ನೀಡಿದ್ದಾರೆ. ಸಿನಿಮಾದ ಟೈಮ್​ಲೈನ್ ಮಹಾಭಾರತದ ಜೊತೆ ಕನೆಕ್ಟ್ ಆಗಿರಲಿದೆ ಎಂದು ಅವರು ಹೇಳಿದ್ದಾರೆ. ‘ಈ ಚಿತ್ರದ ಕಥೆ ಮಹಾಭಾರತದ ಜೊತೆ ಆರಂಭ ಆಗಲಿದೆ ಹಾಗೂ ಕಲ್ಕಿ 2898 ಎಡಿಯಲ್ಲಿ ಕೊನೆಗೊಳ್ಳಲಿದೆ. ಸಿನಿಮಾದ ಕಥೆ ಆರು ಸಾವಿರ ವರ್ಷ ಸಾಗಲಿದೆ. ಕೃಷ್ಣನ ಅವತಾರವೂ ಇರಲಿದೆ’ ಎಂದಿದ್ದಾರೆ ಅವರು.

ಕಲ್ಕಿ ಕುರಿತ ಪೋಸ್ಟ್

‘ಕಲ್ಕಿ 2898 ಎಡಿ’ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ. ಹಲವು ವರ್ಷಗಳಿಂದ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?